ಮೈಸೂರು: ಶೀಘ್ರದಲ್ಲೇ ಕಬಿನಿ ನದಿಯಿಂದ ನಗರದ ಹೊರ ವಲಯ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ರೂಪಾ ನಗರದಲ್ಲಿ ಸ್ಥಳೀಯ ನಿವಾಸಿಗಳ ಸಂಘ ಆಯೋಜಿಸಿದ್ದ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಸಸಿ ವಿತರಿಸಿ, ನಮ್ಮ ವನದಲ್ಲಿ ಸಸಿಗಳನ್ನು ನೆಟ್ಟ ಬಳಿಕ ನಡೆದ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಚಾಮುಂಡೇಶ್ವರಿ ಕ್ಷೇತ್ರ ಹೊರಗಿನವರಿಗೆ ಯಾರಿಗೂ ಪರಿಚಯವಿಲ್ಲ. ಚಾಮರಾಜ, ನರಸಿಂಹರಾಜ, ಕೃಷ್ಣರಾಜ ಮೂರು ಕ್ಷೇತ್ರಗಳು ರಿಂಗ್ ರಸ್ತೆ ಒಳಗೆ ಇದ್ದರೆ, ಚಾಮುಂಡೇಶ್ವರಿ ಕ್ಷೇತ್ರ ಒಳಗೆ ಮತ್ತು ಹೊರಗೆ ಇರುವ ಜತೆಗೆ ನಾಲ್ಕು ದಿಕ್ಕುಗಳಲ್ಲೂ ಹೊಂದಿದೆ. ಒಂದು ನಗರಸಭೆ, ನಾಲ್ಕು ಪಟ್ಟಣ ಪಂಚಾಯಿತಿ, ಐದು ನಗರಪಾಲಿಕೆ ವಾರ್ಡ್ಗಳು ಸೇರಿದಂತೆ 40 ಕಿ.ಮೀ ಪ್ರದೇಶ ಹೊಂದಿರುವ ಕ್ಷೇತ್ರ ಇದ್ದರೆ ಅದು ಚಾಮುಂಡೇಶ್ವರಿ ಕ್ಷೇತ್ರ ಮಾತ್ರ ಎಂದರು.
ಮೈಸೂರು ನಗರದ ಬಡಾವಣೆಗಳು ಇಂದು ಸಾಕಷ್ಟು ಬೆಳೆದಿವೆ. ಗ್ರಾಮಾಂತರ ಪ್ರದೇಶಗಳಿಂದ ಬಂದವರು ಮಕ್ಕಳನ್ನು ಓದಿಸಲು ಅಥವಾ ನೆಮ್ಮದಿಯ ಜೀವನ ಕಂಡುಕೊಳ್ಳಲು ರೂಪಾನಗರ ಸೇರಿದಂತೆ ಅನೇಕ ಬಡಾವಣೆಗಳಿಗೆ ಬಂದು ನಗರದಲ್ಲಿ ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆ.
ನಿವೇಶನ ಖರೀದಿಸಿ ಮನೆ ಕಟ್ಟಿಸಿದ್ದಾರೆ. ಬಡಾವಣೆಗಳನ್ನು ರಚನೆ ಮಾಡಿದ ಮಾಲೀಕರು ಸರಿಯಾದ ರೀತಿಯಲ್ಲಿ ಯುಜಿಡಿ, ಸೆಫ್ಟಿಕ್ ಟ್ಯಾಂಕ್, ರಸ್ತೆ, ವಿದ್ಯುತ್ ವ್ಯವಸ್ಥೆ ಮಾಡದೆ ನಿವೇಶನ ಹಂಚಿಕೆ ಮಾಡಿ ಕೈ ತೊಳೆದುಕೊಂಡರು. ಮಾಲೀಕರು ನಿವೇಶನ ಮಾರಿ ಹಣ ಮಾಡಿಕೊಂಡರೆ, ಖರೀದಿಸಿದವರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದರು.
ಹಳೆಯ ಉಂಡುವಾಡಿ ಯೋಜನೆಯನ್ನು ಅನುಷ್ಠಾನಕ್ಕೆ ತರಲು ನಡೆಸಿದ ಶ್ರಮ ನನಗೆ ಗೊತ್ತು. ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಸಚಿವ ಸಂಪುಟ ಸಭೆಗೆ ಅಂದಿನ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಯೋಜನೆಯ ವಿಷಯ ಮಂಡನೆ ಮಾಡದಿದ್ದಾಗ ಗಲಾಟೆ ಮಾಡಿ ಚರ್ಚೆಗೆ ತರಲಾಯಿತು. ಈಗ 26 ಟ್ಯಾಂಕ್ಗಳ ನಿರ್ಮಾಣ ನಡೆಯುತ್ತಿದೆ. ಪೈಪ್ಲೈನ್ ಕಾಮಗಾರಿ ಶುರುವಾಗಿದೆ ಎಂದು ಹೇಳಿದರು.
ಯುಜಿಡಿ ಕಾಮಗಾರಿಗೆ ಅನುಮೋದನೆ ನೀಡಿದ್ದು, ಶೀಘ್ರದಲ್ಲೇ ಟೆಂಡರ್ಪ್ರಕ್ರಿಯೆ ನಡೆಯುತ್ತಿದೆ. ರೂಪಾನಗರಕ್ಕೆ ಸಂಬಂಧಿಸಿದಂತೆ ಮೂರು ಎಕರೆ ಖರೀದಿಸಿ ಸೆಫ್ಟಿಂಕ್ ಟ್ಯಾಂಕ್ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮರಗಳನ್ನು ಬೆಳೆಸಬೇಕು: ಬಡಾವಣೆಗಳಲ್ಲಿ ಮರಗಿಡಗಳನ್ನು ಬೆಳೆಸಿ ಪೋಷಿಸಬೇಕು. ಮರ ಇದ್ದರೆ ಪ್ರಕೃತಿ ಉಳಿಯಲಿದೆ. ಹಾಗಾಗಿ, ಸಾರ್ವಜನಿಕರು ಹೆಚ್ಚು ಗಿಡಗಳನ್ನು ನೆಡಬೇಕು ಎಂದು ಕಿವಿಮಾತು ಹೇಳಿದರು.
ಗ್ರಾಮಾಂತರ ಪ್ರದೇಶಗಳಲ್ಲಿ ಮೊದಲು ಕುಂಟುಬಿಲ್ಲೆ ಅಟ, ರಿಂಗ್ ಆಟ, ಬುಗುರಿ ಆಟಗಳನ್ನು ಆಡುತ್ತಿದ್ದರು. ಶಾಲೆಗಳಲ್ಲೂ ಅಂತಹ ಕ್ರೀಡೆಗಳು ಶಾಲೆಗಳಲ್ಲಿ ಇರುತ್ತಿದ್ದವು. ಈಗ ಕ್ರಿಕೆಟ್, ಫುಟ್ಬಾಲ್ ಬಿಟ್ಟರೆ ಬೇರೆ ಆಟಗಳನ್ನು ಮರೆಯುವಂತಾಗಿದೆ ಎಂದರು.
ಅಧ್ಯಕ್ಷತೆಯನ್ನು ಎನ್ಆರ್ WA ಅಧ್ಯಕ್ಷ ಎಂ.ಎನ್.ನರಸಿಂಹಮೂರ್ತಿ ವಹಿಸಿದ್ದರು. ಸಮಾರಂಭದಲ್ಲಿ ಸೋಮಿಜಿ, ರವಿಕುಮರ್, ದಾಸನಕೊಪ್ಪಲು ದೇವರಾಜು, ಹರೀಶ್, ಸಿದ್ದು, ಕಿರಣ್, ಪ್ರವೀಣ್ ಇದ್ದರು.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...