ಬೆಂಗಳೂರು: 2025ರಲ್ಲಿ ಬಿಬಿಎಂಪಿ ಮುಕ್ತ ನಗರವನ್ನಾಗಿ ಮಾಡಲು ನಾವೆಲ್ಲರೂ ಶ್ರಮವಹಿಸಿ ಕಾರ್ಯನಿರ್ವಹಿಸಬೇಕೆಂದು ಮುಖ್ಯ ಆರೋಗ್ಯಾಧಿಕಾರಿಯಾದ ಡಾ.ಸೈಯದ್ ಸಿರಾಜುದ್ದಿನ್ ಮದನಿ ಆರೋಗ್ಯ ಸಿಬ್ಬಂದಿಗಳಲ್ಲಿ ಮನವಿ ಮಾಡಿದ್ದಾರೆ.
ವಿಶ್ವ ಕ್ಷಯ ರೋಗ ದಿನಾಚರಣೆಯ ಅಂಗವಾಗಿ ಪಾಲಿಕೆಯ ಆರೋಗ್ಯ ವಿಭಾಗದ ವತಿಯಿಂದ ಪಾಲಿಕೆ ಕೇಂದ್ರ ಕಚೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು.
ಕ್ಷಯ ರೋಗ ನಿರ್ಮೂಲನೆ ಆರೋಗ್ಯ ಸಿಬ್ಬಂದಿಯಿಂದ ಮಾತ್ರ ಸಾಧ್ಯವಿಲ್ಲ. ನಾಗರಿಕರು ಇದಕ್ಕೆ ಕೈ ಜೋಡಿಸಿದರೆ ಮಾತ್ರ ನಾವು ತ್ವರಿತಗತಿಯಲ್ಲಿ ಕ್ಷಯ ರೋಗವನ್ನು ನಿರ್ಮೂಲನೆ ಮಾಡಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಾಗರಿಕರಿಗೆ ಕ್ಷಯ ರೋಗದ ಕುರಿತು ಹೆಚ್ಚು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಕ್ಷಯರೋಗ ಬಂದವರು ಔಷಧಗಳನ್ನು ಸರಿಯಾಗಿ ತೆಗೆದುಕೊಂಡರೆ ಮಾತ್ರ ನಿರ್ಮೂಲನೆ ಆಗಲು ಸಾಧ್ಯ. ಆದ್ದರಿಂದ ಕ್ಷಯ ರೋಗ ಬಂದವರು ಆರು ತಿಂಗಳ ಕಾಲ ಔಷಧಗಳನ್ನು ತಪ್ಪದೆ ಪಡೆದುಕೊಳ್ಳಬೇಕು. ಈ ಸಂಬಂಧ ನಾಗರಿಕರಲ್ಲಿ ಹೆಚ್ಚು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು.
ವಾರ್ಡ್ ಮುಕ್ತ ಕ್ಷಯ ರೋಗ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕ್ಷಯ ರೋಗ ನಿರ್ಮೂಲನೆಯು ನಿರೀಕ್ಷೆಗೂ ಮೀರಿ ನಿಯಂತ್ರಣಕ್ಕೆ ಬಂದಿದ್ದು, ಅದರ ಮೇಲೆ ಮತ್ತಷ್ಟು ಪರಿಣಾಮಕಾರಿಯಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಾರ್ಡ್ ಮುಕ್ತ ಹಾಗೂ ಬಿಬಿಎಂಪಿ ಮುಕ್ತ ಕ್ಷಯರೋಗ ನಗರವನ್ನಾಗಿ ಮಾಡಲಾಗುವುದೆಂದು ಹೇಳಿದರು.
ಕ್ಷಯ ರೋಗ ನಿರ್ಮೂಲನೆಗೆ ಕ್ರಮ: ಭಾರತದ ರಾಷ್ಟ್ರೀಯ ಟಿಬಿ ನಿರ್ಮೂಲನ ಕಾರ್ಯಕ್ರಮ (NTEP)ದ ಮೂಲಕ ಬಿಬಿಎಂಪಿಯ 143 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 6 ಸಮುದಾಯ ಆರೋಗ್ಯ ಕೇಂದ್ರಗಳು, 26 ಹೆರಿಗೆ ಕೇಂದ್ರಗಳು, 230 ನಮ್ಮ ಕ್ಲಿನಿಕ್ ಗಳು ಮತ್ತು 10 ವೈದ್ಯಕೀಯ ಕಾಲೇಜುಗಳು ಮತ್ತು ಖಾಸಗಿ ವಲಯದಲ್ಲಿಯೂ ಸೌಲಭ್ಯಗಳಿವೆ.
ಇನ್ನು ಹೆಚ್ಚುವರಿಯಾಗಿ, ಸಾರ್ವಜನಿಕ ವಲಯವು 147 ಸೂಕ್ಷ್ಮದರ್ಶಕ ಕೇಂದ್ರಗಳು, 10 CBNAAT ಕೇಂದ್ರಗಳು ಮತ್ತು ಕ್ಷಯ ಪರೀಕ್ಷೆಗಾಗಿ 12 TRUENAAT ಕೇಂದ್ರಗಳಿವೆ. ಈ ಸೇವೆಗಳು ಖಾಸಗಿ ವಲಯದಲ್ಲಿಯೂ ಲಭ್ಯವಿದೆ. 2023 ರಿಂದ, ಪ್ರಧಾನ ಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನ(PMTBMBA) ಯೋಜನೆಯಡಿಯಲ್ಲಿ, 3,120 ಕ್ಷಯ ರೋಗಿಗಳು ನಿಕ್ಷಯ್ ಮಿತ್ರರು(ದಾನಿಗಳು) ವಿತರಿಸಿದ 11,598 ಪೌಷ್ಠಿಕಾಂಶ ಕಿಟ್ಗಳನ್ನು ಪಡೆದಿದ್ದಾರೆ.
100 ದಿನಗಳ ಕ್ಷಯರೋಗ ಅಭಿಯಾನ ವರದಿ:(7ನೇ ಡಿಸೆಂಬರ್ 2024 ರಿಂದ 18ನೇ ಮಾರ್ಚ್ 2025 ರವರೆಗಿನ ವರದಿ):
- ಒಟ್ಟು ಗುರಿ ದುರ್ಬಲ ಜನಸಂಖ್ಯೆ 11,30,448 • ಒಟ್ಟು ಗುರಿ ದುರ್ಬಲ ಜನಸಂಖ್ಯೆಯನ್ನು ಪರೀಕ್ಷಿಸಲಾಗಿದೆ 13,13,902 (116%) • ಸೂಕ್ಷ್ಮದರ್ಶಕದ ಅಡಿಯಲ್ಲಿ ಪರೀಕ್ಷಿಸಲಾದ ಒಟ್ಟು ಸಂಖ್ಯೆ 18,400 (31%)
- NAAT ಅಡಿಯಲ್ಲಿ ಪರೀಕ್ಷಿಸಲಾದ ಒಟ್ಟು ಸಂಖ್ಯೆ 28,600 (61%) • ಎಕ್ಸ್-ರೇ ಅಡಿಯಲ್ಲಿ ಪರೀಕ್ಷಿಸಲಾದ ಒಟ್ಟು ಸಂಖ್ಯೆ 12,500 (15%) • ಅಭಿಯಾನದ ಸಮಯದಲ್ಲಿ ಕ್ಷಯರೋಗ ಧೃಢಪಟ್ಟ ರೋಗಿಗಳು 4,010
ಬಿಬಿಎಂಪಿ ವ್ಯಾಪ್ತಿಯಲ್ಲಿ ಕ್ಷಯರೋಗ ಪ್ರಮಾಣ (2023 ರಲ್ಲಿ 15,543 ಪ್ರಕರಣಗಳಿಂದ 2024 ರಲ್ಲಿ 14,059 ಕ್ಕೆ) ಮತ್ತು ಮರಣ ಪ್ರಮಾಣ (2023 ರಲ್ಲಿ 750 ಸಾವುಗಳಿಂದ 2024 ರಲ್ಲಿ 702 ಕ್ಕೆ) ಕಡಿಮೆಯಾಗಿದೆ.
ಆರೋಗ್ಯ ತಪಾಸಣೆ: ಬಿಬಿಎಂಪಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ, ಕ್ಷಯ ರೋಗಿಗಳಿಗೆ ಪೌಷ್ಠಿಕಾಂಶ ಕಿಟ್ಗಳನ್ನು ವಿತರಿಸಲಾಯಿತು. ಅದರ ಜೊತೆಗೆ ಪಾಲಿಕೆ ಸಿಬ್ಬಂದಿ/ನಾಗರಿಕರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ವೇಳೆ ಟಿ.ಬಿ ಕಾರ್ಯಕ್ರಮ ಅಧಿಕಾರಿಯಾದ ಡಾ. ಸುರೇಶ್, ಆರೋಗ ಸಿಬ್ಬಂದಿಗಳು, ಎನ್.ಜಿ.ಓ. ಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...
ಅಭಿವೃದ್ಧಿಗೆ ಹಣ ಇಲ್ಲ ಅಂತ ಸುಳ್ಳು ಎರಚುವ ಬಿಜೆಪಿಗೆ ನಮ್ಮ ಸವಾಲ್: ಸಿಎಂ
ಮಂಡ್ಯ: ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು...
ಇಂದು ಕರೆದಿದ್ದ KSRTC ನೌಕರರ ಸಂಧಾನ ಸಭೆಯಲ್ಲಿ ಕಾಲವಕಾಶ ಕೇಳಿದ ಆಡಳಿತ ಮಂಡಳಿ- ಆ.2ಕ್ಕೆ ಸಭೆ ಮುಂದೂಡಿಕೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗಸ್ಟ್ 5ರಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೋಟಿಸ್...