NEWSಸಂಸ್ಕೃತಿ

ಪ್ರತಿಯೊಬ್ಬರೂ ಕನ್ನಡದಲ್ಲೇ ಮಾತನಾಡುವ, ವ್ಯವಹರಿಸುವ ಪ್ರತಿಜ್ಞೆಗೈಯ್ಯೋಣ: ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇವಲ ಅಭಿಮಾನದಿಂದ ಭಾಷೆಯ ರಕ್ಷಣೆ ಸಾಧ್ಯ ಇಲ್ಲ. ಪ್ರತಿಯೊಬ್ಬ ಕನ್ನಡಿಗನೂ ರಾಜ್ಯದಲ್ಲಿ ಕನ್ನಡದಲ್ಲೇ ಮಾತನಾಡುವ, ವ್ಯವಹರಿಸುವ ಪ್ರತಿಜ್ಞೆಗೈಯ್ಯೋಣ. ಕನ್ನಡವನ್ನು ಬಳಸೋಣ, ಬೆಳೆಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಎಕ್ಸ್‌ ಮಾಡಿರುವ ಅವರು, ಕನ್ನಡದ ಭಾಷೆಗೆ ತನ್ನದೇ ಆದ ಅಸ್ಮಿತೆಯಿದೆ. ಅದು ಬಹುತ್ವವನ್ನು ಗೌರವಿಸುವ ಮತ್ತು ಒಕ್ಕೂಟದ ಹಿತವನ್ನು ಕಾಯುವ ಬಾಳನೋಟದ ಅಸ್ಮಿತೆ ಎಂದು ಹೇಳಿದ್ದಾರೆ.

ಇನ್ನು ಇದು ಪಂಪನಿಂದ ಕುವೆಂಪು ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬೆಳೆದುಬಂದಿರುವ ಜೀವನದರ್ಶನ. ಇದನ್ನೇ ಪಂಪ “ಮಾನವ ಕುಲ ತಾನೊಂದೇ ವಲಂ” ಎಂದು ಹೇಳಿದ್ದು ಎಂದು ತಿಳಿಸಿದ್ದಾರೆ.

ಕನ್ನಡ ಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ. ಅದು ಕೇವಲ ಶಬ್ದ-ವಾಕ್ಯಗಳಲ್ಲ. ಭಾಷೆಯಲ್ಲಿ ಅದನ್ನಾಡುವ ಮನುಷ್ಯನ ಆಳವಾದ ಭಾವನೆಗಳಿರುತ್ತವೆ, ಪರಸ್ಪರ ಸಂಬಂಧಗಳಿರುತ್ತವೆ, ತನ್ನತನದ ಪ್ರಜ್ಞೆ ಇರುತ್ತದೆ ಎಂದು ಹೇಳಿದ್ದಾರೆ.

ಅದು ನಮ್ಮ ಸಂಸ್ಕೃತಿ, ಇತಿಹಾಸ, ನೆಲ-ಜಲದ ಸಂಪತ್ತು ಸೇರಿದಂತೆ ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಕನ್ನಡ ಭಾಷೆ ಈ ಅಸ್ಮಿತೆಯ ಜೀವಧಾತು ಎಂದು ಅಭಿಪ್ರಾಯ ಪಟ್ಟಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ