NEWSನಮ್ಮಜಿಲ್ಲೆನಮ್ಮರಾಜ್ಯ

ದೇವದಾಸಿ ಮಹಿಳೆಯರ, ಮಕ್ಕಳ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನಾ ಧರಣಿ: ಎಎಪಿ ಬೆಂಬಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇವದಾಸಿ ಮಹಿಳೆಯರು ಮತ್ತು ಅವರ ಮಕ್ಕಳ ಹಕ್ಕೊತ್ತಾಯಗಳಿಗಾಗಿ ಅನೇಕ ಬಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಮೂರು ದಿನಗಳ ಕಾಲ ಬಹೃತ್‌ ಪ್ರತಿಭಟನೆ ನಡೆಸುತ್ತಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಎಲ್ಲ ದೇವದಾಸಿಯರಿಗೆ ನೀಡುವ ಮಾಸಿಕ ಧನಸಹಾಯವನ್ನು 5 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಮತ್ತು ಅವರ ಹೆಣ್ಣು ಮಕ್ಕಳಿಗೂ ಅದನ್ನು ವಿಸ್ತರಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಡಿಸೆಂಬರ್ 30ರ ವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹಗಳನ್ನು ಹಮ್ಮಿಕೊಂಡಿದ್ದಾರೆ.

ಇನ್ನು ಈ ಬೃಹತ್ ಪ್ರತಿಭಟನಾ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಪ್ರತಿಭಟನಾನಿರತರನ್ನು ತಮ್ಮ ಪಕ್ಷದ ಬೆಂಬಲವಿರುವುದಾಗಿ ಘೋಷಿಸಿದರು. ಸ್ಥಳದಲ್ಲಿ ನೂರಾರು ದೇವದಾಸಿ ಮಹಿಳೆಯರು ಇದ್ದರು.

ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿ ಜಂಟಿಯಾಗಿ ಡಿಸೆಂಬರ್ 28, 29 ಮತ್ತು 30ರಂದು ಬೃಹತ್ ಪ್ರತಿಭಟನಾ ಧರಣಿ- ಸತ್ಯಾಗ್ರಹವನ್ನು ಹಮ್ಮಿಕೊಂಡಿವೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ