NEWSಕೃಷಿನಮ್ಮರಾಜ್ಯ

ಮೈಸೂರು: ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ಕಾಡಾ ಕಚೇರಿಮುಂದೆ ರೈತರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಪ್ರತಿಭಟನೆ ನಡೆಸಿದರು.

ಇಂದು ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ನೇತೃತ್ವದಲ್ಲಿ ನಗರದ ಕಾಡಾ ಕಚೇರಿ ಮುಂದೆ ಜಮಾಯಿಸಿದ ರೈತರು ಕಾವೇರಿ, ಕಬಿನಿ ಅಚ್ಚುಕಟ್ಟು ಭಾಗದ ಕೆರೆಗಳು ಒಣಗಿದ್ದು ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಬೆಳೆಗಳು ಒಣಗಿ ಹಾಳಾಗುತ್ತಿವೆ ತಕ್ಷಣವೇ ಕಾಲುವೆಗಳ ಮೂಲಕ ನೀರು ಹರಿಸಿ ಕೆರೆ ಕಟ್ಟೆಗಳನ್ನು ತುಂಬಿಸಿ ಎಂದು ಆಗ್ರಹಿಸಿದರು.

ಇದೇ ವೇಳೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘದ ನೂರಾರು ರೈತರು ಪ್ರತಿಭಟನೆ ನಡೆಸಿ ದಕ್ಷಿಣ ವಲಯ ನೀರಾವರಿ ಇಲಾಖೆಯ ಉಪ ಮುಖ್ಯ ಅಭಿಯಂತರ ಗೌತಮ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಮೂರು ದಿನದ ಒಳಗೆ ನೀರು ಹರಿಸುವ ನಿರ್ಧಾರ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ರೈತರು ಮಾಡಿದ ಸಾಲ ತೀರಿಸಲಾಗದೇ ಜೀವನ ನಡೆಸಲು ಕಷ್ಟಕರ ವಾಗಿದ್ದು, ಸರ್ಕಾರವೇ ಬರಗಾಲ ಘೋಷಣೆ ಮಾಡಿದ್ದು, ಬರ ಪರಿಹಾರ ಎಕರೆಗೆ ಕನಿಷ್ಠ 25 ಸಾವಿರ ರೂ. ಹಾಗೂ ಜೀವನ ನಿರ್ವಹಣೆಗೆ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 10 ಸಾವಿರ ರೂ.ಗಳನ್ನು ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ತಮಿಳುನಾಡಿನ ಮುಖ್ಯಮಂತ್ರಿಗಳ ಬಾಂಧವ್ಯಕ್ಕೆ ತಲೆಬಾಗಿ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಿ ಖಾಲಿ ಮಾಡಿದ ಕಾರಣ ಬೆಂಗಳೂರು ನಗರದ ನಿವಾಸಿಗಳು ಕಾವೇರಿ ಅಚ್ಚುಕಟ್ಟು ಭಾಗದ ರೈತರು ನೀರಿನ ಸಮಸ್ಯೆಗೆ ಬಲಿಯಾಗಿದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಈ ಅಚ್ಚುಕಟ್ಟು ಭಾಗದ ಕೆರೆಕಟ್ಟೆಗಳು ಒಣಗಿ ಹೋಗಿವೆ. ಜನ ಜಾನುವಾರುಗಳ ಕುಡಿಯುವ ನೀರಿಗೆ ಹಾಹಾರ ಎದ್ದಿದೆ. ಹೀಗಾಗಿ ಕೂಡಲೇ ನಾಲೆಗಳಲ್ಲಿ ನೀರು ಹರಿಸಿ ರೈತರ ರಕ್ಷಿಸಬೇಕು. ಕಾವೇರಿ ಅಚ್ಚು ಕಟ್ಟು ಭಾಗದ ರೈತರು ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಸಿಟ್ಟನ್ನು ಹೊರಹಾಕಿದರು.

ಇದೆಲ್ಲದ ನಡುವೆ ಕೇಂದ್ರ – ರಾಜ್ಯ ಸರ್ಕಾರಗಳು ರೈತರನ್ನು ಹಗುರವಾಗಿ ಕಾಣುತ್ತಿವೆ. ದೆಹಲಿಯಲ್ಲಿ ಚಳವಳಿ ಮಾಡುವ ರೈತರ ಶಕ್ತಿ ಹೆಚ್ಚಿಸಲು ನಾವೆಲ್ಲ ನಿರಂತರ ಹೋರಾಟ ಮಾಡಬೇಕಾಗಿದೆ ಎಂದು ರೈತರಿಗೆ ಕರೆ ನೀಡಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಕಿರಗಸೂರು ಶಂಕರ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ಮುಖಂಡರಾದ ಸಿದ್ದೇಶ್, ವೆಂಕಟೇಶ್ , ರಾಜೇಶ್, ದೇವನೂರು ವಿಜಯೇಂದ್ರ, ಕೆಂಡಗಣಸ್ವಾಮಿ, ಪ್ರದೀಪ್, ಸೂರಿ, ಉಮೇಶ್, ಕಾಟೂರು ನಾಗೇಶ್, ಅಂಬಳೆ ಮಂಜುನಾಥ್, ಸುನಿಲ್, ಸಾತಗಳ್ಳಿ ಬಸವರಾಜ್, ವಾಜಮಂಗಲ ಮಾದೇವ, ಶಿವಸ್ವಾಮಿ, ಚೇತನ್, ಶಂಭು, ವಾಜಮಂಗಲ ಮಾಲಿಂಗ ನಾಯಕ್, ಶಾಂತರಾಜ್, ಶಿವಮೂರ್ತಿ, ಮಂಜುನಾಥ್, ಶಿವಕುಮಾರ್ ಸೇರಿದಂತೆ ನೂರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

Leave a Reply

error: Content is protected !!
LATEST
KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!? ಪಿರಿಯಾಪಟ್ಟಣ: ಲಂಚ ಸ್ವೀಕಾರ- ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಗುಮಾಸ್ತ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ