CRIMENEWSಕೃಷಿನಮ್ಮಜಿಲ್ಲೆ

ಸ್ವಪಕ್ಷೀಯ ಸಚಿವರೇ ಸರ್ಕಾರಿ ಜಮೀನು ನುಂಗಿದ್ದಾರೆ: ಶಾಸಕ ರಮೇಶ್ ಬಂಡಿಸಿದ್ದೇಗೌಡ

ವಿಜಯಪಥ ಸಮಗ್ರ ಸುದ್ದಿ

ಶ್ರೀರಂಗಪಟ್ಟಣ: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಸಚಿವರು V/S ಶಾಸಕರ ವಾರ್ ಶುರುವಾಗಿದೆ. ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಸ್ವಪಕ್ಷೀಯ ಸಚಿವರ ವಿರುದ್ಧವೇ ಸರ್ಕಾರಿ ಜಮೀನು ನುಂಗಿದ ಆರೋಪ ಮಾಡಿದ್ದಾರೆ.

ಸಚಿವರು ಒತ್ತಡ ಹಾಕುತ್ತಿದ್ದಾರೆ ಎಂದು ಪಾಂಡವಪುರ ಎಸಿ (ಉಪವಿಭಾಗೀಯ ಅಧಿಕಾರಿ) ಶ್ರೀನಿವಾಸ್‌ಗೌಡ ಸರ್ಕಾರಿ ದಾಖಲೆಗಳನ್ನು ತಿದ್ದಿ ಒಂದೇ ದಿನಕ್ಕೆ ಬೇರೆಯವರ ಜಮೀನನ್ನು ಇನ್ನೊಬ್ಬರಿಗೆ ಖಾತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಅದು ಶ್ರೀರಂಗಪಟ್ಟಣದ ಬೆಳವಾಡಿ ಗ್ರಾಮದಲ್ಲಿ ಕೋಟ್ಯಂತರ ರೂ. ಬೆಲೆ ಬಾಳುವ ಜಮೀನನ್ನು ಇನ್ನೊಬ್ಬರಿಗೆ ಮಾಡಿದ್ದಾರೆ. ಅಲ್ಲದೇ ಸತ್ತವರ ಹೆಸರಿಗೆ ಕೋರ್ಟ್ ನೋಟಿಸ್ ಕಳುಹಿಸಿ ಬಳಿಕ ಅದೇ ದಿನವೇ ಎಸಿ ಕೋರ್ಟ್‌ನಲ್ಲಿ ಆದೇಶ ಹೊರಡಿಸಿದ್ದಾರೆ ಎಂದು ವಿವರಿಸಿದ್ದಾರೆ.

ಇನ್ನು ಶ್ರೀರಂಗಪಟ್ಟಣ ತಹಸೀಲ್ದಾರ್‌ಗೆ ಸಚಿವರ ಒತ್ತಡ ಇದೆ. ಬೇಗ ಖಾತೆ ಮಾಡಿ ಎಂದು ಖಾತೆ ಮಾಡಿಸಿದ್ದಾರೆ. ಜತೆಗೆ ಶ್ರೀರಂಗಪಟ್ಟಣದ ಹುಲಿಕೆರೆಯಲ್ಲಿ 3 ಎಕರೆ ಪ್ರದೇಶದ ಕೆರೆಯನ್ನು ಮುಚ್ಚಿದ್ದಾರೆ. ಈ ಬಗ್ಗೆ ನಾನು ಸದನದಲ್ಲಿ ಪ್ರಶ್ನೆ ಮಾಡಲು ಸಹ ಕೇಳಿದ್ದೇನೆ. ಆದರೆ ನಮ್ಮ ಕ್ಷೇತ್ರದ ಈ ಅಕ್ರಮದ ಬಗ್ಗೆ ಧ್ವನಿ ಎತ್ತಲು ನನಗೆ ಸದನದಲ್ಲಿ ಅವಕಾಶವೆ ಸಿಗುತ್ತಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ದೃಶ್ಯ ಮಾಧ್ಯಮವೊಂದರ ಜತೆ ಮಾತಾಡಿದ ಶಾಸಕರು, ನನ್ನ ಕ್ಷೇತ್ರದಲ್ಲಿ ಸರ್ಕಾರಿ ಜಾಗವನ್ನು ಖಾಸಗಿಯವರ ಹೆಸರಿಗೆ ವರ್ಗಾವಣೆ ಮಾಡಿದ ನೂರಾರು ಪ್ರಕರಣಗಳು ನಡೆದಿವೆ. ಕಾಲಿಂಗ್ ಅಟೆನ್ಷನ್ ಕೂಡ ಕೊಟ್ಟಿದ್ದೇನೆ. ಸದನದಲ್ಲಿ ಇದರ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಗೃಹಜ್ಯೋತಿಯಿಂದ ಸರ್ಕಾರಿ ನೌಕರರ ಹೊರಗಿಡಲು ಸರ್ಕಾರದ ಚಿಂತನೆ ಸರ್ಕಾರಿ ನೌಕರಿ ಮಹಿಳೆಯರಿಗೆ ಇನ್ನು ಮುಂದೆ ಸಿಗಲ್ವ ಶಕ್ತಿ ಯೋಜನೆಯ ಉಚಿತ ಪ್ರಯಾಣ?