CrimeNEWSನಮ್ಮಜಿಲ್ಲೆ

ಮಾಗಡಿ: ಗ್ಯಾಸ್‌ ಗೀಸರ್ ವಿಷ ಅನಿಲ ಸೋರಿಕೆಯಾಗಿ ತಾಯಿ ಮಗ ಸಾವು

ವಿಜಯಪಥ ಸಮಗ್ರ ಸುದ್ದಿ

ಮಾಗಡಿ: ಗ್ಯಾಸ್‌ ಗೀಸರ್ ಸೋರಿಕೆಯಾಗಿ ತಾಯಿ ಮತ್ತು ಮಗ ಇಬ್ಬರು ಸ್ನಾನ ಗೃಹದಲ್ಲಿ ಅಸುನೀಗಿರುವ ಘಟನೆ ಪಟ್ಟಣದ ಜ್ಯೋತಿ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.

ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಜ್ಯೋತಿ ನಗರದ ನಿವಾಸಿಗಳಾದ ಶೋಭ (38), ದಿಲೀಪ್ (16) ಮೃತ ಅಮ್ಮ ಮಗ.

ಸ್ನಾನಕ್ಕೆ ಹೋದ ಮಗ ಎಷ್ಟೊತ್ತಾದರೂ ಬರಲಿಲ್ಲವಲ್ಲ ಎಂದು ತಾಯಿ ಶೋಭಾ ಅವರು, ಸ್ನಾನದ ಕೊಠಡಿ ಬಾಗಿಲು ತೆರೆದು ಒಳ ಹೋದಾಗ ಮಗ ಕೆಳಗೆ ಬಿದ್ದಿರುವುದನ್ನು‌ ಗಮನಿಸಿದ್ದಾರೆ.

ಆತನ ಸ್ಥಿತಿ ಕಂಡು ಗಾಬರಿಗೊಂಡು ಅವರು, ಮಗನನ್ನು ಹೊರಕ್ಕೆ ಕರೆತರಲು ಯತ್ನಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಅವರು ಸಹ ಅನಿಲ ಸೇವಿಸಿ ಪ್ರಜ್ಞೆ ತಪ್ಪಿ ಕೊನೆಯುಸಿರೆಳೆದಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಾಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಾಳಿಯಾಡಲು ಅವಕಾಶವಿರಲಿ: ಈ ಹಿಂದೆಯೂ ಗ್ಯಾಸ್‌ ಗೀಸರ್‌ ವಿಷ ಅನಿಲ ಸೇವಿಸಿ ಮೃತಪಟ್ಟ ಸಾಕಷ್ಟು ಪ್ರಕರಣಗಳು ನಡೆದಿದೆ. ಆದರೂ, ಜನ ಎಚ್ಚೆತ್ತುಕೊಂಡಿಲ್ಲ. ಗೀಸರ್‌ ಬಳಸುವಾಗ ಗಾಳಿಯಾಡಲು ಅವಕಾಶ ನೀಡಬೇಕು. ಆಗ ಅದರಲ್ಲಿನ ವಿಷ ಅನಿಲವು ಹೊರ ಹೋಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ