CrimeNEWS

ಲಿಂಗಸುಗೂರು: ಸಾರಿಗೆ ನೌಕರರ ಮೇಲೆ ಪ್ರಯಾಣಿಕ ಹಲ್ಲೆ ಆರೋಪ- FIR ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಲಿಂಗಸುಗೂರು: ರಸ್ತೆ ಕಿರಿದಾದರಿಂದ ಸ್ವಲ್ಪ ಮುಂದೆ ಹೋಗಿ ಬಸ್‌ ನಿಲ್ಲಿಸಿದಕ್ಕೆ ಕುಪಿಗೊಂಡ ಪ್ರಯಾಣಿಕನೊಬ್ಬ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಸಾರಿಗೆ ನೌಕರರು ಆರೋಪಿಸಿದ್ದಾರೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ಲಿಂಗಸುಗೂರು ಘಟಕದ ನಿರ್ವಾಹಕ ಲಿಂಗಣ್ಣ ಮತ್ತು ಚಾಲಕ ಮಲ್ಲು ಕುಂಬಾರ ಎಂಬುವರು ಈ ಸಂಬಂಧ  ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹಲ್ಲೆ ಮಾಡಿದ ಪ್ರಯಾಣಿಕನನ್ನನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಲಿಂಗಸಗೂರು ಘಟಕದ ರೂಟ್‌ ನಂಬರ್ 105ರ ವಾಹನ ಲಿಂಗಸಗೂರು ನಿಂದ ಕಡದರಗಡ್ಡಿಗೆ ಹೋಗುವಾಗ ಯರಗೋಡಿ ಗ್ರಾಮದ ರಾಮಪ್ಪ ಹಾಲಬಾವಿ ಎಂಬುವರು ಬಸ್‌ ಹತ್ತಿದ್ದರು, ಅವರು ಇಳಿಯಬೇಕಿದ್ದ ಸ್ಥಳದಲ್ಲಿ ರಸ್ತೆ ಕಿರಿದಾದರಿಂದ ಸ್ವಲ್ಪ ಮುಂದೆ ಹೋಗಿ ನಿಲ್ಲಿಸಿದ್ದಕ್ಕೆ ನಿರ್ವಾಹಕ ಹಾಗೂ ಚಾಲಕರ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಹಲ್ಲೆ ಸಂಬಂಧ FIR ಕೂಡ ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಆದರೆ ವಿಡಿಯೋದಲ್ಲಿ ಬಸ್‌ ಸಿಬ್ಬಂದಿಯೇ ಮೊದಲು ಪ್ರಯಾಣಿಕನ ಮೇಲೆ ಹಲ್ಲೆ ಮಾಡಿರುವುದು ಕಂಡು ಬರುತ್ತಿದ್ದು ನಂತರ ಆ ಪ್ರಯಾಣಿಕನನ್ನು ಬಸ್‌ನಿಂದ ಎಳೆದುಹಾಕಿ ನಂತರ ಹೊಡಿ ಹೊಡಿ ಎಂದು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.

ಇಲ್ಲಿ ಪ್ರಯಾಣಿಕ ಮತ್ತು ಸಾರಿಗೆ ಸಿಬ್ಬಂದಿ ಅಂದರೆ ಎರಡು ಕಡೆಯೂ ತಪ್ಪಾಗಿರುವುದು ಕಂಡು ಬರುತ್ತಿದ್ದು, ಈ ಸಂಬಂಧ ಪೊಲೀಸರು ವಿಚಾರಣೆ ನಡೆಸಿದ ಬಳಿಕ ಸತ್ಯಾಸತ್ಯತೆ ತಿಳಿದು ಬರಲಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ