CrimeNEWSನಮ್ಮರಾಜ್ಯ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲ ಗೆಹ್ಲೋಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದೆ ಎಲ್ಲಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಶನಿವಾರ (ಆ.17) ಬೆಳಗ್ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅನುಮತಿ ನೀಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ.

ದೂರುದಾರ, ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ಮಾತನಾಡಿ, ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಒಳ್ಳೆಯ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಇನ್ನು  ನನಗೂ ರಾಜಭವನದಿಂದ ಕರೆ ಬಂದಿದೆ. ಈಗಾಗಲೇ ಮಡಿಕೇರಿಯಿಂದ ನಾನು ಹೊರಟಿದ್ದೇನೆ. ಮಧ್ಯಾಹ್ನದ ವೇಳೆಗೆ ನಾನು ಅವರನ್ನು ಭೇಟಿಯಾಗಲಿದ್ದೇನೆ. ಮುಂದಿನ ಕಾನೂನು ಹೋರಾಟ ಕೂಡ ತುಂಬಾ ದೀರ್ಘವಾಗಿ ಇರಲಿದೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರ ರಾಜಕೀಯ ಜೀವನದ ಅತಿದೊಡ್ಡ ಸಂಕಷ್ಟ ಇದು ಎಂದು ಹೇಳಲಾಗಿದೆ. ಮೂರು ದೂರುಗಳನ್ನು ಒಟ್ಟಿಗೆ ಸೇರಿಸಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

Leave a Reply

error: Content is protected !!
LATEST
KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌