CRIMENEWSಕೃಷಿನಮ್ಮಜಿಲ್ಲೆ

ಸ್ವಪಕ್ಷೀಯ ಸಚಿವರೇ ಸರ್ಕಾರಿ ಜಮೀನು ನುಂಗಿದ್ದಾರೆ: ಶಾಸಕ ರಮೇಶ್ ಬಂಡಿಸಿದ್ದೇಗೌಡ

ವಿಜಯಪಥ ಸಮಗ್ರ ಸುದ್ದಿ

ಶ್ರೀರಂಗಪಟ್ಟಣ: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಸಚಿವರು V/S ಶಾಸಕರ ವಾರ್ ಶುರುವಾಗಿದೆ. ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಸ್ವಪಕ್ಷೀಯ ಸಚಿವರ ವಿರುದ್ಧವೇ ಸರ್ಕಾರಿ ಜಮೀನು ನುಂಗಿದ ಆರೋಪ ಮಾಡಿದ್ದಾರೆ.

ಸಚಿವರು ಒತ್ತಡ ಹಾಕುತ್ತಿದ್ದಾರೆ ಎಂದು ಪಾಂಡವಪುರ ಎಸಿ (ಉಪವಿಭಾಗೀಯ ಅಧಿಕಾರಿ) ಶ್ರೀನಿವಾಸ್‌ಗೌಡ ಸರ್ಕಾರಿ ದಾಖಲೆಗಳನ್ನು ತಿದ್ದಿ ಒಂದೇ ದಿನಕ್ಕೆ ಬೇರೆಯವರ ಜಮೀನನ್ನು ಇನ್ನೊಬ್ಬರಿಗೆ ಖಾತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಅದು ಶ್ರೀರಂಗಪಟ್ಟಣದ ಬೆಳವಾಡಿ ಗ್ರಾಮದಲ್ಲಿ ಕೋಟ್ಯಂತರ ರೂ. ಬೆಲೆ ಬಾಳುವ ಜಮೀನನ್ನು ಇನ್ನೊಬ್ಬರಿಗೆ ಮಾಡಿದ್ದಾರೆ. ಅಲ್ಲದೇ ಸತ್ತವರ ಹೆಸರಿಗೆ ಕೋರ್ಟ್ ನೋಟಿಸ್ ಕಳುಹಿಸಿ ಬಳಿಕ ಅದೇ ದಿನವೇ ಎಸಿ ಕೋರ್ಟ್‌ನಲ್ಲಿ ಆದೇಶ ಹೊರಡಿಸಿದ್ದಾರೆ ಎಂದು ವಿವರಿಸಿದ್ದಾರೆ.

ಇನ್ನು ಶ್ರೀರಂಗಪಟ್ಟಣ ತಹಸೀಲ್ದಾರ್‌ಗೆ ಸಚಿವರ ಒತ್ತಡ ಇದೆ. ಬೇಗ ಖಾತೆ ಮಾಡಿ ಎಂದು ಖಾತೆ ಮಾಡಿಸಿದ್ದಾರೆ. ಜತೆಗೆ ಶ್ರೀರಂಗಪಟ್ಟಣದ ಹುಲಿಕೆರೆಯಲ್ಲಿ 3 ಎಕರೆ ಪ್ರದೇಶದ ಕೆರೆಯನ್ನು ಮುಚ್ಚಿದ್ದಾರೆ. ಈ ಬಗ್ಗೆ ನಾನು ಸದನದಲ್ಲಿ ಪ್ರಶ್ನೆ ಮಾಡಲು ಸಹ ಕೇಳಿದ್ದೇನೆ. ಆದರೆ ನಮ್ಮ ಕ್ಷೇತ್ರದ ಈ ಅಕ್ರಮದ ಬಗ್ಗೆ ಧ್ವನಿ ಎತ್ತಲು ನನಗೆ ಸದನದಲ್ಲಿ ಅವಕಾಶವೆ ಸಿಗುತ್ತಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ದೃಶ್ಯ ಮಾಧ್ಯಮವೊಂದರ ಜತೆ ಮಾತಾಡಿದ ಶಾಸಕರು, ನನ್ನ ಕ್ಷೇತ್ರದಲ್ಲಿ ಸರ್ಕಾರಿ ಜಾಗವನ್ನು ಖಾಸಗಿಯವರ ಹೆಸರಿಗೆ ವರ್ಗಾವಣೆ ಮಾಡಿದ ನೂರಾರು ಪ್ರಕರಣಗಳು ನಡೆದಿವೆ. ಕಾಲಿಂಗ್ ಅಟೆನ್ಷನ್ ಕೂಡ ಕೊಟ್ಟಿದ್ದೇನೆ. ಸದನದಲ್ಲಿ ಇದರ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರಿಗೆ ಬಿಡುಗಡೆಯಾಗಿರುವ 450 ಕೋಟಿ ರೂ.ನಲ್ಲಿ KSRTC ನೌಕರರಿಗೆ ಮೇ 11ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ... ಮೇ 20ರ ಪೂರ್ವ ನಿರ್ಧಾರಿತ ಮುಷ್ಕರ ಮಾಡಿ ಪೌರುಷ ತೋರಿಸಿ: ಜಂಟಿ ಸಮಿತಿಗೆ ಒಕ್ಕೂಟದ ಜಯರಾಮ್‌ ರಾಥೋಡ್‌ ಸವಾಲ್‌ KSRTC ನೌಕರರ ಕೂಟ- ಜಂಟಿ ಸಮಿತಿ ಸಭೆ ಸೇರುವ ಬಗ್ಗೆ ಎರಡು ದಿನದಲ್ಲಿ ನಿರ್ಣಯ: ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲದ ಅಡ್ಡಿ: ರಾಜ್ಯಪಾಲರ ಪವರ್ ಏನು, ಸುಪ್ರೀಂಕೋರ್ಟ್ ವಕೀಲರಾದ ಶಿವರಾಜು ಏನು ಹೇಳುತ್ತಾ... ರಾಜೀನಾಮೆ ನೀಡದೇ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ- ಸರ್ಕಾರ ವಜಾಗೊಳಿಸಿದ ರಾಜ್ಯಪಾಲ KSRTC: ನಿವೃತ್ತರಾದ 25ದಿನದೊಳಗೆ ಭವಿಷ್ಯ ನಿಧಿ ಪಾವತಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ವಿಳಂಬದ ಬಡ್ಡಿ ಬರಿಸಬೇಕು- ಪ... ಅನ್ನದಾತರಿಗೆ ಸಾಲ ಕೊಡಲು ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿ ಕೈಬಿಡಬೇಕು: ಆರ್‌ಬಿಐ ಅಧಿಕಾರಿಗಳಿಗೆ ಕುರುಬೂರು ಶಾಂತಕ... ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು KSRTC ಸಂಸ್ಥೆಯ ನೌಕರರ ಬಾಳು ಹಸನು ಮಾಡಲು ಸಂಘಟನೆಗಳ ನಾಯಕರು ಒಗ್ಗಟ್ಟಾಗಿ: ಜೀವನ್ ಮಾರ್ಟಿಸ್ ಮನವಿ ಟನ್‌ ಕಬ್ಬಿಗೆ 4500 ರೂ. ನಿಗದಿಗೊಳಿಸಿ: ಕೇಂದ್ರ ಸರ್ಕಾರಕ್ಕೆ ಅತ್ತಹಳ್ಳಿ ದೇವರಾಜ್ ಆಗ್ರಹ