NEWSಕ್ರೀಡೆಶಿಕ್ಷಣ-

ಮೈಸೂರು ಜಿಲ್ಲಾಮಟ್ಟದ ಥ್ರೋಬಾಲ್‌ನಲ್ಲಿ ಗೆಲುವಿನ ನಗೆ ಬೀರಿದ ಮೂಗೂರು ಶಾಲೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಮೂಗೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ವಿಜಯದ ನಗೆ ಬೀರಿದ್ದಾರೆ.

ಮೂಗೂರು ಕೆಪಿಎಸ್‌ ಶಾಲಾ ಆವರಣದಲ್ಲಿ ಇಂದು ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಒಟ್ಟು ಮೈಸೂರು ಜಿಲ್ಲೆಯ ಒಟ್ಟು ಒಂಬತ್ತು ತಾಲೂಕಿನ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಭಾಗವಹಿಸಿದ್ದವು.

ಈ ವೇಳೆ ಬಾಲಕರ ವಿಭಾಗದ ಪಂದ್ಯಾವಳಿಯಲ್ಲಿ ತಿ.ನರಸೀಪುರ ತಾಲೂಕಿನ ಮೂಗೂರು ಕರ್ನಾಟಕ ಪಬ್ಲಿಕ್ ಶಾಲೆಯ ಮಕ್ಕಳು ಪ್ರತಿನಿಧಿಸಿದ್ದು ಫೈನಲ್ ನಲ್ಲಿ ಮೈಸೂರು ದಕ್ಷಿಣ ತಾಲೂಕು ತಂಡವನ್ನು 2-0 ಅಂತರದಲ್ಲಿ ಸೋಲಿಸಿ, ವಿಜಯದ ನಗೆ ಬೀರಿದರು.

ಈ ಪಂದ್ಯದಲ್ಲಿ ವಿದ್ಯಾರ್ಥಿಗಳಾದ ನಂದನ್, ಗೌತಮ, ನಿತಿನ್ ಕುಮಾರ್, ಸಚಿನ್, ಹರ್ಷ, ಮಹೇಶ್ ಕುಮಾರ್, ಸಂತೋಷ್ ಕುಮಾರ್ ಮಹೇಶ, ಮನು ತಂಡವನ್ನು ಪ್ರತಿನಿಧಿಸಿದ್ದರು.

ಈ ವೇಳೆ ಮಾತನಾಡಿದ ಶಾಲೆಯ ಪ್ರಾಂಶುಪಾಲೆ ರಾಜೇಶ್ವರಿ, ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಯಲ್ಲಿ ಹೆಚ್ಚು ಉತ್ಸಾಹದಿಂದ ಪಾಲ್ಗೊಳ್ಳಬೇಕು. ಈಗ ಸರಕಾರದಿಂದ ಕ್ರೀಡೆಗೆ ಸಾಕಷ್ಟು ಉತ್ತೇಜನ ಸಿಗುತ್ತಿದೆ. ಸಂಘ, ಸಂಸ್ಥೆಗಳು ಆಸಕ್ತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುತ್ತಿವೆ. ಇಂದಿನ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಸಾಕಷ್ಟು ಅವಕಾಶ ಲಭಿಸುತ್ತಿದೆ. ಇದನ್ನು ಬಳಸಿಕೊಂಡು ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಲು ಯತ್ನಿಸಬೇಕು ಎಂದರು.

ಇನ್ನು ತಮ್ಮ ಶಾಲೆಯ ಮಕ್ಕಳು ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, ಮಂದ್ಯ ಎಂದ ಮೇಲೆ ಸೋಲು ಗೆಲುವು ಇದ್ದೆ ಇರುತ್ತದೆ. ಆದರೆ ಅವೆರಡನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಥ್ರೋಬಾಲ್‌ನಲ್ಲಿ ತಮ್ಮ ಶಾಲಾ ಮಕ್ಕಳು ಗೆದ್ದಿರುವುದಕ್ಕೆ ಶಾಲೆಯ ಪ್ರಭಾರ ಉಪ ಪ್ರಾಂಶುಪಾಲ ಹನುಮಂತಪ್ಪ ತಳವಾರ್, ದೈಹಿಕ ಶಿಕ್ಷಣ ಶಿಕ್ಷಕ ಮಲ್ಲೇಶ್, ಎಸ್‌ಡಿಎಂಸಿ ಉಪಾಧ್ಯಕ್ಷ ಸಿದ್ದರಾಜು, ಶಿಕ್ಷಕರಾದ ದೇವರಾಜು, ಕೇಶವ್, ಕಾವೇರಿ, ವೀಣಾ, ವನಜಾ, ರಮೇಶ್, ಆನಂದ, ಮಹಾದೇವ್, ರಂಜಿತಾ ಅವರು ಅಭಿನಂದಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ