CrimeNEWSನಮ್ಮಜಿಲ್ಲೆ

ಮಂಡ್ಯದ ಪೂರ್ವ ಠಾಣಾ ಪೊಲೀಸರ ದರ್ಪ : ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ ತೀವ್ರ ಹಲ್ಲೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ವಿಚಾರಣೆ ನೆಪದಲ್ಲಿ ಮಂಡ್ಯದ ಪೂರ್ವ ಠಾಣಾ ಪೊಲೀಸರು ಮಹಿಳೆ ಮೇಲೆ ತೀವ್ರ ಹಲ್ಲೆ ಮಾಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಹೋರಾಟಗಾರರು ಮಹಿಳೆ ಪರ ಇಂದು ಹೋರಾಟ ಮಾಡುವುದಕ್ಕೆ ನಿರ್ಧರಿಸಿದ್ದಾರೆ.

ರೂಪಾದೇವಿ ಎಂಬ ಮಹಿಳೆಯ ಹಸುವೊಂದು ದಾರಿಯಲ್ಲಿ ತೆರಳುತ್ತಿದ್ದ ಮಹಿಳಾ ಪೇದೆಯ ಸ್ಕೂಟರ್​ಗೆ ಅಡ್ಡ ಬಂದಿದ್ದರಿಂದ ಮಹಿಳಾ ಪೇದೆ ವನಜಾಕ್ಷಿ ಬಿದ್ದು ಗಾಯಗೊಂಡಿದ್ದರು. ಬಳಿಕ ಪೇದೆ ವನಜಾಕ್ಷಿ ಸ್ಕೂಟರ್​ನಿಂದ ಬಿದ್ದು ಗಾಯಗೊಂಡಿರುವುದಕ್ಕೆ ಪರಿಹಾರ ಕೊಡಬೇಕು ಎಂದು ರೂಪಾದೇವಿಗೆ ಒತ್ತಡ ಹಾಕುತ್ತಿದ್ದಾರೆ.

ಈ ವೇಳೆ ಹಣ ನೀಡದಿದ್ದಕ್ಕೆ ವಿಚಾರಣೆ ನೆಪದಲ್ಲಿ ರೂಪಾದೇವಿಯನ್ನು ಠಾಣೆಗೆ ಕರೆಸಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡು ಮಹಿಳಾ ಪೇದೆ ವನಜಾಕ್ಷಿ ಹಲ್ಲೆ ಮಾಡಿರುವುದನ್ನು ಜಿಲ್ಲೆಯ ಹೋರಾಟಗಾರರು ಖಂಡಿಸಿದ್ದು, ಮಹಿಳೆ ರೂಪಾದೇವಿ ಪರ ಹಾಗೂ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ