NEWSಕೃಷಿನಮ್ಮಜಿಲ್ಲೆ

ಮಧ್ಯಮ ವರ್ಗದ ಆರ್ಥಿಕ ಸ್ವಾವಲಂಬನೆಗೆ ಲಘು ವಾಹನಗಳು ಸಹಕಾರಿ: ಸರ್ಕಲ್ ಇನ್ಸ್‌ಪೆಕ್ಟರ್ ರಾಘವೇಂದ್ರ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಲಘು ವಾಹನಗಳು ಸರಕುಗಳನ್ನು ಒಂದೆಡೆಯಿಂದ ಮತ್ತೊಂದೆಡೆ ಸಾಗಣೆ ಮಾಡಲು ಮತ್ತು ರೈತರು ಹಾಗೂ ಮಧ್ಯಮ ವರ್ಗ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಹಕಾರಿಯಗಲಿವೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಜಿ.ಕೆ.ರಾಘವೇಂದ್ರ ಅಭಿಪ್ರಾಯಪಟ್ಟರು.

ಪಟ್ಟಣದ ಪೊಲೀಸ್ ಠಾಣೆಯ ಮುಂಭಾಗ ನೂತನವಾಗಿ ವಾಹನಗಳ ಸೇಲ್ಸ್ ಅಂಡ್ ಸರ್ವಿಸಸ್ ಮಳಿಗೆ ಉದ್ಘಾಟಿಸಿ ಮಾತನಾಡಿದರು.

ಅಶೋಕ್ ಲೇಲ್ಯಾಂಡ್ ಕಂಪನಿ ಲಘು ಮತ್ತು ಬಾರಿ ವಾಹನಗಳ ತಯಾರಿಕೆಯಲ್ಲಿ ಅತ್ಯಂತ ಪ್ರಮುಖವಾಗಿದ್ದು, ಇದು ರೈತರ ಹಾಗೂ ಮಧ್ಯಮ ವರ್ಗದ ಜನರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಹಕಾರಿಯಾಗಿದೆ. ರೈತರು ಬೆಳೆದ ಬೆಳೆಗಳನ್ನು ಜಮೀನಿನಿಂದ ಮಾರುಕಟ್ಟೆಗೆ ಸಾಗಣೆ ಮಾಡಲು ಬೇರೆಯವರನ್ನು ಅವಲಂಬಿಸುವ ಬದಲಾಗಿ ತಾವೇ ಲಘು ಪ್ರಮಾಣದ ವಾಹನವನ್ನು ಖರೀದಿ ಮಾಡುವ ಮೂಲಕ ಸಾಗಣೆ ವೆಚ್ಚ ಮತ್ತು ತಮ್ಮ ಬೆಳೆಗಳ ಸುರಕ್ಷತೆಯನ್ನು ಕಾಪಾಡಿಕೊಳ್ಳಬಹುದು ಎಂದರು.

ಕಂಪನಿ ಪ್ರಾಂತೀಯ ವ್ಯವಸ್ಥಾಪಕ ಪ್ರೀತಂ ಕೃಷ್ಣಮೂರ್ತಿ ಮಾತನಾಡಿ, ದೇಶದ ಅಭಿವೃದ್ಧಿಗೆ ನಮ್ಮ ಕಂಪನಿಯು ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಅನೇಕ ರೀತಿಯ ಭಾರಿ ಮತ್ತು ಲಘು ವಾಹನಗಳ ತಯಾರಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.

ಮಾಲೀಕ ಸುಬ್ರಹ್ಮಣ್ಯ ಮಾತನಾಡಿ, ಈ ವಾಹನಗಳು ಬಹಳ ವರ್ಷಗಳಿಂದಲೂ ತಮ್ಮ ಭರವಸೆ ಹಾಗೂ ದೃಢತೆಯನ್ನು ಕಾಪಾಡಿಕೊಂಡು ಬಂದಿವೆ. ಮೈಸೂರು ಮತ್ತು ಕೊಡಗು ಜಿಲ್ಲೆಯ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪಿರಿಯಾಪಟ್ಟಣದಲ್ಲಿ ಇದರ ಶಾಖೆಯನ್ನು ತೆರೆಯಲಾಗಿದ್ದು ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದರು.

ತಂಬಾಕು ಮಂಡಳಿ ಮಾಜಿ ಉಪಾಧ್ಯಕ್ಷ ಬಸವರಾಜಪ್ಪ, ಅಶೋಕ್ ಲೈಲ್ಯಾಂಡ್ ಶೋ ರೂಂ ಮಾಲೀಕ ವಿಟ್ಲ ಹರೀಶ್, ರೋಟರಿ ಮಿಡ್ ಟೌನ್ ಅಧ್ಯಕ್ಷ ಎಂ.ಎಂ.ರಾಜೇಗೌಡ, ತೆಲುಗಿನ ಕುಪ್ಪೆ ನಾಗಣ್ಣ ಸೇರಿದಂತೆ ಕಂಪನಿಯ ಸಿಬ್ಬಂದಿಗಳು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ