CrimeNEWSನಮ್ಮಜಿಲ್ಲೆನಮ್ಮರಾಜ್ಯ

ಹೊಸವರ್ಷದ ಹೊಸ್ತಿಲಲ್ಲಿ BMTC ನೌಕರರಿಗೆ ಸಿಹಿ ನ್ಯೂಸ್‌ಕೊಟ್ಟ ಎಂಡಿ ಸತ್ಯವತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಜಿ.ಸತ್ಯವತಿ ಅವರು ನೌಕರರ ವಿರೋಧಿ ಎಂದು ಬಿಂಬಿಸುವ ರೀತಿ ಇತ್ತೀಚೆಗಷ್ಟೆ AITUCಯ ಅಧ್ಯಕ್ಷರು ಹೇಳಿಕೆ ಬಿಡುಗಡೆ ಮಾಡಿದ್ದರು. ಆದರೆ, ಆ ರೀತಿ ನಾವು ಇಲ್ಲ ಎಂದಿಗೂ ನೌಕರರ ಪರವಾಗಿದ್ದೇವೆ ಎಂದು ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ ಎಂಡಿ ಸತ್ಯವತಿ.

ಹೌದು! 2024ರ ಹೊಸವರ್ಷಕ್ಕೆ (New Year 2024) ಇನ್ನೆರಡು ದಿನ ಬಾಕಿ ಇರುವಾಗಲೇ ನಿಗಮದ ಸಿಬ್ಬಂದಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಬ್ಬಂದಿ ಮೇಲೆ ನಿಗಮದಲ್ಲಿ ದಾಖಲಾದ ಎಲ್ಲ 6,960 ಕೇಸ್‌ಗಳನ್ನು ಖುಲಾಸೆಗೊಳಿಸುವ ಮೂಲಕ ಸಿಬ್ಬಂದಿಗೆ ಹೊಸ ವರ್ಷದ ಉಡುಗೊರೆ ನೀಡಿದ್ದಾರೆ ಎಂಡಿ ಸತ್ಯವತಿ.

ಬಿಎಂಟಿಸಿಯಲ್ಲಿ ಬಹಳ ವರ್ಷಗಳಿಂದಲೂ ಡಿಪೋ ವ್ಯವಸ್ಥಾಪಕರ ಕಿರುಕುಳ, ಸಣ್ಣಪುಟ್ಟ ಪ್ರಕರಣಗಳಿಗೂ ಕೇಸ್ ದಾಖಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ರೀತಿಯ ಪ್ರಕರಣಗಳು ಸಿಬ್ಬಂದಿಗಳ ವಿರುದ್ಧ ದಾಖಲಾಗಿದ್ದು, ಆ ಎಲ್ಲ ಒಟ್ಟು 6,960 ಕೇಸ್‌ಗಳನ್ನು ಖುಲಾಸೆ ಮಾಡಲಾತ್ತಿದೆ. ಬಸ್‌ಗಳ ಆಪರೇಷನ್ ಕಾರ್ಯಾಚರಣೆ, ಮಾನವ ಸಂಪನ್ಮೂಲಗಳ ಸದ್ಬಳಕೆಯಿಂದ ಹಾಗೂ ಕಾರ್ಮಿಕರ ಹಿತ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸತ್ಯವತಿ ತಿಳಿಸಿದ್ದಾರೆ.

ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ರೂಲ್-23ರಲ್ಲಿ ಬರೋ 26 ಗೈರು ಹಾಜರಿ ಪ್ರಕರಣ, 284 ಅಶಿಸ್ತು ಪ್ರಕರಣ ಸೇರಿ ಒಟ್ಟು 544 ಗಂಭೀರ ಶಿಕ್ಷಾರ್ಹ ಪ್ರಕರಣಗಳು ಖುಲಾಸೆಗೊಳಿಸಲಾಗುತ್ತಿದೆ. ಅದರಲ್ಲಿ ಅಮಾನತಾಗಿ ರಿವೋಕ್ ಆದ ಪ್ರಕರಣಗಳೂ ಸೇರಿವೆ. ಹಾಗೆಯೇ ಡಿಪೋಗಳಲ್ಲಿ ದಾಖಲಾದ ಒಟ್ಟು 2,276 ಗೈರು ಹಾಜರಿ, 4,140 ಅಶಿಸ್ತು ಪ್ರಕರಣಗಳು ಸೇರಿ ಒಟ್ಟು 6,416 ಪ್ರಕರಣಗಳನ್ನು ಕೈ ಬಿಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು ಒಟ್ಟಾರೆ 6,960 ಕೇಸ್‌ಗಳನ್ನು ಖುಲಾಸೆಯಾಗುತ್ತಿದ್ದು, ಈಗಾಗಲೇ ಈ ಕೇಸ್‌ಗಳಲ್ಲಿ ಟ್ರಾಫಿಕ್ ಸೆನ್ಸಾರ್ ಉಲ್ಲಂಘನೆ, ಎಲ್ಲೆಂದರಲ್ಲಿ ಬಸ್ ನಿಲುಗಡೆ, ಬಸ್ ಚಾಲನೆ ವೇಳೆ ಮೊಬೈಲ್ ಬಳಕೆ, ಕರ್ತವ್ಯದ ವೇಳೆ ಸಮವಸ್ತ್ರ ಧರಿಸದೇ ಇರೋದು ಹೀಗೆ ಹಲವು ಪ್ರಕರಣಗಳಿಗೆ ಲಘು ಹಾಗೂ ಏಕರೂಪದ ಶಿಕ್ಷೆ ಕೊಟ್ಟು ಖುಲಾಸೆಗೊಳಿಸಲಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ ತಿಳಿಸಿದ್ದಾರೆ.

ಈ ರೀತಿ ನೌಕರರ ಪರವಾದ ಕೆಲಸ ಮಾಡು ಎಂಡಿ ಅವರ ವಿರುದ್ಧ ಎಐಟಿಯುಸಿಯ ಅಧ್ಯಕ್ಷರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕೆಲ ನೌಕರರು ಅಧ್ಯಕ್ಷರ ವಿರುದ್ಧ ಸಮಾಜಿಕ ಜಾಲತಾಣಗಳಲ್ಲೇ ಆಡಿಯೋಗಳನ್ನು ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನೌಕರರ ಪರವಾದ ಯಾವುದೇ ನಿರ್ಧಾರವನ್ನು ಯಾರದೆ ಮುಲಾಜಿಗೂ ಒಳಗಾಗದೆ ಎಂಡಿ ಸತ್ಯವತಿ ಅವರು ತೆಗೆದುಕೊಳ್ಳುತ್ತಿರುವುದರಿಂದ ನಮಗೆ ಸ್ವಲ್ಪ ಒತ್ತಡರಹಿತವಾಗಿ ಕೆಲಸ ಮಾಡುವುದಕ್ಕೆ ಸಾಧ್ಯವಾಗುತ್ತಿದೆ. ನಾವು ಈ ಸಂಘಟನೆಗಳ ಹಿಂದೆ ಬಿದ್ದು ಅಮಾನತು, ವರ್ಗಾವಣೆ, ವಜಾ ಮತ್ತು ಪೊಲೀಸ್‌ ಕೇಸ್‌ಗಳನ್ನು ಎದುರಿಸಿದ್ದೇವೆ ಎಂದು ಸಮಸ್ಯೆಯ ಸುಳಿಯಿಂದ ಹೊರ ಬಂದ ನೌಕರರು ಹೇಳಿದ್ದಾರೆ.

ಇನ್ನು ಮುಂದೆ ಈರೀರಿಯ ಹೋರಾಟಗಳಿಗೆ ಅವಕಾಶ ಕೊಡದಂತೆ ನಮ್ಮ ಎಂಡಿ ಅವರು ನಮಗೆ ಸೌಲಭ್ಯಗಳನ್ನು ಸರ್ಕಾರದ ಮಟ್ಟದಲ್ಲಿ ಕೊಡಿಸುವತ್ತ ಮನಸ್ಸು ಮಾಡಬೇಕು. ನಾವು ಯಾವುದೇ ಸಂಘಟನೆಗಳನ್ನು ನಂಬಿ ಹಿಂದೆ ಹೋಗುವುದಿಲ್ಲ ಸಾರ್ವಜನಿಕರಿಗೆ ಉತ್ತಮ ಸಾರಿಗೆ ನೀಡುತ್ತೇವೆ ಎಂದು ನೌಕರರು ವಾಗ್ದಾನ ಮಾಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ