CrimeNEWSನಮ್ಮರಾಜ್ಯ

ಮಂಡ್ಯ: KSRTC ನಿಲ್ದಾಣದಲ್ಲಿ ಮಹಿಳೆಗೆ ಬಸ್‌ಡಿಕ್ಕಿ- ಹಿಂಬದಿ ಚಕ್ರಕ್ಕೆ ಸಿಲುಕಿ ಸಾವು

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಬಸ್ ಹತ್ತಲು ಬಂದ ವೇಳೆ ವೇಗವಾಗಿ ಬಂದ ಬಸ್‌ ಡಿಕ್ಕಿ ಹೊಡೆದ ಪರಿಣಾಮ  ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸ್ಥಳದಲ್ಲೇ  ಮೃತಪಟ್ವಿರುವ  ಘಟನೆ ಮಂಡ್ಯದ ಸಾರಿಗೆ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಪೂಜಾ ಎಂಬುವರೆ ಮೃತಪಟ್ಟ ಮಹಿಳೆ. ಮಹಿಳೆ ನಿಲ್ದಾಣಕ್ಕೆ ಬರುತ್ತದ್ದ ಬಸ್‌ ವೇಗವಾಗಿ ತಿರುವು ಪಡೆದುಕೊಂಡಿದ್ದು ಈ ವೇಳೆ  ಮಹಿಳೆಗೆ ಡಿಕ್ಕಿ ಹೊಡೆದಿದೆ.  ಈ ವೇಳೆ ಅವರು ಬಿದಿದ್ದು,  ಹಿಂಬದಿ ಚಕ್ರ ಹರಿದಿದೆ  ಎನ್ನಲಾಗಿದೆ.

ಘಟನೆಯಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಂಡ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಇನ್ನು ಬಸ್‌ ನಿಲ್ದಾಣಕ್ಕೆ ಬರುತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅತಿ ವೇಗವಾಗಿ ನಿಲ್ದಾಣಕ್ಕೆ ಬಸ್‌ ಬರುತಿರುವಂತೆ ಕಾಣಿಸುತ್ತಿದೆ. ಈ ವೇಳೆ ನಿಲ್ದಾಣದಲ್ಲಿ  ನಿಂತಿದ್ದ ಮಹಿಳೆಗೆ ಡಿಕ್ಕಿ ಹೊಡೆದಂತೆ ಕಂಡು ಬರುತ್ತಿದ್ದು, ಈ ಬಗ್ಗೆ ಪೊಲೀಸರು ಕೂಲಂಕಶವಾಗಿ ಪರಿಶೀಲಿಸಿದರೆ ಸತ್ಯ ವೇನೆಂಬುವುದು ತಿಳಿಯಲಿದೆ.

ಸಿಸಿ ಕ್ಯಾಮರಾದ ದೃಶ್ಯವನ್ನು ನೋಡಿದರೆ ಚಾಲಕನ ನಿಲಕ್ಷ್ಯ ಮತ್ತು ಅತಿಯಾದ ವೇಗದ ಚಾಲನೆಯಿಂದ ಈ ಅಪಘಾತ ನಡೆದಿರುವಂತೆ ಕಂಡು ಬರುತ್ತಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ