NEWSನಮ್ಮಜಿಲ್ಲೆರಾಜಕೀಯ

ಮಂಡ್ಯ ಲೋಕಸಭಾ ಚುನಾವಣೆ: ಸ್ಟಾರ್ ಚಂದ್ರು ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೋಡ್ ಶೋ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಲೋಕಸಭಾ ಚುನಾವಣೆಯ ಮೆಗಾ ಫೈಟ್‌ಗೆ ಇಂದು ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂಟ್ರಿಯಾಗಿದ್ದಾರೆ. ಹುಸ್ಕೂರು ಗ್ರಾಮಕ್ಕೆ ಆಗಮಿಸಿದ ನಟ ದರ್ಶನ್ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ರೋಡ್ ಶೋ ನಡೆಸಿದ್ದು, ರಾಜಕೀಯ ಚದುರಂಗದಾಟಕ್ಕೆ ನಾಂದಿ ಹಾಡಿದ್ದಾರೆ.

ಇನ್ನು ಈ ಮೂಲಕ ಜಿಲ್ಲೆಯಲ್ಲಿ ಚುನಾವಣೆಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಅಸಲಿ ಸ್ಟಾರ್ ವಾರ್ ಈಗ ಶುರುವಾಗಿದೆ. ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್‌.ಡಿ. ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಕುಮಾರಸ್ವಾಮಿಗೆ ಎದುರಾಳಿಯಾಗಿ ಕಾಂಗ್ರೆಸ್ ಪಕ್ಷ ಸ್ಟಾರ್ ಚಂದ್ರು ಅವರನ್ನು ಕಣಕ್ಕಿಳಿಸಿದೆ. ಕುಮಾರಸ್ವಾಮಿ ವರ್ಸಸ್ ಸ್ಟಾರ್‌ ಚಂದ್ರು ಮೆಗಾ ಫೈಟ್‌ನಲ್ಲಿ ಪ್ರಚಾರ ರಂಗೇರಿದೆ.

ನಟ ದರ್ಶನ್ ನೋಡಲು ಮಂಡ್ಯದಲ್ಲಿ ಜನರು ಮುಗಿಬಿದ್ದಿದ್ದು, ಅಭಿಮಾನಿಗಳು ಶಿಳ್ಳೆ, ಚಪ್ಪಾಳೆ ಹಾಕಿದ್ದಾರೆ. ರೋಡ್‌ ಶೋ ಉದ್ದಕ್ಕೂ ಬಿಲ್ಡಿಂಗ್‌ಗಳ ಮೇಲೆ ಮಹಿಳೆಯರು ನಿಂತಿದ್ದ ದೃಶ್ಯ ಕಂಡು ಬಂದಿದೆ. ದರ್ಶನ್ ರೋಡ್ ಶೋಗೆ ಶಾಸಕ ನರೇಂದ್ರ ಸ್ವಾಮಿ, ಕದಲೂರು ಉದಯ್ ಸಾಥ್ ನೀಡಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ನಡೆಸಿದ ನಟ ದರ್ಶನ್ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ನಾನು ಮೊದಲೇ ಹೇಳಿ ಬಿಡ್ತೀನಿ. ನಾನು ಯಾವುದೇ ಪಕ್ಷದ ಪರ ಪ್ರಚಾರಕ್ಕೆ ಬರಲ್ಲ, ಬರೋದು ಇಲ್ಲ. ನಾನು ಪ್ರಚಾರಕ್ಕೆ ಬರೋದು ಬರೀ ವ್ಯಕ್ತಿ ಪರ. ಇದೇ 5 ವರ್ಷದ ಕೆಳಗೆ ಶಾಸಕರಾದ ನರೇಂದ್ರಣ್ಣ ಅವರು ಮಾಡಿದಂತಹ ಸಹಾಯವನ್ನು ನೆನಪಿಸಿಕೊಳ್ಳುತ್ತೇವೆ ಎಂದರು.

ಇನ್ನು, ಸುಮಮ್ಮ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿಲ್ಲ ಅಂದ್ರೆ ನಮಗೆ ಸಹಾಯ ಮಾಡಬೇಕು ಅಂತ ನರೇಂದ್ರ ಸ್ವಾಮಿ ಮೊದಲೇ ಕೇಳಿದ್ದರು. ಫಸ್ಟ್ ಬಂದವರಿಗೆ ಫಸ್ಟ್ ಆದ್ಯತೆ ನೀಡಿದ್ದೇನೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಅಮೂಲ್ಯವಾದ ಮತ ಹಾಕಿ ಎಂದು ದರ್ಶನ್ ಪ್ರೀತಿಯಿಂದ ಕೇಳಿ ಕೊಂಡಿದ್ದಾರೆ.

ಕಳೆದ ಬಾರಿಯ ಚುನಾವಣೆಯಲ್ಲಿ ಸುಮಲತಾ ಅವರ ಬೆನ್ನಿಗೆ ನಿಂತಿದ್ದ ದರ್ಶನ್ ಈ ಬಾರಿ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಪರ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಅಂದು ಮಗನ ವಿರುದ್ಧ ಪ್ರಚಾರ ಮಾಡಿ ಸುಮಲತಾ ರನ್ನು ಗೆಲ್ಲಿಸಿಕೊಂಡಿದ್ದ ದರ್ಶನ್‌, ಇಂದು ಕುಮಾರಸ್ವಾಮಿ ವಿರುದ್ಧ ಪ್ರಚಾರಕ್ಕೆ ಇಳಿದಿದ್ದಾರೆ.

ಇತ್ತ ಬಿಜೆಪಿ ಸೇರ್ಪಡೆ ಆದ ಬಳಿಕವೂ ಸುಮಲತಾ ಮೌನ ವಹಿಸಿದ್ದು, ಮಂಡ್ಯದಲ್ಲಿ ಬಹಿರಂಗ ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಎಚ್‌ಡಿಕೆ ಕಣದಲ್ಲಿದ್ದರೂ, ಮಂಡ್ಯ ಅಖಾಡದಲ್ಲಿ ಕಾಣಿಸಿಕೊಳ್ಳದ ಸುಮಲತಾ, ನನ್ನನ್ನು ಎಚ್‌ಡಿಕೆ ಅಹ್ವಾನಿಸಿಲ್ಲ ಎಂದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ