CrimeNEWSಕೃಷಿ

ಪಿರಿಯಾಪಟ್ಟಣದ ಕಿರಂಗೂರಿನಲ್ಲಿ ಆನೆ ದಾಳಿಗೆ ಜೋಳದ ಬೆಳೆ ನಾಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ : ತಾಲೂಕಿನ ಕಿರಂಗೂರು ಗ್ರಾಮದ ಜಮೀನಿಗೆ ಕಾಡಾನೆಗಳು ಹಿಂಡು ದಾಳಿಮಾಡಿ ಜೋಳದ ಬೆಳೆಯನ್ನು ನಾಶಪಡಿಸಿರುವ ಘಟನೆ ಜರುಗಿದೆ.

ತಾಲೂಕಿನ ಕಿರಂಗೂರು ಗ್ರಾಮದಲ್ಲಿ ಜ.19ರ ತಡರಾತ್ರಿ ನುಗ್ಗಿರುವ ಆನೆಗಳ ಹಿಂಡು ಗ್ರಾಮದ ಜ್ಯೋತಿ ಎಂಬುವವರಿಗೆ ಸೇರಿದ ಸರ್ವೆ ನಂ. 10 ರ ಜಮೀನಿನಲ್ಲಿ ಮತ್ತು ನಟರಾಜು ಎಂಬುವವರಿಗೆ ಸೇರಿದ ಸರ್ವೆ ನಂ.25 ರ ಹೊಲದಲ್ಲಿ ಬೆಳೆದಿದ್ದ ಬೆಳೆಯನ್ನು ನಾಶ ಮಾಡಿವೆ.

ಅನೇಕ ವರ್ಷಗಳಿಂದ ಇರದ ಆನೆದಾಳಿ ಇತ್ತೀಚೆಗೆ ಆನೆ ಕಂದಕಗಳು ಮುಚ್ಚಿಹೋಗಿದ್ದು, ಇವುಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ರಿಪೇರಿ ಮಾಡಿಸದ ಕಾರಣ ಆನೆಗಳು ನೇರವಾಗಿ ಪ್ರಸ್ತುತ ಜಮೀನುಗಳಿಗೆ ಬರುತ್ತಿದ್ದು ರೈತರಿಗೆ ನಷ್ಟ ಉಂಟುಮಾಡುತ್ತಿವೆ.

ಅಲ್ಲದೆ ರಾತ್ರಿವೇಳೆ ಜಮೀನಿಗೆ ನುಗ್ಗಿ ಓಡಾಡುತ್ತಿರುವುದರಿಂದ ಆನೆ ದಾಳಿಕೆ ಸಿಲುಕಿ ಫಸಲು ಇನ್ನಷ್ಟು ಹಾನಿಯಾಗುತ್ತಿದ್ದು ರೈತರಿಗೆ ತೊಂದರೆ ಉಂಟಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ಈ ಬಗ್ಗೆ ಅರಣ್ಯ ಇಲಾಖೆ ಶೀಘ್ರದಲ್ಲಿ ಕ್ರಮವಹಿಸಿ ಹಾನಿಗೊಳಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...