NEWSನಮ್ಮರಾಜ್ಯರಾಜಕೀಯಶಿಕ್ಷಣ-

ಗ್ರಂಥಾಲಯ ಶ್ರೀಸಾಮಾನ್ಯನ ವಿಶ್ವವಿದ್ಯಾಲಯವಿದ್ದಂತೆ: ಸಚಿವ ಸುರೇಶ್‍ಕುಮಾರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಬ್ಬನ್ ಪಾರ್ಕ್‍ನಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುಸಜ್ಜಿತವಾದ ಸುವರ್ಣ ಮಹೋತ್ಸವ ಗ್ರಂಥಾಲಯ ಭವನವನ್ನು ನಿರ್ಮಿಸಲಾಗುವುದುಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವಎಸ್. ಸುರೇಶ್‍ಕುಮಾರ್ ಹೇಳಿದ್ದಾರೆ.

ಸೋಮವಾರ ಬೆಂಗಳೂರಿನ ಬಿಟಿಎಂ ಬಡಾವಣೆಯ 2ನೇ ಹಂತದಲ್ಲಿ ನೂತನ ಗ್ರಂಥಾಲಯ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಇತರೆ ರಾಜ್ಯಗಳಲ್ಲಿ ಇರುವ ಗ್ರಂಥಾಲಯ ವ್ಯವಸ್ಥೆಯನ್ನು ಅವಲೋಕಿಸಿ ಎಲ್ಲ ವರ್ಗದ ಓದುಗರಿಗೆ ಅನುಕೂಲವಾಗುವ ರೀತಿಯಲ್ಲಿ ಮಾದರಿ ಸುವರ್ಣ ಮಹೋತ್ಸವ ಗ್ರಂಥಾಲಯ ನಿರ್ಮಾಣ ಮಾಡಲಾಗುವುದು ಎಂದರು.

ಗ್ರಂಥಾಲಯದೊಂದಿಗಿನ ತಮ್ಮ ಸಂಬಂಧವನ್ನು ನೆನಪಿಸಿಕೊಂಡ ಸಚಿವರು, “ನನ್ನ ಜೀವನದಲ್ಲಿ ನಾನೇನಾದರೂ ಸಾಧನೆ ಮಾಡಿದ್ದಾದರೆ ಎಲ್ಲ ಶ್ರೇಯಸ್ಸು ಸಾರ್ವಜನಿಕ ಗ್ರಂಥಾಲಯಕ್ಕೆ ಅರ್ಪಿತವಾಗಬೇಕು. ಗ್ರಂಥಾಲಯದ ಓದಿನ ಮೂಲಕವೇ ನಾನು ಕಾನೂನು ಪದವಿ ಪಡೆಯುವಂತಾಯಿತು. ಗ್ರಂಥಾಲಯ ಎಂಬುದು ಶ್ರೀಸಾಮಾನ್ಯನ ಒಂದು ವಿಶ್ವವಿದ್ಯಾಲಯವಿದ್ದಂತೆ” ಎಂದು ಅಭಿಪ್ರಾಯಪಟ್ಟರು.

ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದಿನ ಅವಶ್ಯಕತೆಗಳಿಗೆ ಅನುಗುಣವಾಗಿ ಡಿಜಿಟಲ್ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ 272 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭ ಮಾಡಿದ್ದು, ಇಡೀ ದೇಶದಲ್ಲಿ ಇದು ಅಭೂತ ಪ್ರಯತ್ನವಾಗಿದೆ ಎಂದು  ಹೇಳಿದರು.

ಕೋವಿಡ್ ಸೃಷ್ಟಿಸಿದ ಸಾಮಾಜಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿಯೇ ಮೊದಲ ಉಪಕ್ರಮವಾಗಿ ಕರ್ನಾಟಕ ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಡಿಜಿಟಲ್ ಗ್ರಂಥಾಲಯ ಮೊಬೈಲ್ ಆಪ್‍ನ್ನು ಲೋಕಾರ್ಪಣೆಗೊಳಿಸಿದ್ದು, ಇಂದು ಮೂರು ಲಕ್ಷಕ್ಕೂ ಹೆಚ್ಚು ಜನ ಈ ಆಪ್ ಬಳಸುತ್ತಿದ್ದಾರೆ. ಒಂದು ಲಕ್ಷಕ್ಕೂ ಮೀರಿದ ಪುಸ್ತಕಗಳು ಈ ಆಪ್‍ನಲ್ಲಿ ಲಭ್ಯವಿವೆ ಎಂದು ವಿವರಿಸಿದರು.

ಪುಸ್ತಕ ಸಂಸ್ಕೃತಿ ಬೆಳೆಸಲು ರಾಜ್ಯಾದ್ಯಂತ 6841 ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಇದು ದೇಶದಲ್ಲಿಯೇ ಮಾದರಿ ಗ್ರಂಥಾಲಯ ವ್ಯವಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ವರ್ಗದ ಜನರ ಜ್ಞಾನಾರ್ಜನೆಗೆ ಉಪಯೋಗವಾಗುವಂತೆ ಗ್ರಂಥಾಲಯಗಳನ್ನು ಅವಶ್ಯಕ ಸೇವೆಗಳನ್ನು ಒದಗಿಸಲುಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್‍ಕುಮಾರ್ ಹೇಳಿದರು.

ಇದೇ ಸಂದರ್ಭದಲ್ಲಿ ಸಚಿವರು ಡಿಜಿಟಲ್ ಗ್ರಂಥಾಲಯ ಉದ್ಘಾಟನೆ ನೆರವೇರಿಸಿದರು. ಶಾಸಕ ರಾಮಲಿಂಗಾರೆಡ್ಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ, ವಿಧಾನಸಭೆ ಸದಸ್ಯೆ ಸೌಮ್ಯರೆಡ್ಡಿ, ಬಿಬಿಎಂಪಿ ಸದಸ್ಯ ದೇವದಾಸ್, ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶಕುಮಾರ್ ಎಸ್. ಹೊಸಮನಿ ಸ್ವಾಗತಿಸಿದರು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ