NEWSಮೈಸೂರುಸಂಸ್ಕೃತಿ

ಮೈಸೂರು ದಸರಾ: ಭರದಿಂದ ಸಾಗಿದೆ 24.5 ಸಾವಿರ ಬಲ್ಬ್ ಬದಲಿಸುವ ಕಾರ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಸೇರಿದಂತೆ ನಗರದ ವಿವಿಧೆಡೆ ಸಿದ್ಧತಾ ಕಾರ್ಯಗಳು ಚುರುಕು ಪಡೆದುಕೊಂಡಿವೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅರಮನೆ ಕಟ್ಟಡಕ್ಕೆ ಶಾಶ್ವತವಾಗಿ ಮಾಡಿರುವ ದೀಪಾಲಂಕಾರದ ಹಾಳಾಗಿದ್ದ 24.5 ಸಾವಿರ ಬಲ್ಬ್ ಬದಲಿಸುವ ಕಾರ್ಯದಲ್ಲಿ 15 ದಿನದಿಂದ ಅರಮನೆ ಸಿಬ್ಬಂದಿ ಒಳಗೊಂಡಂತೆ ಎಲೆಕ್ಟ್ರಿಷಿಯನ್‌ಗಳು ತೊಡಗಿದ್ದು ಕೆಲ ದಿನಗಳಲ್ಲೇ ಪೂರ್ಣಗೊಳ್ಳಲಿದೆ.

ಅರಮನೆ ಮುಖ್ಯ ಕಟ್ಟಡ, ಪ್ರವೇಶದ್ವಾರ, ವಿವಿಧ ಗೋಡೆ ಮೇಲೆ ಅಳವಡಿಸಿರುವುದೂ ಸೇರಿ ಒಟ್ಟು 1 ಲಕ್ಷ ಬಲ್ಬ್‌ಗಳಿಂದ ಬೆಳಕು ಝಗಮಗಿಸಿ ಅರಮನೆ ಸೌಂದರ್ಯ ವೃದ್ಧಿಸಲಿದೆ. ಆದರೆ, ಪ್ರತಿದಿನ ಪಾರಿವಾಳಗಳು ಹಾರಾಡುವಾಗ, ಜೋರಾಗಿ ಗಾಳಿ ಬೀಸಿದಾಗ, ದೀಪಾಲಂಕಾರದ ವೇಳೆ ಮಳೆ ಬಂದಾಗ ಕೆಲವು ಬಲ್ಬ್‌ಗಳು ಸಿಡಿದುಹೋಗುತ್ತವೆ.

ಹೀಗಾಗಿ ಪ್ರತಿ ವರ್ಷ ದಸರಾ ವೇಳೆ 15 ರಿಂದ 20 ಸಾವಿರ ಬಲ್ಬ್ ಹಾನಿಗೀಡಾಗುತ್ತವೆ. ಇದರಿಂದ ದೀಪಗಳ ಸಾಲು ಪರಿಶೀಲಿಸಿ ಕೆಟ್ಟಿರುವ ಬಲ್ಬ್ ಗುರುತಿಸಲಾಗಿದ್ದು, ಅದಕ್ಕಾಗಿ ದೆಹಲಿ, ಕೋಲ್ಕತ್ತದಲ್ಲಿ ವಿಶೇಷವಾಗಿ ಬಲ್ಬ್ ತರಿಸಲಾಗಿದೆ. ಆದರೆ, ಈ ಬಾರಿ ಕೊಂಚ ಹೆಚ್ಚಾಗಿ ಬಲ್ಬ್ ಹಾಳಾಗಿದ್ದು, ಅವುಗಳನ್ನು ಬದಲಾಯಿಸಲಾಗುತ್ತಿದೆ.

ದೇಶದೆಲ್ಲಡೆ ಎಲ್‌ಇಡಿ ದೀಪ ಹೆಚ್ಚಾಗಿದ್ದರೂ ಪಾರಂಪರಿಕ ಸೌಂದರ್ಯ ಕಾಯ್ದುಕೊಳ್ಳಲು ಮೈಸೂರು ಅರಮನೆಗೆ ಇಂದಿಗೂ ಸಾಮಾನ್ಯ ಬಲ್ಬ್‌ಗಳನ್ನೇ ಬಳಸಲಾಗುತ್ತಿದೆ. ಸ್ವರ್ಣ ಬಣ್ಣದಿಂದ ಬೆಳಗಲಿರುವ ಈ ಬಲ್ಬ್‌ಗಳು ಅರಮನೆ ಅಂದಕ್ಕೆ ಮತ್ತಷ್ಟು ಮೆರುಗು ನೀಡುತ್ತವೆ. ಒಟ್ಟಾರೆ ದಸರಾಕ್ಕೆ ದಿನಗಳು ಹತ್ತಿರವಾಗುತ್ತಿದ್ದಂತೆಯೇ ಸಿದ್ಧತಾ ಕಾರ್ಯಗಳು ಭರದಿಂದ ಸಾಗುತ್ತಿವೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ