NEWSನಮ್ಮಜಿಲ್ಲೆನಮ್ಮರಾಜ್ಯ

ಕಗ್ಗದಾಸಪುರ ಅಭಿವೃದ್ಧಿ ಹೆಸರಿನಲ್ಲಿ ಹಣ ಲೂಟಿ: ಮೋಹನ್ ದಾಸರಿ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿರುವ ಕಗ್ಗದಾಸಪುರ ಕೆರೆಯ ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ಲೂಟಿ ಮಾಡಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಗಂಭೀರ ಆರೋಪಿಸಿದ್ದಾರೆ.

ನಗರದಲ್ಲಿ ಇಂದು ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋಹನ್ ದಾಸರಿ, ಸಿ.ವಿ.ರಾಮನ್ ನಗರ ಬಿಜೆಪಿ ಶಾಸಕ ಎಸ್. ರಘು 2009 ರಿಂದಲೇ ಕಗ್ಗದಾಸಪುರ ಕೆರೆಯ ಅಭಿವೃಧ್ದಿ ಮಾಡಲು ಮುಂದಾಗಿದ್ದು, 16 ವರ್ಷಗಳಾದರೂ ಕೆರೆಯ ಪರಿಸ್ಥಿತಿ ಹಾಗೇ ಇದೆ, ಆಮೆಗತಿಯಲ್ಲಿ ಸಾಗಿದ್ದರೂ ಈವರೆಗೆ ಮುಗಿಯಬೇಕಿತ್ತು. ಕೋಟಿ ಕೋಟಿಗಳು ಖರ್ಚಾಗುತ್ತಲೇ ಇದೆ, ಕೆಲಸಗಳು ಮಾತ್ರ ಮುಂದೆ ಹೋಗುತ್ತಿಲ್ಲ ಎಂದು ಆರೋಪಿಸಿದರು.

ಇನ್ನು ಹಳೇ ಬಿಲ್ಲು, ಕೆಲಸಗಳಾಗದಿದ್ದರೂ ನಕಲಿ ಬಿಲ್ಲುಗಳು, ಕೆರೆಯ ಪ್ರಭಾವಿಗಳ ಅತಿಕ್ರಮಣಗಳನ್ನು ತೆರವುಗೊಳಿಸದಿರುವುದೇ ಕಗ್ಗದಾಸಪುರ ಕೆರೆಯ ಅಭಿವೃದ್ಧಿ ಅನ್ನಬೇಕಷ್ಟೇ. 2017 ರಲ್ಲಿ ಸ್ಥಳೀಯ ನಾಗರೀಕರು ಸೇರಿ ಕೆರೆ ಸ್ವಚ್ಛಗೊಳಿಸಲು ಮುಂದಾಗಿದ್ದರು. ನಮ್ಮೆಲ್ಲರ 26 ವಾರಗಳ ಪ್ರಯತ್ನದಿಂದ ಕಣ್ತೆರೆದ ಸಮ್ಮಿಶ್ರ ಸರ್ಕಾರ ಅಭಿವೃಧ್ದಿಗೆ ಅಂತ 2019 ರಲ್ಲಿ ಹಣ ಬಿಡುಗಡೆ ಮಾಡಿತ್ತು. ಮಾಹಿತಿ ಹಕ್ಕಿನ ಅನ್ವಯದಡಿ 2019 -20 ರಲ್ಲಿ 8 ಕೋಟಿ ಮತ್ತು 2023-24 ರಲ್ಲಿ 4 ಕೋಟಿ ಮಂಜೂರು ಮಾಡಲಾಗಿದೆ ಮತ್ತು ಎಸ್‌ಟಿಪಿಗೆ ಮಾತ್ರವೇ 27 ಕೋಟಿ ಮಂಜೂರು ಮಾಡಲಾಗಿತ್ತು ಎಂದು ಮೋಹನ್ ದಾಸರಿ ಹೇಳಿದರು.

ಕಳೆದ ಮೂರು ವರ್ಷದಲ್ಲಿ 12 ಕೋಟಿ ರೂಪಾಯಿ ಅನುದಾನ ಕಗ್ಗದಾಸನಪುರ ಅಭಿವೃದ್ಧಿಗೆ ನೀಡಲಾಗಿದೆ. 2021 ರಲ್ಲಿ ಶಾಸಕ ಎಸ್. ರಘು ಕಗ್ಗದಾಸಪುರ ಕೆರೆಯ ಅಭಿವೃದ್ಧಿಯ ಬಗ್ಗೆ ಮಾತನಾಡುವಾಗ, 45 ದಿನದಲ್ಲಿ ಹೂಳೆತ್ತುವ ಕೆಲಸ ಮುಗಿಯಲಿದೆ ಮತ್ತು ಇತರೆ ಕೆಲಸಗಳನ್ನು ಮುಗಿಸಿ 6 ತಿಂಗಳಲ್ಲಿ ಸಂಪೂರ್ಣ ಅಭಿವೃದ್ಧಿ ಕೆಲಸಗಳನ್ನು ಮುಗಿಸಲಾಗುವುದೆಂದು ಮಾದ್ಯಮಗಳ ಮುಂದೆ ಹೇಳಿದ್ದರು. ಆದರೆ, 2024ರ ಜೂನಲ್ಲಿ ನಾವು ಸ್ಥಳ ಪರೀಷಲನೆ ಮಾಡಿದಾಗಲೂ ಕೆರೆಯ ಪರಿಸ್ಥಿತಿ ಅದೇ ರೀತಿಯಿದೆ ಎಂದು ಕಿಡಿಕಾರಿದರು.

ಇನ್ನು ಕೋಟಿ ಕೋಟಿ ಹಣ ಸಮಯ ಸಮಯಕ್ಕೆ ಸರಿಯಾಗಿ ಖರ್ಚು ಮಾತ್ರ ಆಗುತ್ತಲೇ ಇದೆ. ಕೆರೆಯ ಅಭಿವೃದ್ಧಿ ಹೆಸರಲ್ಲಿ ಶಾಸಕ ಎಸ್. ರಘು ಹಗಲು ದರೋಡೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಾಹಿತಿಯೊಂದಿಗೆ ಬಿಎಂಟಿಎಫ್‌ ಅಥವಾ ಲೋಕಾಯುಕ್ತಕ್ಕೆ ದೂರು ನೀಡುವುದಕ್ಕೆ ಮುಂದಾಗುತ್ತೇವೆ ಎಂದು ಹೇಳಿದರು.

ಬಿಬಿಎಂಪಿ ಕಾರ್ಪೊರೇಟರ್, ಶಾಸಕ, ಸಂಸದ ಎಲ್ಲರೂ ಬಿಜೆಪಿಯವರೇ ಇದ್ದರೂ, ಸರ್ಕಾರ ಕೂಡ ಬಿಜೆಪಿಯದ್ದೇ ಇದ್ದಾಗಲೂ ಕೆರೆ ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುವುದು, ಅಕ್ರಮದ ಬಗ್ಗೆ ದೂರು ನೀಡಲಾಗುವುದು ಎಂದರು.

ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಜಗದೀಶ್ ಬಾಬು ಮಾತನಾಡಿ, ಕೆರೆ ಅಭಿವೃದ್ಧಿ ವಿಚಾರದಲ್ಲಿ ಏನೇನು ಅವ್ಯವಹಾರ ಆಗಿದೆ ಎನ್ನುವ ಮಾಹಿತಿ ಪಡೆದಿದ್ದೇವೆ, ಇದನ್ನು ಜನರಿಗೆ ತಿಳಿಸುತ್ತೇವೆ. 4 ಕೋಟಿ ರೂಪಾಯಿ ಪೋಲಾಗಿದೆ. ಇದು ಎಲ್ಲಿ ಹೋಗಿದೆ ಎಂದು ತಿಳಿದುಕೊಳ್ಳುವುದು ಜನರ ಹಕ್ಕು. ಜನರಿಗೆ ಈ ಬಗ್ಗೆ ಮಾಹಿತಿ ಕೊಡಲಿ ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿ ಮುಖಂಡ ಹರಿಹರನ್ ಹಾಜರಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...