CrimeNEWSನಮ್ಮರಾಜ್ಯ

ಅಶ್ಲೀಲ ವಿಡಿಯೋ ಯಾರು ಬಿಟ್ಟಿದ್ದು ಅಂತ ಎಸ್‌ಐಟಿ ತನಿಖೆಯಿಂದಲೇ ಸತ್ಯ ಹೊರಬರಲಿ: ದೇವರಾಜೇಗೌಡ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಆರಂಭವಾಗಿದ್ದು, ಈ ನಡುವೆ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ಬಳಿಕ ಈ ಕೇಸ್ ಹಲವು ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

ಇಂದು ಪ್ರಜ್ವಲ್ ರೇವಣ್ಣ ಅವರ ಬಳಿ 15 ವರ್ಷಗಳಿಂದ ಚಾಲಕನಾಗಿದ್ದ ಕಾರ್ತಿಕ್ ಸ್ಫೋಟಕ ಹೇಳಿಕೆ ನೀಡಿದ್ದು, ಹಾಸನದಲ್ಲಿ ಪೆನ್‌ಡ್ರೈವ್ ರಿಲೀಸ್ ಮಾಡಿದ್ದು ಯಾರು ಅನ್ನೋದರ ಬಗ್ಗೆಯೇ ಚರ್ಚೆಯಾಗುತ್ತಿದೆ.

ಈ ನಡುವೆಯೇ ಚಾಲಕ ಕಾರ್ತಿಕ್ ಇದೀಗ ಎಸ್‌ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಎಸ್‌ಐಟಿ ವಿಚಾರಣೆಗೆ ತೆರಳುವುದಕ್ಕೂ ಮುನ್ನ ಕಾರ್ತಿಕ್ ವಿಡಿಯೋವೊಂದನ್ನು ಮಾಡಿದ್ದು, ಬಿಜೆಪಿ ಮುಖಂಡ ದೇವರಾಜೇಗೌಡ ಅವರ ಮೇಲೆ ಆರೋಪ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆಗೆ ಸ್ಟೇ ತಂದ ಹಿನ್ನೆಲೆಯಲ್ಲಿ ಕಾನೂನು ಹೋರಾಟಕ್ಕೆ ವಕೀಲರೂ ಆದ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಭೇಟಿ ಆಗಿದ್ದೆ. ಈ ವೇಳೆ ಅವರಿಗೆ ಪೆನ್‌ಡ್ರೈವ್‌ನ ಒಂದು ಕಾಪಿ ಕೊಟ್ಟಿದ್ದೇನೆ. ಅವರು ಯಾವುದೇ ಸ್ವಾರ್ಥಕ್ಕೆ ಬಳಸಿಕೊಳ್ಳುವುದಿಲ್ಲ ಎಂದು ಹೇಳಿದ್ದನ್ನು ನಂಬಿ ಕೊಟ್ಟಿದ್ದೇನೆ. ಕಾಂಗ್ರೆಸ್ ನಾಯಕರಿಗೆ ನಾನು ಪೆನ್‌ಡ್ರೈವ್ ಕೊಟ್ಟಿಲ್ಲ. ತಾವು ಬಚಾವ್ ಆಗುವುದಕ್ಕೋಸ್ಕರ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ನನ್ನ ಮೇಲೆ ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಚಾಲಕ ಕಾರ್ತಿಕ್ ಅವರ ಹೇಳಿಕೆ ಬಿಡುಗಡೆ ಆಗುತ್ತಿದ್ದಂತೆ ಹಾಸನದ ಬಿಜೆಪಿ ಮುಖಂಡ ದೇವರಾಜೇಗೌಡ ಅವರು ಪ್ರತಿಕ್ರಿಯೆ ನೀಡಿದ್ದು, ನಾನೊಬ್ಬ ಬಿಜೆಪಿ ಮುಖಂಡ ಅನ್ನೋದಕ್ಕಿಂತ ನಾನು ವಕೀಲ. ನನ್ನ ಕಕ್ಷಿದಾರ ಅವರು. ವಕೀಲರಿಗೆ ಏನು ಕೊಡಬೇಕೋ ಅದನ್ನು ಕೊಟ್ಟಿದ್ದಾನೆ ಎಂದು ಹೇಳಿದ್ದಾರೆ.

ನನ್ನ ಹತ್ತಿರ ಬರೋದಕ್ಕೂ ಮುಂಚೆ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಚುನವಾಣೆ ಮಾಡಿದ್ದೇನೆ ಎಂದು ಕಾರ್ತಿಕ್‌ ಹೇಳಿದ್ದ ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ನನ್ನ ಜತೆ ಪುಟ್ಟರಾಜು ಎಂಬ ಮತ್ತೊಬ್ಬರಿದ್ದಾರೆ. ನಾವೆಲ್ಲರೂ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಆಗಿದ್ದೇವು ಎಂದಿದ್ದರು. ಇದಾದ ಮೇಲೆ ರಾಜ್ಯ ಬಿಜೆಪಿ, ಕೇಂದ್ರ ನಾಯಕರಿಗೆ ನಾನು ಪತ್ರ ಬರೆದಿದ್ದೇನೆ ಎಂದು ದೇವರಾಜೇಗೌಡ ತಿಳಿಸಿದ್ದಾರೆ.

ಇನ್ನು ವಕೀಲನಾಗಿ ಕಕ್ಷಿದಾರನ ಬಳಿ ನಾನು ಸಾಕ್ಷಿ ಕೇಳಿದ್ದಾನೆ. ಕಾಂಗ್ರೆಸ್‌ನವರ ಬಳಿ ಆತ ಹೋಗಿದ್ದಾನೆ. ನಾನು ಚುನಾವಣೆಯಲ್ಲಿ ನಿಂತಾಗ ಪೆನ್‌ಡ್ರೈವ್ ಬಳಸಿಕೊಳ್ಳಬಹುದಿತ್ತು. ಇದೀಗ ಎಸ್‌ಐಟಿ ತನಿಖೆಯಲ್ಲಿ ಎಲ್ಲವೂ ಬಯಲಾಗಲಿದೆ. ನನ್ನಿಂದ ಯಾರಿಗೆ ಪೆನ್‌ಡ್ರೈವ್ ಹೋಗಿದೆ ಅನ್ನೋ ಸತ್ಯ ಹೊರ ಬರಲಿ ಎಂದು ದೇವರಾಜೇಗೌಡ ಹೇಳಿದ್ದಾರೆ.

Leave a Reply

error: Content is protected !!
LATEST
ಬನ್ನೂರು: ತುರಗನೂರಿನಲ್ಲಿ ಪತಿಯಿಂದಲೇ ಭಜರಂಗಿ ಸಿನಿಮಾ ನಟಿ ವಿದ್ಯಾ ಕೊಲೆ ಬರ ಪರಿಹಾರ ಹಣ ಸಾಲಕ್ಕೆ ಜಮಾ: ಮಾದಾಪುರ ಕೆನರಾ ಬ್ಯಾಂಕ್‌ಗೆ ರೈತರ ಮುತ್ತಿಗೆ ರಾಯಚೂರು: ಕೊರವಿಹಾಳದಲ್ಲಿ ಬೀದಿ ನಾಯಿ ದಾಳಿಗೆ 4 ವರ್ಷ ಹೆಣ್ಣು ಮಗು ಬಲಿ ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತ, 35ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಮನೆಯಲ್ಲೇ ಬಿಟ್ಟು ಕೆಲಸಕ್ಕೆ ಹೋದ ದಂಪತಿ: ಸಂಪ್‌ಗೆ ಬಿದ್ದು ಮಗು ಸಾವು ಜೂನ್​ 4ರಿಂದ ಗೂಗಲ್ ಪೇ ಕಾರ್ಯ ನಿರ್ವಹಿಸುದಿಲ್ಲ : ಅಚ್ಚರಿ ಮೂಡಿಸಿದ ನ್ಯೂಸ್‌ KSRTC: ಬಸ್‌ ಕಂಪನಿಯೇ ಪ್ರಮಾಣಪತ್ರ ಕೊಟ್ಟಿಲ್ಲ- ಕೆಎಂಪಿಎಲ್ ಕಡಿಮೆ ಅಂತ ನೌಕರರಿಗೆ ಮೆಮೋ ಕೊಡುವ ಅಧಿಕಾರಿಗಳು !? ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ