CrimeNEWSಸಂಸ್ಕೃತಿ

ಜಾತ್ರೆಯಲ್ಲಿ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಐವರ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಜಾತ್ರೆಯಲ್ಲಿ ತಯಾರಿಸಿದ್ದ ಪ್ರಸಾದ ಸೇವನೆ ಮಾಡಿದ 50ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಭೀರೇಶ್ವರ ಮತ್ತು ಕರೆಮ್ಮದೇವಿ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ಈ ವೇಳೆ ಜಾತ್ರೆಯಲ್ಲಿ ಅನ್ನ, ಮಾವಿನ ಹಣ್ಣಿನ‌ ಶೀಖರಣಿ ಪ್ರಸಾದ ಮಾಡಲಾಗಿದ್ದು ಆ ಪ್ರಸಾದ ಸೇವಿಸಿದ 51 ಜನರಿಗೆ ಏಕಾಏಕಿ ವಾಂತಿಬೇಧಿ ಆಗಿದೆ.

ಕೂಡಲೇ ಅಸ್ವಸ್ಥಗೊಂಡವರನ್ನು ಸ್ಥಳೀಯ ಹಾಗೂ ಸವದತ್ತಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆಗೆ ನೀಡಲಾಗುತ್ತಿದ್ದು, ಅವರಲ್ಲಿ ಐವರ ಸ್ಥತಿ ಗಂಭೀರವಾಗಿದ್ದು ಅವರನ್ನು ಪ್ರಥಮ ಚಿಕಿತ್ಸೆ ಬಳಿಕ ಧಾರವಾಡದ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿದೆ.

ಘಟನೆ ಜರುಗಿದ ಬಳಿಕ ಹೆಚ್ಚಿನ ಅನಾಹುತ ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸದ್ಯ ಗ್ರಾಮದಲ್ಲಿಯೇ ಬೀಡುಬಿಟ್ಟಿದ್ದು, ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.

ಈವರೆಗೂ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ. ಮಹೇಶ ಜೋಶಿ ಮಾಹಿತಿ ನೀಡಿದ್ದು, ಶಾಸಕ ವಿಶ್ವಾಸ ವೈದ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ