NEWSನಮ್ಮಜಿಲ್ಲೆ

ಮಂಗಳೂರು: KSRTCಯಲ್ಲಿ ಚಾಲಕರ ನೇಮಕ; ಸುಳ್ಳು ಪ್ರಕಟಣೆ – ದೂರು ದಾಖಲು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಹುದ್ದೆಗೆ ನೇಮಕಾತಿ ನಡೆಯುತ್ತಿದೆ ಎಂದು ನಗರದ ಪತ್ರಿಕೆಯೊಂದರಲ್ಲಿ ಸುಳ್ಳು ಪ್ರಕಟಣೆ ನೀಡಿರುವ ಬಗ್ಗೆ ನಗರದ ಬರ್ಕೆ ಠಾಣೆಯಲ್ಲಿ ದೂರು ದಾಖಲಾಗಿದೆ.

ನ.11ರಂದು ನಗರದ ಪತ್ರಿಕೆಯೊಂದರಲ್ಲಿ ಮ್ಯಾನ್ ಪವರ್ ರಿಕ್ರೂಟ್‌ಮೆಂಟ್ ಏಜೆನ್ಸಿ, (ಎನ್‌ಜಿಒ) ಬಾಳೆಗುಂಡಿ ಸದನ ಕೆ.ಆರ್.ಪುರಂ ಮುಖ್ಯರಸ್ತೆ, ಮೊದಲನೆ ಮಹಡಿ ಶಿವಮೊಗ್ಗ ಎಂಬ ಸಂಸ್ಥೆಯ ಹೆಸರಿನಲ್ಲಿ ನೀಡಲಾದ ಪ್ರಕಟಣೆಯಲ್ಲಿ ಕೆಎಸ್ಸಾರ್ಟಿಸಿ ಮಂಗಳೂರು ಡಿಪೋದಲ್ಲಿ 250 ಹುದ್ದೆಗಳು, ಪುತ್ತೂರು ವಿಭಾಗದಲ್ಲಿ 200 ಹುದ್ದೆಗಳು, ಚಾಮರಾಜ ನಗರ ವಿಭಾಗದಲ್ಲಿ 100 ಹುದ್ದೆಗಳು ಸೇರಿದಂತೆ ಒಟ್ಟು 650 ಡ್ರೈವರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.

ಪ್ರತಿ ಅಭ್ಯರ್ಥಿಗಳು ಬಯೋಡಾಟಾದೊಂದಿಗೆ 1,000 ರೂ. ಅರ್ಜಿ ಶುಲ್ಕದ ಡಿಡಿಯನ್ನು ಮತ್ತು 10,000 ರೂ. ಡಿಡಿಯನ್ನು ನೇಮಕಾತಿ ಅರ್ಜಿಯೊಂದಿಗೆ ಸಲ್ಲಿಸಬೇಕು. ನೇಮಕಾತಿ ತಿರಸ್ಕೃತಗೊಂಡಾಗ 10,000 ರೂ. ಹಿಂದಿರುಗಿಸಲಾಗುವುದು. ನೇಮಕಾತಿಯ ಒಟ್ಟು ಶುಲ್ಕ ಒಬ್ಬರಿಗೆ 25,000 ರೂ. ಮಾತ್ರವಿದ್ದು 15,000 ರೂ.ಗಳನ್ನು ನೇಮಕಾತಿ ಪತ್ರ ಪಡೆಯುವ ಸಂದರ್ಭ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

ಈ ಬಗ್ಗೆ ಕೆಎಸ್ಸಾರ್ಟಿಸಿ ಬೆಂಗಳೂರು ಕೇಂದ್ರ ಕಚೇರಿ ಹಾಗೂ ವಿಭಾಗಗಳಿಂದ ಯಾವುದೇ ಪ್ರಕಟಣೆ ನೀಡಿಲ್ಲ. ಆದರೆ, ಆರೋಪಿಗಳು ಕೆಎಸ್ಸಾರ್ಟಿಸಿ ಹೆಸರು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ನಕಲಿ ನೌಕರಿ ಆಮಿಷವೊಡ್ಡಿ ಹಣ ಸಂಗ್ರಹಿಸಿ ವಂಚಿಸುವ ಉದ್ದೇಶದಿಂದ ಸುಳ್ಳು ಪ್ರಕಟಣೆ ನೀಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಈ ಬಗ್ಗೆ ಸಂಬಂಧಪಟ್ಟ ಎನ್‌ಜಿಒಗಳ ವಿಚಾರಣೆ ನಡೆಸುತ್ತಿದ್ದಾರೆ. ಇದು ಎನ್‌ಜಿಒಗಳೇ ಕೊಟ್ಟಿರುವ ಪ್ರಕಟಣೆಯೋ ಅಥವಾ ಯಾರಾದರೂ ನೀಡಿದ್ದಾರೋ ಎಂಬ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ