NEWSಕೃಷಿನಮ್ಮಜಿಲ್ಲೆ

ಮೈಸೂರು: ರೈಲು ತಡೆಯಲು ಮುಂದಾದ ರೈತರ ವಶಕ್ಕೆ ಪಡೆದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಗೂ ರೈತರ ವಿರುದ್ಧ ನಡೆದುಕೊಳ್ಳುತ್ತಿರು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಲು ರೈಲು ತಡೆ ಚಳವಳಿ ನಡೆಸುತ್ತಿದ್ದ ರೈತರನ್ನು ಮೈಸೂರಿನ ರೈಲು ನಿಲ್ದಾಣದ ಬಳಿ ಪೊಲೀಸರು ಬಂಧಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ರೈಲ್ವೆ ನಿಲ್ದಾಣದ ಬಳಿ ಜಮಾಯಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ರೈಲುಗಳನ್ನು ತಡೆಯಲು ಮುಂದಾದ ರೈತರು ಪೊಲೀಸರು ಬಂಧಿಸಿ ಕರೆದೊಯ್ದರು.

ಈ ವೇಳೆ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌, ರಾಜ್ಯದ ಎಲ್ಲ ರೈತರು ದೆಹಲಿಗೆ ಹೋಗಲು ಸಾಧ್ಯವಿಲ್ಲ. ನಮ್ಮ ಪರವಾಗಿ ಕೆಲಸ ಮಾಡಬೇಕಾದ ಎಂಪಿಗಳು ನಿದ್ರೆ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಮೇಲೆ ಗೂಂಡಾಗಿರಿ ಮಾಡುತ್ತಿದೆ. ಸರ್ಕಾರಕ್ಕೆ ರೈತರು ಬಿಸಿ ಮುಟ್ಟಿಸಲು ಈ ರೀತಿಯ ಚಳವಳಿ ನಡೆಸುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಮಾಡದಿದ್ದರೆ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ಮರಣ ಶಾಸನವನ್ನು ರೈತರು ಬರೆಯುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರಕ್ಕೆ ಬಂಡವಾಳ ಶಾಹಿಗಳ ಸಾಲ ಮನ್ನಾ ಮಾಡಲು ಹೆಚ್ಚಿನ ಕಾಳಜಿ ಇದೆ. ಆದರೆ, ರೈತರ ಸಾಲ ಮನ್ನಾ ವಿಚಾರ, ಸ್ವಾಮಿನಾಥನ್ ವರದಿಯನ್ವಯ ಬೆಂಬಲ ಬೆಲೆ, ಡಬ್ಲ್ಯೂಟಿಒ ಒಪ್ಪಂದ, ರೈತರಿಗೆ ಪಿಂಚಣಿ ನೀಡುವ ಯೋಜನೆ, ಬೆಳೆ ವಿಮೆ ಪದ್ಧತಿ, ಕಳೆದು ವರ್ಷ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ 750 ರೈತ ಕುಟುಂಬಕ್ಕೆ ಸರ್ಕಾರದ ನೆರವು ನೀಡುವ ಬಗ್ಗೆ ಕ್ರಮ ಕೈಗೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.

ಇನ್ನು ರೈತರು ನ್ಯಾಯ ಕೇಳಿದರೆ ಗೋಲಿಬಾರ್ ಮಾಡುತ್ತಾರೆ, ಇದು ದೇಶದ ರೈತನಿಗೆ ಮಾಡುವ ಅಪಮಾನ. ರೈತರು ಗುಲಾಮರು ಅಲ್ಲ ಭಿಕ್ಷುಕರು ಅಲ್ಲ, ನಿಮಗೆ ಅಧಿಕಾರ ಶಾಶ್ವತಾನ? ಕೂಡಲೇ ಸಮಸ್ಯೆ ಬಗೆಹರಿಸಿ ಅನ್ನದಾತನ ಋಣ ತೀರಿಸಿ ಎಂದು ಚಳವಳಿ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ನಡೆಯುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯತರ) ಸಂಘಟನೆಯ ಹೋರಾಟದ ರೈತರು ಯಾರು ದೇಶದ್ರೋಹಿಗಳಲ್ಲ, ನಾವು ರೈತ ಮುಖಂಡರಾದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ದೆಹಲಿಗೆ ಹೋಗುವಾಗ ಮಾರ್ಗ ಮಧ್ಯದಲ್ಲಿ ಭೂಪಾಲ್‌ನಲ್ಲಿ ತಡೆದು ಪೊಲೀಸರ ಮೂಲಕ ಬಂಧಿಸಿ ಮೂರು ದಿನದ ನಂತರ ವಾಪಸ್ ಕಳಿಸಿದ್ದೀರಿ. ದೆಹಲಿಯಲ್ಲಿ ಹೋರಾಟ ಮಾಡುವ ಪಂಜಾಬ್ ಹರಿಯಾಣ ರೈತರನ್ನು ದೇಶ ವಿರೋಧಿಗಳು ಎನ್ನುತೀರಿ. ಇದರ ಅರ್ಥ ಏನು ಎಂದು ಪ್ರಶ್ನಿಸಿದರು.

ಇನ್ನು ರೈತರು ಸಮಸ್ಯೆ ಬಗೆಹರಿಯುವ ತನಕ ಚಳುವಳಿಯಿಂದ ಹಿಂದೆ ಸರಿಯುವುದಿಲ್ಲ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ್, ರಾಜಸ್ಥಾನ ರೈತರ ಹೋರಾಟಕ್ಕೆ ನಾವು ಸದಾ ಜತೆಯಾಗಿರುತ್ತೇವೆ. ನಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಚಳವಳಿಯಲ್ಲಿ ಜಿಲ್ಲೆಯ ನೂರಾರು ರೈತರು ಭಾಗವಹಿಸಿದ್ದರು.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ