NEWSನಮ್ಮಜಿಲ್ಲೆಸಂಸ್ಕೃತಿ

ನಾಡ ಹಬ್ಬ ದಸರಾ ಹಿನ್ನೆಲೆ ನೂತನ ಮೇಯರ್‌ ನಗರ ಪ್ರದಕ್ಷಿಣೆ : ರಸ್ತೆ, ಫುಟ್‌ಪಾತ್‌ ದುರಸ್ತಿಗೆ ತಾಕೀತು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ದಸರಾ ಮಹೋತ್ಸವ ಹತ್ತಿರವಾಗುತ್ತಿದ್ದಂತೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಾಗುವ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗ ಅಚ್ಚುಕಟ್ಟಾಗಿರುವಂತೆ ನೋಡಿಕೊಳ್ಳಲು ನೂತನ ಮೇಯರ್‌ ಶಿವಕುಮಾರ್ ಬೆಳ್ಳಂಬೆಳಗ್ಗೆ ನಗರ ಪ್ರದಕ್ಷಿಣೆ ಮಾಡಿ, ಅವ್ಯವಸ್ಥೆಗಳನ್ನು ನೋಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.

ಫೈವ್‌ಲೈಟ್ ವೃತ್ತದಿಂದ ಮಂಗಳವಾರ ಬೆಳಗ್ಗೆ ನಗರದ ಪ್ರದಕ್ಷಿಣೆ ಆರಂಭಿಸಿದ ಮೇಯರ್‌, ವೃತ್ತದಲ್ಲಿ ಮ್ಯಾನ್‌ಹೋಲ್ ಒಡೆದು ರಸ್ತೆಗೆ ನೀರು ಹರಿಯುತ್ತಿರುವುದನ್ನು ಕಂಡು ಸಿಡಿಮಿಡಿಗೊಂಡರು. ತಕ್ಷಣವೇ ಮ್ಯಾನ್‌ಹೋಲ್ ದುರಸ್ತಿಪಡಿಸಿ ಲೀಕ್ ಆಗುವುದನ್ನು ತಪ್ಪಿಸಬೇಕು ಎಂದು ಸೂಚಿಸಿದರು.

ಇನ್ನು ಹೃದಯ ಭಾಗದಲ್ಲಿ ಸ್ವಚ್ಛತೆ ಕಾಪಾಡದಿರುವುದು ಹಾಗೂ ಮ್ಯಾನ್‌ಹೋಲ್ ಮುಚ್ಚದಿರುವುದನ್ನು ಕಂಡು ಯುಜಿಡಿ, ಪರಿಸರ ಇಂಜಿನಿಯರ್‌ಗಳನ್ನು ತರಾಟೆಗೆ ತಗೆದುಕೊಂಡರು.

ಬಳಿಕ ಬಿಷಫ್‌ ಹೌಸ್ ವೃತ್ತದಲ್ಲಿರುವ ಖಾಸಗಿ ಕಟ್ಟಡದ ಮಾಲೀಕರು ಜಾಗ ಬಿಟ್ಟುಕೊಡದ ಕಾರಣ ಜೋಡಿ ರಸ್ತೆ ನಿರ್ಮಾಣಕ್ಕೆ ಅಡ್ಡಿಯಾಗಿದೆ. ಇರ್ವೀನ್ ರಸ್ತೆಯಲ್ಲಿ ಪರಿಹಾರದ ಮೊತ್ತವನ್ನೇ ನಮಗೂ ಕೊಡುವಂತೆ ಕೇಳಿದ್ದು, ಈವಿಚಾರದಲ್ಲಿ ಹಲವಾರು ಬಾರಿ ಮಾತುಕತೆ ನಡೆಸಲಾಗಿದೆ. ಹೀಗಿದ್ದರೂ, ಜಾಗಬಿಡಲು ಒಪ್ಪಿಲ್ಲವೆಂದು ಹೇಳಿದಾಗ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು, ಕಾನೂನು ತಜ್ಞರ ಸಲಹೆ ಪಡೆದು ಸಮಸ್ಯೆ ಇತ್ಯರ್ಥಪಡಿಸಿ ಉಳಿದ ಕಾಮಗಾರಿ ಮುಗಿಸಲು ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನು ಇದೇ ರಸ್ತೆಯಲ್ಲಿ ಯುಜಿಡಿ ಕಾಮಗಾರಿಗೆ ರಸ್ತೆಯನ್ನು 50 ಮೀಟರ್‌ನಷ್ಟು ಅಗೆದಿದ್ದು, ಈ ವೇಳೆ ಬಸ್‌ಗಳ ಸಂಚಾರಕ್ಕೆ ತೊಂದರೆಯಾಗಿರುವುದನ್ನು ಗಮನಿಸಿ, ದಸರಾ ತನಕ ಆರಂಭಿಸಿರುವ ಕಾಮಗಾರಿ ಪೂರ್ಣಗೊಳಿಸಿ, ಉಳಿದಿದ್ದನ್ನು ನಂತರ ಕೈಗೆತ್ತಿಕೊಳ್ಳಬೇಕು. ಪೈಪ್ ಅಳವಡಿಸಿದ ಮೇಲೆ ಚೆನ್ನಾಗಿ ಮಣ್ಣು, ಜಲ್ಲಿಯಿಂದ ಮುಚ್ಚಬೇಕು. ಅದೇಮಣ್ಣನ್ನು ಹಾಕಿ ತುಂಬಿದರೆ ಒತ್ತಡ ತಾಳದೆ ಗುಂಡಿಯಾಗುತ್ತದೆ ಎಂದು ಹೇಳಿದರು.

ದೇಶ-ವಿದೇಶಗಳಿಂದ ದಸರಾ ಮಹೋತ್ಸವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಕಾರಣ ಹೃದಯ ಭಾಗದ ರಸ್ತೆಗಳನ್ನು ಸ್ವಚ್ಛವಾಗಿಡಬೇಕಿದೆ. ಅಲ್ಲಲ್ಲಿ ಯುಜಿಡಿ ಸಮಸ್ಯೆ, ಸ್ವಚ್ಛತೆ ಸಮಸ್ಯೆಗಳು ಕಂಡುಬಂದಿದ್ದರಿಂದ ಎರಡು ದಿನಗಳಲ್ಲಿ ಸರಿಪಡಿಸಿ ಫೋಟೋ ಸಮೇತ ವರದಿ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಸ್ ನಿಲ್ದಾಣದ ರಸ್ತೆಯಲ್ಲಿ ಇರುವ ಅವ್ಯವಸ್ಥೆಗೆ ಶೀಘ್ರ ಮುಕ್ತಿ ಕೊಡಲಾಗುವುದು ಶಿವಕುಮಾರ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಇನ್ನು ಫುಟ್‌ಪಾತ್‌ಗಳು ಹಾಳಾಗಿರುವುದರಿಂದ ಓಡಾಡಲು ತುಂಬಾ ತೊಂದರೆಯಾಗಿದೆ. ಸಬರ್ಬ್‌ ಬಸ್ ನಿಲ್ದಾಣ ಅಕ್ಕಪಕ್ಕದ ರಸ್ತೆಗಳಲ್ಲಿ ಫುಟ್‌ಪಾತ್ ನಿರ್ಮಾಣ ಮಾಡಬೇಕು. ಯುಜಿಡಿ ಲೈನ್ ಹಾಳಾಗಿರುವುದರಿಂದ ದುರಸ್ತಿಗೆ ಗಮನ ಹರಿಸಬೇಕು ಎಂದು ನಗರಪಾಲಿಕೆ ಸದಸ್ಯ ಎಂ.ಸತೀಶ್ ಹೇಳಿದರು.

ಸಬರ್ಬ್ ಬಸ್ ನಿಲ್ದಾಣ ರಸ್ತೆ, ಬಿಷಪ್ ಹೌಸ್, ಬಿ.ಎನ್.ರಸ್ತೆ, ಪುರಭವನ ಮೊದಲಾದ ಕಡೆಗಳಲ್ಲಿ ನಗರ ಪ್ರದಕ್ಷಿಣೆ ಹಾಕಿದ ಮೇಯರ್‌ ಶಿವಕುಮಾರ್ ಹಲವಾರು ಸಮಸ್ಯೆಗಳನ್ನು ವೀಕ್ಷಿಸಿದರು. ನಗರಪಾಲಿಕೆ ಸದಸ್ಯ ಎಂ.ಬಿ.ನಾಗರಾಜು, ಉಪ ಆಯುಕ್ತರಾದ ಎಂ.ಜೆ.ರೂಪಾ ಇತರ ಅಧಿಕಾರಿಗಳು ಜನಪ್ರತಿನಿಧಿಗಳು ಇದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ