ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ “ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ” ಪುರಸ್ಕೃತರಾದ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಸ್ತಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ಎದೆಯ ಹಣತೆ ಕೃತಿಗಾಗಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ ಹಾಗೂ ಕೃತಿಯ ಅನುವಾದಕಿ ದೀಪಾ ಭಸ್ತಿ ಅವರು ನಮ್ಮ ಭಾಷೆಗೆ ಬೂಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ನಾಡು ಹೆಮ್ಮೆಪಡುವ ಕ್ಷಣ ಎಂದರು.
ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್, ದೀಪಾ ಭಸ್ತಿ ಅವರಿಗೆ ಸರ್ಕಾರದಿಂದ ತಲಾ ₹10 ಲಕ್ಷ ಪುರಸ್ಕಾರ ನೀಡಲಾಗುವುದು. ಇದರ ಜತೆಗೆ ಬಾನು ಅವರ ಕತೆಗಳನ್ನು ಇಂಗ್ಲಿಷ್ಗೆ ಪ್ರಕಟಿಸಲು, ಅನುವಾದಕ್ಕೂ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.
ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ತೊಡಗಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದ ಅವರು, ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ, ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.
ಇನ್ನು ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಧ್ವನಿಯಾಗಿ ಮೌಢ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ ಎಂದು ಹೇಳಿದರು.
ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ಇನ್ನು ಇಂಥದ್ದೊಂದು ಮೇರು ಪ್ರಶಸ್ತಿಗೆ ಭಾಜನರಾದ ಬಾನು ಅವರನ್ನು ಸನ್ಮಾನಿಸುವುದು ಕನ್ನಡಿಗನಾಗಿ ನನಗೆ ಸಂತೋಷದ ವಿಷಯ. ಇಂತಹ ಇನ್ನಷ್ಟು ಬರಹಗಳು ಅವರಿಂದ ಹೊರಬರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಹೇಳಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Related

You Might Also Like
ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು: ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ...
ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ
ಮೈಸೂರು: ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಇಂದು ಭೇಟಿ ನೀಡಿ ಆಹಾರ ಧಾನ್ಯಗಳ...
ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು: ಆಯುಕ್ತ ಸತೀಶ್
ಬೆಂಗಳೂರು: ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಪಾಲಿಕೆ ವ್ಯಾಪ್ತಿಯ ರಾಜರಾಜೇಶ್ವರಿನಗರ ವಲಯದಲ್ಲಿ...
ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದರೆ ನಿವೇಶನ ಮಾಲೀಕರಿಗೆ ದಂಡ ವಿಧಿಸಿ: ಸ್ನೇಹಲ್
ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ...
KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ...
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...