NEWSನಮ್ಮಜಿಲ್ಲೆರಾಜಕೀಯ

ಮಂತ್ರಿ ಶಿವಾನಂದ ಪಾಟೀಲ್ ರಾಜೀನಾಮೆಗೆ ಎಎಪಿಯ ಜಗದೀಶ್ ವಿ. ಸದಂ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳು ಈ ಕೂಡಲೇ ರಾಜ್ಯದ ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ್ ಅವರ ರಾಜೀನಾಮೆ ಪಡೆಯ ಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ಆಗ್ರಹಿಸಿದರು.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣ ರಾಜ್ಯದ ಮದುವೆ ಒಂದರಲ್ಲಿ ಕಂತೆ ಕಂತೆ ನೋಟುಗಳ ನಡುವೆ ನಡೆಸಿದ ದುಸ್ಸಾಹಸವು ಕರ್ನಾಟಕ ರಾಜ್ಯಕ್ಕೆ ಕಪ್ಪುಮಸಿ ಬಳಿಯುವಂತಿದೆ ಎಂದು ಕಿಡಿಕಾರಿದರು.

ಇನ್ನು ರಾಜ್ಯದಲ್ಲಿ 70% ಹೆಚ್ಚು ತಾಲೂಕುಗಳು ಇಂದು ಬರಗಾಲಪೀಡಿತವಾಗಿ ಅದರಲ್ಲೂ ಉತ್ತರ ಕರ್ನಾಟಕ ಭಾಗದ ಹಳ್ಳಿಗರೆಲ್ಲ ಬದುಕಿಗಾಗಿ ಗುಳೆ ಹೋಗುತ್ತಿರುವ ಈ ಕೆಟ್ಟ ಸಂದರ್ಭದಲ್ಲಿ ಉತ್ತರ ಕರ್ನಾಟಕದಿಂದಲೇ ಬಂದಿರುವ ಈ ಉದ್ದಟ ಮಂತ್ರಿಯ ಈ ವರ್ತನೆ ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

ರಾಜ್ಯದಲ್ಲಿ ಈಗಾಗಲೇ ಹಲವು ಕಡೆ ಐಟಿ ದಾಳಿ ನಡಸಿದ್ದು, ಆ ವೇಳೆ ಅಕ್ರಮವಾಗಿ ನೂರಾರು ಕೋಟಿ ರೂಪಾಯಿ ಸಿಕ್ಕಿಬಿದ್ದು ಮುಂಬರುವ ಪಂಚ ರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಪರಮ ಭ್ರಷ್ಟಾಚಾರದ ರೂಪದಲ್ಲಿ ಹಣದ ಅರಿವು ಬರುತ್ತಿದೆ ಎಂಬ ಕಪ್ಪು ಮಸಿ ಬಳಿದಿರುವಾಗ ಮಂತ್ರಿಗಳ ಈ ದುರ್ವರ್ತನೆ ನಿಜಕ್ಕೂ ಅಸಹ್ಯನೀಯ ಎಂದು ಹೇಳಿದರು.

ಇಂತಹ ಮಂತ್ರಿಗಳು ಒಂದು ಕ್ಷಣವೂ ಸಂಪುಟದಲ್ಲಿ ಮುಂದುವರಿಯಬಾರದು. ಇದು ಜನ ವಿರೋಧಿ ಸರ್ಕಾರವೆಂಬ ಅಣೆಪಟ್ಟಿ ಬರುವ ಮುಂಚೆ ಈ ಉದ್ಧಟ ಮಂತ್ರಿಯನ್ನು ಸಂಪಟದಿಂದ ಕಿತ್ತು ಹಾಕಬೇಕೆಂದು ಜಗದೀಶ್ ಒತ್ತಾಯಿಸಿದರು.

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?