ಇದೇ ತಿಂಗಳು ಫ್ರೀಡಂ ಪಾರ್ಕ್ನಲ್ಲಿ EPS ಪಿಂಚಣಿದಾರರ ಬೃಹತ್ ಪ್ರತಿಭಟನೆ: ನಿವೃತ್ತರ ಸಭೆಯಲ್ಲಿ ಒಮ್ಮತದ ನಿರ್ಧಾರ

ಬೆಂಗಳೂರು: ನಿವೃತ್ತರ ಹೋರಾಟದ ಇದೇ ಮೇ ತಿಂಗಳಿನಲ್ಲಿ ನಗರದ ಫ್ರೀಡಂ ಪಾರ್ಕ್ನಲ್ಲಿ ನಮ್ಮ ಎಲ್ಲ ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
ನಿನ್ನೆ ಅಂದರೆ ಭಾನುವಾರ ಮೇ 4ರ ಬೆಳಗ್ಗೆ ಲಾಲ್ಬಾಗ್ ಆವರಣದಲ್ಲಿ ಆಯೋಜಿಸಿದ್ದ ಇಪಿಎಸ್ ಪಿಂಚಣಿದಾರರ 88ನೇ ಮಾಸಿಕ ಸಭೆ ಭಾಗವಹಿಸಿದ್ದ ಎಲ್ಲ ನಿವೃತ್ತ ನೌಕರರು ಈ ನಿರ್ಧಾರ ತೆಗೆದುಕೊಳ್ಳಲು ಒಮ್ಮತದಿಂದ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಇವರು ಎಲ್ಲ ಇಪಿಎಸ್ ನಿವೃತ್ತರನ್ನು ಒಗ್ಗೂಡಿಸಿ, ದಶಕದಿಂದ ನಡೆಸಿದ ಹೋರಾಟದ ಸಂಪೂರ್ಣ ಚಿತ್ರಣವನ್ನು ಮುಂದಿನ ಪ್ರತಿಭಟನೆಯಲ್ಲಿ ತೆರೆದಿಡುವ ಮೂಲಕ ಸರ್ಕಾರ ನಡೆಯನ್ನು ಖಂಡಿಸುವುದಾಗಿ ತಿಳಿಸಿದರು.
ನಾವು ಕೂಡ ದಶಕದಿಂದ ಇಂದಾಗುತ್ತದೆ ನಾಳೆ ನಮ್ಮ ಬೇಡಿಕೆ ಈಡೇರುತ್ತದೆ ಎಂದು ಚಾತಕಪಕ್ಷಿಯಂತೆ ಕಾದು ಕುಳಿತ್ತಿದ್ದೆವೆ. ಈ ಕಾಯುವಿಕೆಯಲ್ಲೆ ಈಗಾಗಲೇ ಹಲವಾರು ನಮ್ಮ ಇಳಿವಯಸ್ಸಿನ ಸಹೋದ್ಯೋಗಿಗ:ನ್ನು ಕಳೆದುಕೊಂಡಿದ್ದೇವೆ. ಆದರೆ ಸರ್ಕಾರ ಮಾತ್ರ ಈವರೆಗೂ ಹಿರಿಯರ ಭಾವನೆ ಮತ್ತು ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳದಿರುವುದು ಭಾರಿ ಖೇದಕರ ಸಂಗತಿ ಎಂದು ಹೇಳಿದರು.
ಇನ್ನು ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ಬಣ್ಣ ಮಾತನಾಡಿ, ನಮ್ಮ ಸಂಘರ್ಷ ಮುಗಿಯುವ ಲಕ್ಷಣ ಕಂಡು ಬರುತ್ತಿಲ್ಲ. ಏಕೆಂದರೆ ಇಪಿಎಫ್ಒ ಅಧಿಕಾರಿಗಳು ಪೂರ್ವಗ್ರಹ ಪೀಡಿತರಾಗಿದ್ದು, ನಮಗೆಲ್ಲರಿಗೂ ಅಧಿಕ ಪಿಂಚಣಿಯನ್ನು ನಿರಾಕರಿಸಿ, ಹಿಂಬರ ನೀಡಿದ್ದಾರೆ. ಆದರೂ ನಾವು ಅಂತಿಮ ಗುರಿ ಮುಟ್ಟುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದರು.
ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ನಿವೃತ್ತ ನೌಕರರ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ ಮಾತನಾಡಿ, ಇಪಿಎಫ್ಒ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ನಾವೆಲ್ಲರೂ “ದೆಹಲಿ ಯಾತ್ರೆ” ಕೈಗೊಳ್ಳುವುದು ಒಂದೇ ಮಾರ್ಗ, ರೈತ ಚಳವಳಿಯ ಮಾದರಿಯಲ್ಲಿ ನಮ್ಮ ಹೋರಾಟವನ್ನು ಮಾಡಿದಲ್ಲಿ, ಜಯ ಶತಸಿದ್ಧ ಎಂದರು.
ರಾಷ್ಟ್ರೀಯ ಸಂಘರ್ಷ ಸಮಿತಿ, ರಾಜ್ಯ ಖಜಾಂಚಿ, ಕುಲಕರ್ಣಿ ಮಾತನಾಡಿ, ದೇಶಾದ್ಯಂತ ಇರುವ ಎಲ್ಲ 78 ಲಕ್ಷ ಇಪಿಎಸ್ ನಿವೃತ್ತರಿಗೆ ಕನಿಷ್ಠ ಮಾಸಿಕ ₹7500 ಅಥವಾ ₹5000/- + ಭತ್ಯೆ ನೀಡಿದಲ್ಲಿ, ಕೇಂದ್ರ ಸರ್ಕಾರಕ್ಕೆ ಇದರಿಂದ ಹೆಚ್ಚಿನ ಹೊರೆ ಉಂಟಾಗುವುದಿಲ್ಲ ಹಾಗೂ ಇದನ್ನು ಭರಿಸುವ ಮಾರ್ಗೋಪಾಯಗಳ ಬಗ್ಗೆ ಇಪಿಎಫ್ಒ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡುತ್ತೇವೆ ಎಂದು ತಿಳಿಸಿದರು.
ಸಭೆಗೆ ಅತಿಥಿಯಾಗಿ ಸಾಮಾಜಿಕ ಕಾರ್ಯಕರ್ತ ಚಂದ್ರೇಗೌಡ ಸ್ವಯಂ ಪ್ರೇರಿತರಾಗಿ ಆಗಮಿಸಿದ್ದು, ಇಪಿಎಸ್ ನಿವೃತ್ತರ ಕಷ್ಟ ಕಾರ್ಪಣ್ಯಗಳ ಬಗ್ಗೆ ತನಗೆ ಸಂಪೂರ್ಣ ಅರಿವಿದ್ದು, ಈ ಹೋರಾಟದ ಭಾಗವಾಗಿ ತನ್ನನ್ನು ಸಹ ಪರಿಗಣಿಸಬೇಕೆಂದು ಸಭೆಯಲ್ಲಿ ಮನವಿ ಮಾಡಿದರು.
ಸಂಘದ ಪದಾಧಿಕಾರಿಗಳಾದ ನಾಗರಾಜ, ರುಕ್ಮೇಶ್ ಹಾಗೂ ಕೆಎಸ್ಆರ್ಟಿಸಿ ಚಿಕ್ಕಬಳ್ಳಾಪುರ ನಿವೃತ್ತ ನೌಕರರ ಟ್ರಸ್ಟ್ ಖಜಾಂಚಿ ರಮೇಶ್ ಭಾಗವಹಿಸಿದ್ದು, ಸಭೆಯ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟರು. ಸಭೆಯ ನಿರ್ಣಯಗಳ ಬಗ್ಗೆ ಸದಸ್ಯರು ಹರ್ಷ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಭಾನುವಾರದ ಬೆಳಗಿನ ನಿರ್ಮಲ ವಾತಾವರಣದಲ್ಲಿ, ಲಾಲ್ಬಾಗ್ ನಡಿಗೆದಾರರ ಜತೆ ಹೆಜ್ಜೆ ಹಾಕುತ್ತಾ, ತನ್ನ ಸಹಪಾಠಿಗಳನ್ನು ಕಂಡೊಡನೆ, ಎಲ್ಲಿಲ್ಲದ ನವೊಲ್ಲಾಸದಿಂದ, ಸುಂದರ ತಾಣದಲ್ಲಿ ಸಮಯ ಕಳೆದಿದ್ದೆ ತಿಳಿಯಲಿಲ್ಲ ಎಂದು ಇಳಿವಯಸ್ಸಸಿನಲ್ಲೂ ನವಯುಕರಂತೆ ಒಬ್ಬದಿಗೊಬ್ಬರು ಕುಶಲೋಪರಿ ಹಂಚಿಕೊಂಡರು.
ಸಭೆಯ ಪ್ರಾರಂಭಕ್ಕೂ ಮೊದಲು ಇತ್ತೀಚೆಗೆ ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ಗುಂಡೇಟಿನಿಂದ ಮಡಿದ 26 ಪ್ರವಾಸಿಗರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘಟನಾ ಕಾರ್ಯದರ್ಶಿ ಮನೋಹರ್ ಅವರು ಎಲ್ಲ ಇಪಿಎಸ್ ನಿವೃತ್ತರು ಹಾಗೂ ಮುಖಂಡರಿಗೆ ಸ್ವಾಗತಿಸುವ ಮೂಲಕ ಸಭೆಗೆ ಚಾಲನೆ ನೀಡಿದರು.
Related

You Might Also Like
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...
BMTC: ಬ್ರೇಕ್ ಫೇಲಾಗಿ ಕಂದಕಕ್ಕೆ ನುಗ್ಗಿದ ಬಸ್- ಅದೃಷ್ಟವಶಾತ್ ಪ್ರಯಾಣಿಕರು ಸೇಫ್
ಆನೇಕಲ್: ಬ್ರೇಕ್ ಫೇಲಾಗಿ ರಸ್ತೆ ಬದಿಯ ಕಂದಕಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್ ನುಗ್ಗಿರುವ ಘಟನೆ ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಹರಪ್ಪನಹಳ್ಳಿ ಬಳಿ...
ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಸಿಗುತ್ತಿದೆ ಮುಕ್ತಿ
ಬೆಂಗಳೂರು: ರಾಜ್ಯ ರಾಜಧಾನಿಯ ಹೆಬ್ಬಾಳ ಭಾಗದ ಬಹುದೊಡ್ಡ ಟ್ರಾಫಿಕ್ ಸಮಸ್ಯೆಗೆ ಕೊನೆಗೂ ಇಂದು ಮುಕ್ತಿ ಸಿಗುತ್ತಿದೆ. ಹೌದು! ಬಹುನಿರೀಕ್ಷಿತ ಹೆಬ್ಬಾಳ ವಿಸ್ತರಿತ ಮೇಲ್ಸೇತುವೆ ಉದ್ಘಾಟನೆ ಆಗುತ್ತಿದೆ. ಇಂದು...
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...