CrimeNEWSನಮ್ಮಜಿಲ್ಲೆ

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಕೆ.ವೆಂಕಟೇಶ್ ಭೇಟಿ: ಮೃತ ಕುಟುಂಬಕ್ಕೆ ಸಾಂತ್ವನ ಪರಿಹಾರ ಧನ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಶುಕ್ರವಾರ ಸುರಿದ ಬಾರಿ ಮಳೆಗೆ ಮನೆ ಕುಸಿದು ಬಿದ್ದು ಸಾವನ್ನಪ್ಪಿದ ತಾಲೂಕಿನ ಕಗ್ಗುಂಡಿ ಗ್ರಾಮದ ಹೇಮಲತಾ ರವರ ಮನೆಗೆ ಪಶುಪಾಲನಾ ಮತ್ತು ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ಭೇಟಿ ನೀಡಿ ಸಾಂತ್ವನ ಹೇಳಿ 5 ಲಕ್ಷ ಪರಿಹಾರ ಧನ ವಿತರಿಸಿ ಸ್ಥಳೀಯ ಆಡಳಿತದಿಂದ 1.25 ಲಕ್ಷ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಕುಂಜಿ ಅಹಮದ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಕುಮಾರ್, ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಮುಖಂಡ ಹರೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮಾಜಿ ಶಾಸಕ ಮಹದೇವ್ ಹಾಗೂ ಪುತ್ರ  ಪ್ರಸನ್ನಭೇಟಿ: ಇದಕ್ಕೂ ಮೊದಲು ಗೋಡೆ ಕುಸಿದು ಸಾವನ್ನಪ್ಪಿದ ಮೃತರ ಕುಟುಂಬಕ್ಕೆ ವೈಯಕ್ತಿಕ ಧನ ಸಹಾಯ ಮಾಡಿ ಸಾಂತ್ವನ ಹೇಳಿದ ಮಾಜಿ ಶಾಸಕರಾದ ಕೆ.ಎಂ. ಮಹದೇವ್ ಹಾಗೂ ಪುತ್ರ ಪಿ.ಎಂ.ಪ್ರಸನ್ನ ಅವರು ಇನ್ನೂ ಸಚಿವರು ಬಂದಿಲ್ಲ ಎಂದು ಕಿಡಿಕಾರಿದ್ದರು.

ಕಗ್ಗುಂಡಿ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಅಪಾರ ಮಳೆಗೆ ಹೇಮಲತಾ ಎಂಬ 22 ವರ್ಷದ ವಿವಾಹಿತ ಮಹಿಳೆ ಮನೆಯ ಗೋಡೆ ಕುಸಿದ ಸಾವನ್ನಪ್ಪಿದ್ದರು. ಈ ಸಮಯದಲ್ಲಿ ತನ್ನೊಂದಿಗೆ ಇದ್ದ 2 ವರ್ಷದ ಮಗುವನ್ನು ದೂರಕ್ಕೆ ತಳ್ಳಿ ಮಗುವಿನ ಪ್ರಾಣ ಕಾಪಾಡಿ ತನ್ನ ಪ್ರಾಣವನ್ನೇ ತೆತ್ತು ತಾಯಿ ಮಮತೆಯನ್ನು ಎತ್ತಿ ಇಡಿದಿದ್ದರು.

ಈ ವಿಚಾರ ಕಾಡ್ಗಿಚ್ಚಿನಂತೆ ರಾಜ್ಯದೆಲ್ಲೆಡೆ ಹಬ್ಬಿ ಇಡೀ ರಾಜ್ಯವೇ ತಾಯಿಯ ತ್ಯಾಗಕ್ಕೆ ಕಂಬನಿ ಮಿಡಿದಿದ್ದಾರೆ. ಇನ್ನು ವಿಷಯ ತಿಳಿದ ಬಳಿಕ ಸ್ಥಳಕ್ಕೆ ಇಂದು ಮುಂಜಾನೆಯೇ ಮಾಜಿ ಶಾಸಕರಾದ ಕೆ.ಎಂ. ಮಹಾದೇವ್ ಹಾಗೂ ಅವರ ಪುತ್ರ ಕಗ್ಗುಂಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಆದ ಪಿ.ಎಂ. ಪ್ರಸನ್ನ ಅವರು ಭೇಟಿನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಪರಿಹಾರ ನೀಡಿದರು.

ಇದಲ್ಲದೆ ಸರ್ಕಾರದಿಂದ ಸಿಗುವ ಪರಿಹಾರದ ಕುರಿತಾಗಿ ಡಿಸಿ ಹಾಗೂ ತಹಸೀಲ್ದಾರ್ ಅವರೊಡನೆ ಚರ್ಚಿಸಿ 11ಗಂಟೆಯ ಒಳಗೆ ಕುಟುಂಬದವರ ಖಾತೆಗೆ ಹಣ ಹಾಕಿಸುವುದಾಗಿ ಹಾಗೂ ಹೊಸ ಮನೆ ನಿರ್ಮಾಣಕ್ಕೆ ಹಣ ಸಹಾಯದ ಭರವಸೆ ನೀಡಿದ್ದರು.

ಇಡೀ ರಾಜ್ಯವೇ ಮೈಸೂರಿನಲ್ಲಿ ಮೊದಲ ಬಲಿ ಪಡೆದ ವರುಣನ ಕ್ರೂರತೆಗೆ ಮರುಗುತ್ತಾ ಇದ್ದರೂ ತಾಲೂಕಿನ ಹಾಲಿ ಶಾಸಕರು ಹಾಗೂ ಸಚಿವರು ಆಗಿರುವ ಕೆ. ವೆಂಕಟೇಶ್ ಇದುವರೆಗೂ ಸ್ಥಳಕ್ಕೆ ಆಗಮಿಸದೆ ಇರುವುದು ದುಃಖದ ಸಂಗತಿ ಎಂಬಂತೆ ಕಾಣುತ್ತದೆ. ಸಚಿವರು ಈಗಲಾದರೂ ಕೂಡಲೇ ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಸರ್ಕಾರದ ಸವಲತ್ತುಗಳನ್ನು ಕೂಡಲೇ ಕೊಡಿಸಿ ಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ