NEWSನಮ್ಮಜಿಲ್ಲೆನಮ್ಮರಾಜ್ಯ

ಮಾರ್ಚ್‌ 1ರಂದು ಸಾರಿಗೆ ನೌಕರರ ವೇತನ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ ಸಂಬಂಧ ಮಾರ್ಚ್‌ 1ರಂದು ಸಭೆ ಕರೆದಿದ್ದಾರೆ.

ವೇತನ ಪರಿಷ್ಕರಣೆ ಸಂಬಂಧ ಚರ್ಚಿಸಲು ನಿಗಮದ ಸೂಕ್ತಾಧಿಕಾರಿಗಳ ಆದೇಶ ಮೇರೆಗೆ ಈ ಸಭೆ ನಡೆಸಲಾಗುತ್ತಿರುವುದಾಗಿ  ಸೋಮವಾರ ಮಾಹಿತಿ ನೀಡಿರುವ ಅಧಿಕಾರಿಗಳು, 4 ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸಂಬಂಧ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳೊಂದಿಗೆ ಚರ್ಚಿಸಲು ದಿನಾಂಕ ನಿಗದಿಪಸಿದ್ದಾರೆ.

ಅದರಂತೆ ಮಾ.1ರಂದು ಅಪರಾಹ್ನ 3 ಗಂಟೆಗೆ ಕರಾರಸಾ ನಿಗಮದ ಕೇಂದ್ರ ಕಚೇರಿ ಸಭಾಂಗಣದಲ್ಲಿ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಹಾಗೂ BMTC, NWKRTC, KKRTC ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದಲ್ಲಿ ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದ್ದು, ವೇದಿಕೆಯ ಪದಾಧಿಕಾರಿಗಳು ಹಾಜರಾಗುವಂತೆ ಕೋರಿದೆ ಎಂದು ನಿಗಮದ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಪದಾಧಿಕಾರಿಗಳು ನಂ.54, 6ನೇ ಕ್ರಾಸ್‌, ಪೊಲೀಸ್‌ ಠಾಣೆ ಹತ್ತಿರ, ವಿಲ್ಸನ್‌ ಗಾರ್ಡನ್‌, ಬೆಂಗಳೂರು -560027ಕ್ಕೆ ಸಭೆ ಸೂಚನಾ ಪತ್ರವನ್ನು ಕಳುಹಿಸಿದ್ದಾರೆ.

ಕಳೆದ 2016ರ ಜನವರಿ 1ರಂದು ವೇತನ ಪರಿಷ್ಕರಣೆ ಆಗಿದೆ. ಆ ಬಳಿಕ ಮತ್ತೆ ಈವರೆಗೂ ವೇತನ ಹೆಚ್ಚಳವಿಲ್ಲದೆ ನೌಕರರು ಒಂದು ರೀತಿ ಕತ್ತೆಯಂತೆ ದುಡಿಯುತ್ತಿದ್ದಾರೆ. ಆದರೆ, ಕಳೆದ 2020ರ ಜನವರಿ 1ರಿಂದಲೇ ವೇತನ ಹೆಚ್ಚಳ ಮಾಡಬೇಕಿರುವ ಸರ್ಕಾರ ಈವರೆಗೂ ಮಾಡದೆ ಮೀನಮೇಷ ಎಣಿಸಿಕೊಂಡು ಬಂದಿದ್ದು ಚುನಾವಣೆ ಘೋಷಣೆಗೆ ಬೆರಳೆಣಿಕೆಯಷ್ಟು ದಿನಗಳಿರುವಾಗ ಕೊಟ್ಟ ಮಾತನ್ನು ತಪ್ಪಿರುವ ಸರ್ಕಾರ ಮತ್ತೆ ವೇತನ ಪರಿಷ್ಕರಣೆ ಸಂಬಂಧ ಸಭೆ ಕರೆದು ಚರ್ಚಿಸುವುದಾಗಿ ತಿಳಿಸಿದೆ.

ಈ ರೀತಿ ಹತ್ತಾರು ಸಭೆಗಳನ್ನು ನಾಲ್ಕೂ ನಿಗಮಗಳ ಎಂಡಿಗಳು ಮತ್ತು ಉನ್ನತ ಅಧಿಕಾರಿಗಳ ಮಟ್ಟದಲ್ಲಿ  ಸಭೆ ನಡೆಸಿ  ಸರ್ಕಾರಕ್ಕೆ ನಡೆದ ಚರ್ಚೆ, ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಲಾಗುತ್ತಲೇ ಇದೆ. ಆದರೆ, ಈವರೆಗೂ ಏನೂ ಪ್ರಯೋಜನವಾಗಂತಹ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದಲ್ಲ.

ಇನ್ನು ಇಂದು (ಫೆ.27) ಸಾರಿಗೆ ನೌಕರರ ಜಂಟಿ ಕ್ರಿಯಾಸಮಿತಿ ಪದಾಧಿಕಾರಿಗಳೊಂದಿಗೆ ಸಭೆ ಕರೆಯಲಾಗಿದ್ದು ಆ ಸಭೆಯು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ