NEWSಕೃಷಿನಮ್ಮಜಿಲ್ಲೆ

ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ರೈತರು, ರೈತ ಮಹಿಳೆಯರ ಬೃಹತ್ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರೈತರಿಗೆ ಕನಿಕರ ಬೇಕಾಗಿಲ್ಲ, ನೈಜ ಪರಿಹಾರ ಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಒತ್ತಾಯಿಸಿದರು

ಇಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘದ ನೇತೃತ್ವದ ರೈತರ ತಂಡ ಬೆಂಗಳೂರು ಚಲೋ ಮೂಲಕ ಸಾವಿರಾರು ಅನ್ನದಾತರೊಂದಿಗೆ ಫ್ರೀಡಂ ಪಾರ್ಕ್‌ನಲ್ಲಿ ಜಮಾವಣೆಗೊಂಡು ಪ್ರತಿಭಟನೆ ಆರಂಭಿಸಿದದ ವೇಳೆ ಮಾತನಾಡಿದರು.

ಹಳ್ಳಿಗಳಲ್ಲಿ ರೈತರು ಕೃಷಿ ತೊರೆದು ನಗರಗಳಿಗೆ ವಲಸೆ ಹೋಗುತ್ತಿದ್ದಾರೆ, ಆತ್ಮಹತ್ಯೆಗಳ ಸರಣಿ ಹೆಚ್ಚುತ್ತಿದೆ, ಬರಗಾಲ ಕಾಡುತ್ತಿದೆ, ರೈತರ ಮಕ್ಕಳ ಮದುವೆಯಾಗಲು ಹೆಣ್ಣುಮಕ್ಕಳು ಒಪ್ಪುತ್ತಿಲ್ಲ, ಕೃಷಿ ದುರ್ಬಲವಾಗುತಿದೆ ಎಲ್ಲವನ್ನೂ ಪರಿಗಣಿಸಿ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಲೇಬೇಕು ಕಾಂಗ್ರೆಸ್‌ ಸರ್ಕಾರವೇ ತೆಲಂಗಾಣದಲ್ಲಿ ಮನ್ನ ಮಾಡಿಲ್ಲವೇ ಯಾಕೆ ಕರ್ನಾಟಕದಲ್ಲಿ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಕೇಂದ್ರ, ರಾಜ್ಯ, ಸರ್ಕಾರಗಳು ರಾಜ್ಯಕ್ಕೆ ಬಿಡುಗಡೆಯಾಗಬೇಕಾದ ಅನುದಾನ ಬಿಡುಗಡೆ ವಿಚಾರದಲ್ಲಿ ಕೆಸರೆರಾಚಾಟದಲ್ಲಿ ತೊಡಗಿವೆ. ರೈತರ ಬಗ್ಗೆ ಮೂಸಳೆ ಕಣ್ಣಿರು ಸುರಿಸುತಿವೆ. ಕಳೆದ ಹತ್ತು ವರ್ಷದಲ್ಲಿ ಕೃಷಿ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ ಅನುದಾನ, ಖರ್ಚು ಮಾಡಿರುವ ಅನುದಾನ ಎಷ್ಟು ಎಂಬುರ ಬಗ್ಗೆ ಎರಡೂ ಸರ್ಕಾರಗಳು ಶ್ವೇತಪತ್ರ ಬಿಡುಗಡೆ ಮಾಡಲಿ. ಆಗ ರೈತರಿಗೆ ನಿಜ ಬಣ್ಣ ಬಯಲಾಗುತ್ತದೆ ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಾಂಖಿಕ ಸಚಿವ ಡಿ.ಸುಧಾಕರ್ ಆಗಮಿಸಿ ಪ್ರತಿಭಟನಾಕಾರರ ಒತ್ತಾಯ ಪತ್ರ ಸ್ವೀಕರಿಸಿ ಮಾತನಾಡಿ, ಮುಖ್ಯಮಂತ್ರಿಗಳು ದೆಹಲಿಗೆ ಹೋಗಿದ್ದಾರೆ ದೆಹಲಿಯಲ್ಲಿ ನಾಳೆ ಈ ಒತ್ತಾಯಗಳ ವಿಚಾರವನ್ನು ಅವರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದ ಅವರು, ಸಮಯವಕಾಶ ಸಿಕ್ಕರೆ ಮುಖಂಡರನ್ನು ಆಹ್ವಾನಿಸಿ ಚರ್ಚಿಸಲಾಗುವುದು ಎಂದರು.

ಗ್ರೀನ್ ಬರ್ಡ್ಸ್ ಠೇವಣಿದಾರರ ಹಣ ಕೊಡಿಸಲು ಎರಡು ದಿನದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ಚರ್ಚಿಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಲಿದ್ದಾರೆ ಎಂದು ಭರವಸೆ ನೀಡಿದರು.

ಪ್ರತಿಭಟನೆ ವೇಳೆ ರೈತರ ಹೋರಾಟಕ್ಕೆ ಜಯವಾಗಲಿ, ಬೇಕೇ ಬೇಕು ನ್ಯಾಯ ಬೇಕು, ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದರು.

ರಾಜ್ಯ ರೈತ ಸಂಘದ ನಾರಾಯಣ ರೆಡ್ಡಿ ಅತ್ತಹಳ್ಳಿ ದೇವರಾಜ್, ಬರಡನ್ಪುರ ನಾಗರಾಜ್, ನಾಗರಾಜ್, ಜಿ.ವಿ.ಲಕ್ಷ್ಮೀದೇವಿ, ಕಿರಗಸೂರ ಶಂಕರ, ಗುರುಸಿದ್ದಪ್ಪ, ದೇವ ಕುಮಾರ್, ಪರಶುರಾಮ್, ರವಿಕುಮಾರ್, ಧರ್ಮರಾಜ್ ಸಾವು, ರಮೇಶ್ ಉಗಾರ್, ಧರ್ಮರಾಜ್, ರೇವಣ್ಣ, ಸಾವಿರಾರು ರೈತರು, ರೈತ ಮಹಿಳೆಯರು ಗ್ರೀನ್ ಬರ್ಡ್ಸ್ ಠೇವಣಿ ವಂಚಿತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ