NEWSನಮ್ಮಜಿಲ್ಲೆ

ಮೈಸೂರಿನಲ್ಲಿ ಧಾರಾಕಾರ ಮಳೆ: ಕಾಲುವೆಯಂತ್ತಾದ ರಸ್ತೆಗಳು

ವಿಜಯಪಥ ಸಮಗ್ರ ಸುದ್ದಿ

 ಮೈಸೂರು: ನಗರದಲ್ಲಿ ಭಾನುವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಪ್ರಮುಖ  ರಸ್ತೆಗಳ ಮೇಲೆ ಕಾಲುವೆಯಂತೆ ನೀರು ಹರಿಯಿತು.

ಸುಮಾರು 5.2 ಸೆಂ.ಮೀ.ನಷ್ಟು ಮಳೆ ಸುರಿದಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಪ್ರಸಕ್ತ ಮುಂಗಾರು ಅವಧಿಯಲ್ಲಿ ಇಂದು ಬಿದ್ದ ಮಳೆಯೇ ಹೆಚ್ಚು ಎಂದು ಇಲಾಖೆ ಮಾಹಿತಿ ನೀಡಿದೆ. ಇದು ಮುಂಗಾರು ಬೆಳೆಗೆ ಸಹಕಾರಿಯಾಗಿಲಿದ್ದು, ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ತೊಡಗಬಹುದು ಎಂದು ಹೇಳಿದೆ.

ಇನ್ನು ಇಂದು ಬಿದ್ದ ಮಳೆಯಿಂದ ಬಹುತೇಕ ನಗರದ ರಸ್ತೆಗಳು ತುಂಬಿ ಹರಿದ್ದಿದ್ದು, ಅಗ್ರಹಾರ ಮೃತ್ತದಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವ ಸ್ಥಿತಿಯು ಉಂಟಾಗಿತ್ತು. ಬೆಂಗಳೂರು ನೀಲಗಿರಿ ರಸ್ತೆ ಸೇರಿ ಹಲವು ರಸ್ತೆಗಳು ಮಳೆ ನೀರಿನಿಂದ ತುಂಬಿ ಹರಿದವು.

ಹಲವೆಡೆ ಒಳ ಚರಂಡಿ ಮ್ಯಾನ್‌ಹೋಲ್‌ಗಳು ಕಟ್ಟಿಕೊಂಡಿದ್ದರಿಂದ ನೀರು ಉಕ್ಕಿ ಹರಿಯಿತು. ಕೆ.ಆರ್‌.ನಗರ ತಾಲೂಕಿನಲ್ಲಿ 6 ಸೆಂ.ಮೀ. ಹುಣಸೂರಿನಲ್ಲಿ 3 ಸೆಂ.ಮೀ. ನಂಜನಗೂಡಿನಲ್ಲಿ 2ಸೆಂ.ಮೀ. ಪಿರಿಯಾಪಟ್ಟಣ ಹಾಗೂ ತಿ.ನರಸೀಪುರದಲ್ಲಿ ತಲಾ 1 ಸೆಂ.ಮೀ. ನಷ್ಟು ಮಳೆಯಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ