NEWSನಮ್ಮರಾಜ್ಯರಾಜಕೀಯ

ಇಂದು ಮತ್ತೆ 4ಗಂಟೆಗಳು ಸಾರಿಗೆ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಗೌಪ್ಯ ಸಭೆ ನಡೆಸಿದ ಎಂಡಿ ಅನ್ಬುಕುಮಾರ್‌

ನೌಕರರ ಪಾಲಿಗೆ ಜಂಟಿ ಕ್ರಿಯಾ ಸಮಿತಿ ಶತ್ರುವಾಗುವುದೆ ಇಲ್ಲ ಮಿತ್ರನಾಗುವುದೇ ಎಂಬುದನ್ನು ಕಾದು ನೋಡಬೇಕಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ನಿನ್ನೆ (ಶುಕ್ರವಾರ) ಮಧ್ಯಾಹ್ನ 12.30ರಿಂದ 3 ಗಂಟೆಯವರೆಗೂ ಸಂಸ್ಥೆ ಎಂಡಿ ಗೌಪ್ಯ ಸಭೆ ನಡೆಸಿದ್ದು ಹಳೆಯದಾಯಿತು. ಆದರೆ ಮತ್ತೆ ಇಂದು (ಶನಿವಾರ ಮಾ.18) ಗೌಪ್ಯ ಸಭೆ ನಡೆಸುವ ಮೂಲಕ ನೌಕರರಿಗೆ ಸಿಹಿ ಬದಲು ಕಹಿ ಸುದ್ದಿ ನೀಡುವುದಕ್ಕೆ ಮುಂದಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೆಎಸ್‌ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳನ್ನು ಶಾಂತಿನಗರದಲ್ಲಿರುವ ತಮ್ಮ ಕೇಂದ್ರ ಕಚೇರಿಗೆ ಇಂದು ಕರೆಸಿಕೊಂಡು ಸಂಜೆ 4ಗಂಟೆಯಿಂದ ರಾತ್ರಿ 8 ಗಂಟೆಯ ವರೆಗೂ ಅಂದರೆ 4 ಗಂಟೆಗಳ ಕಾಲ ಗೌಪ್ಯ ಸಭೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ.

ಸಭೆ ಬಳಿಕ ಇದೇ 21ರಂದು ಕರೆನೀಡಿರುವ ಮುಷ್ಕರವನ್ನು ಕೈ ಬಿಡುವ ಬಗ್ಗೆ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ತೀರ್ಮಾನಿಸಲಿದ್ದಾರೆ ಎಂದು ಕೂಡ ಬಲ್ಲ ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ.

ಆದರೆ, ಸುಮಾರು 4 ಗಂಟೆಗಳು ನಡೆದ ಸಭೆಯಲ್ಲಿ ಯಾವ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದನ್ನು ಇನ್ನೂ ಗೌಪ್ಯವಾಗಿಡಲಾಗಿದ್ದು, ಜಂಟಿ ಕ್ರಿಯಾ ಸಮಿತಿಯ ನಡೆ ಏನು ಎಂಬುವುದು ಇಂದು ಅಥವಾ ನಾಳೆ ಬೆಳಗ್ಗೆಯಷ್ಟರಲ್ಲೇ ಬಹಿರಂಗವಾಗುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ