NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರು ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ನಂದಿ ಧ್ವಜಕ್ಕೆ ಪೂಜೆ ಮಧ್ಯಾಹ್ನ1 ರಿಂದ 1.18 ಗಂಟೆಯ ಶುಭ ಧನುರ್ ಲಗ್ನದಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಪೂಜೆ ನೆರವೇಸಿದರು.

ಅರಮನೆ ಆವರಣದ ಕೋಟೆ ಆಂಜನೇಯ ಸ್ವಾಮಿ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಾಯಿತು. ಈ ವೇಳೆ ಸಿಎಂ ಈಡುಗಾಯಿ ಒಡೆದರು. ಆದರೆ, ಎರಡು ಸಲ ಕಾಯಿ ಒಡೆಯದೆ ವಿಫಲರಾದರು. ಆದರೂ ಛಲಬಿಡದೆ ಸಿಎಂ ಮೂರನೇ ಬಾರಿಗೆ ಈಡುಗಾಯಿ ಒಡೆಯುವಲ್ಲಿ ಯಶಸ್ವಿಯಾದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿಖ್ಯಾತ ಜಂಬೂಸವಾರಿ ಇಂದು ನಡೆಯಲಿದೆ. ಈಗಾಗಲೇ ನಂದಿ ಧ್ವಜ ಪೂಜೆ ನೆರವೇರಿದೆ. ಎಲ್ಲ ಪ್ರವಾಸಿಗರಿಗೆ ಸ್ವಾಗತ ಕೋರುತ್ತೇನೆ ಎಂದು ತಿಳಿಸಿದರು.

ಈ ಹಿಂದೆ ಸಿಎಂ ಆಗಿದ್ದಾಗಲೂ ನಾನು ದಸರಾದಲ್ಲಿ ಭಾಗಿಯಾಗಿದ್ದೇನೆ. ಸಿಎಂ ಆಗಿ 8 ಸಲ ದಸರಾಕ್ಕೆ ಬಂದಿದ್ದೇನೆ. ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ರಾಜ್ಯದ ಜನ ಎಲ್ಲರೂ ಖುಷಿಯಾಗಿದ್ದರೆ ಸರ್ಕಾರ ಸಹ ಸಂತೋಷವಾಗಿರುತ್ತದೆ ಎಂದು ಹೇಳಿದರು.

ಇದಕ್ಕೂ ಮುನ್ನ ಅರಮನೆ ಬಲರಾಮ ದ್ವಾರದ ಕೋಡಿ ಸೋಮೇಶ್ವರ ದೇವಾಲಯದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ದರಾಮಯ್ಯ ಅವರು ಪೂಜೆ ಸಲ್ಲಿಸುವ ವೇಳೆ ಸಚಿವ ಮಹಾದೇವಪ್ಪ, ಭೈರತಿ ಸುರೇಶ್ ಇನ್ನಿತರರು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ