Please assign a menu to the primary menu location under menu

NEWSಕೃಷಿನಮ್ಮರಾಜ್ಯ

ಮೈಸೂರು: ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ಕಾಡಾ ಕಚೇರಿಮುಂದೆ ರೈತರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಪ್ರತಿಭಟನೆ ನಡೆಸಿದರು.

ಇಂದು ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ನೇತೃತ್ವದಲ್ಲಿ ನಗರದ ಕಾಡಾ ಕಚೇರಿ ಮುಂದೆ ಜಮಾಯಿಸಿದ ರೈತರು ಕಾವೇರಿ, ಕಬಿನಿ ಅಚ್ಚುಕಟ್ಟು ಭಾಗದ ಕೆರೆಗಳು ಒಣಗಿದ್ದು ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಬೆಳೆಗಳು ಒಣಗಿ ಹಾಳಾಗುತ್ತಿವೆ ತಕ್ಷಣವೇ ಕಾಲುವೆಗಳ ಮೂಲಕ ನೀರು ಹರಿಸಿ ಕೆರೆ ಕಟ್ಟೆಗಳನ್ನು ತುಂಬಿಸಿ ಎಂದು ಆಗ್ರಹಿಸಿದರು.

ಇದೇ ವೇಳೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘದ ನೂರಾರು ರೈತರು ಪ್ರತಿಭಟನೆ ನಡೆಸಿ ದಕ್ಷಿಣ ವಲಯ ನೀರಾವರಿ ಇಲಾಖೆಯ ಉಪ ಮುಖ್ಯ ಅಭಿಯಂತರ ಗೌತಮ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಮೂರು ದಿನದ ಒಳಗೆ ನೀರು ಹರಿಸುವ ನಿರ್ಧಾರ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ರೈತರು ಮಾಡಿದ ಸಾಲ ತೀರಿಸಲಾಗದೇ ಜೀವನ ನಡೆಸಲು ಕಷ್ಟಕರ ವಾಗಿದ್ದು, ಸರ್ಕಾರವೇ ಬರಗಾಲ ಘೋಷಣೆ ಮಾಡಿದ್ದು, ಬರ ಪರಿಹಾರ ಎಕರೆಗೆ ಕನಿಷ್ಠ 25 ಸಾವಿರ ರೂ. ಹಾಗೂ ಜೀವನ ನಿರ್ವಹಣೆಗೆ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 10 ಸಾವಿರ ರೂ.ಗಳನ್ನು ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ತಮಿಳುನಾಡಿನ ಮುಖ್ಯಮಂತ್ರಿಗಳ ಬಾಂಧವ್ಯಕ್ಕೆ ತಲೆಬಾಗಿ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಿ ಖಾಲಿ ಮಾಡಿದ ಕಾರಣ ಬೆಂಗಳೂರು ನಗರದ ನಿವಾಸಿಗಳು ಕಾವೇರಿ ಅಚ್ಚುಕಟ್ಟು ಭಾಗದ ರೈತರು ನೀರಿನ ಸಮಸ್ಯೆಗೆ ಬಲಿಯಾಗಿದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಈ ಅಚ್ಚುಕಟ್ಟು ಭಾಗದ ಕೆರೆಕಟ್ಟೆಗಳು ಒಣಗಿ ಹೋಗಿವೆ. ಜನ ಜಾನುವಾರುಗಳ ಕುಡಿಯುವ ನೀರಿಗೆ ಹಾಹಾರ ಎದ್ದಿದೆ. ಹೀಗಾಗಿ ಕೂಡಲೇ ನಾಲೆಗಳಲ್ಲಿ ನೀರು ಹರಿಸಿ ರೈತರ ರಕ್ಷಿಸಬೇಕು. ಕಾವೇರಿ ಅಚ್ಚು ಕಟ್ಟು ಭಾಗದ ರೈತರು ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಸಿಟ್ಟನ್ನು ಹೊರಹಾಕಿದರು.

ಇದೆಲ್ಲದ ನಡುವೆ ಕೇಂದ್ರ – ರಾಜ್ಯ ಸರ್ಕಾರಗಳು ರೈತರನ್ನು ಹಗುರವಾಗಿ ಕಾಣುತ್ತಿವೆ. ದೆಹಲಿಯಲ್ಲಿ ಚಳವಳಿ ಮಾಡುವ ರೈತರ ಶಕ್ತಿ ಹೆಚ್ಚಿಸಲು ನಾವೆಲ್ಲ ನಿರಂತರ ಹೋರಾಟ ಮಾಡಬೇಕಾಗಿದೆ ಎಂದು ರೈತರಿಗೆ ಕರೆ ನೀಡಿದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಪಿ.ಸೋಮಶೇಖರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಕಿರಗಸೂರು ಶಂಕರ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ಮುಖಂಡರಾದ ಸಿದ್ದೇಶ್, ವೆಂಕಟೇಶ್ , ರಾಜೇಶ್, ದೇವನೂರು ವಿಜಯೇಂದ್ರ, ಕೆಂಡಗಣಸ್ವಾಮಿ, ಪ್ರದೀಪ್, ಸೂರಿ, ಉಮೇಶ್, ಕಾಟೂರು ನಾಗೇಶ್, ಅಂಬಳೆ ಮಂಜುನಾಥ್, ಸುನಿಲ್, ಸಾತಗಳ್ಳಿ ಬಸವರಾಜ್, ವಾಜಮಂಗಲ ಮಾದೇವ, ಶಿವಸ್ವಾಮಿ, ಚೇತನ್, ಶಂಭು, ವಾಜಮಂಗಲ ಮಾಲಿಂಗ ನಾಯಕ್, ಶಾಂತರಾಜ್, ಶಿವಮೂರ್ತಿ, ಮಂಜುನಾಥ್, ಶಿವಕುಮಾರ್ ಸೇರಿದಂತೆ ನೂರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

Leave a Reply

error: Content is protected !!
LATEST
Kho Kho World Cup 2025: ತಿ.ನರಸೀಪುರದ ಚೈತ್ರಾ ನಾಡು, ದೇಶದ ಕೀರ್ತಿಯ ಮುಗಿಲೆತ್ತೆಕ್ಕೆ ಹಾರಿಸಿದ ಅಪ್ಪಟ ಗ್ರಾಮೀಣ ಪ... ಜಗಜಿತ್ ದಲೈವಾಲ 53 ದಿನಗಳ ಉಪವಾಸ ಕೈ ಬಿಟ್ಟು ಚಿಕಿತ್ಸೆಗೆ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ: ಕುರುಬೂರ್ ಶಾಂತಕುಮಾರ್ KSRTC ಬಸ್‌ ಬ್ರೇಕ್‌ ವೈಫಲ್ಯಗೊಂಡು ಪಲ್ಟಿ: 30ಕ್ಕೂ ಹೆಚ್ಚು ಮಂದಿಗೆ ಗಾಯ BMTC ಎಲೆಕ್ಟ್ರಿಕ್ ಬಸ್ ಬ್ರೇಕ್ ವೈಫಲ್ಯ: ಡಾಬಾ, ಬೀಡಾ ಅಂಗಡಿಗೆ ಡಿಕ್ಕಿ KSRTC: ಅಧಿಕಾರಿಗಳು, ಸಿಬ್ಬಂದಿಗಳಿಗೂ ಕಿರುಕುಳ ನೀಡುತ್ತಿದ್ದ ಸಂಚಾರಿ ನಿರೀಕ್ಷಕ ಉಮೇಶ್‌  ವಜಾ- ಸಿಟಿಎಂ ಆದೇಶ ಬೆಂಗಳೂರಿನಲ್ಲಿ ಶಾಲೆ ಕಲಿತ ಆ ದಿನಗಳ ಕನ್ನಡದಲ್ಲೇ ಬ್ಯಾಂಕಾಕ್‌ನಲ್ಲಿ ಮೆಲುಕುಹಾಕಿದ ಸೂಪರ್‌ಸ್ಟಾರ್‌ ರಜನಿಕಾಂತ್ KSRTC ನೌಕರರಿಗೆ ಉಚಿತ ಚಿಕಿತ್ಸೆ ನೀಡದಿದ್ದರೆ ಅಂಥ ಆಸ್ಪತ್ರೆಗಳು ಹೊರಕ್ಕೆ: ಅಧಿಕಾರಿಗಳ ಎಚ್ಚರಿಕೆ KSRTC: ನೌಕರರಿಗೆ ಸರಿ ಸಮಾನ ವೇತನ ಕೊಡುವುದು ಸರ್ಕಾರದ ಆದ್ಯ ಕರ್ತವ್ಯ-ಬೈರೇಗೌಡ KSRTC: ಗೊಂದಲದ ನಡುವೆಯೂ 1280 ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ