NEWSನಮ್ಮಜಿಲ್ಲೆಮೈಸೂರು

ನಾಡಹಬ್ಬ ಮೈಸೂರು ದಸರಾ: ಅ.15ರಂದು ಕಾರ್ಯಕ್ರಮಗಳಿಗೆ ಸಿಎಂ  ಸಿದ್ದರಾಮಯ್ಯ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸದ ಸಾಂಸ್ಕೃತಿಕ ಉಪಸಮಿತಿಯ ವತಿಯಿಂದ ದಸರಾ ಮಹೋತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2023ರ ಅಕ್ಟೋಬರ್ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ಅರಮನೆಯ ಆವರಣದಲ್ಲಿರುವ ಮುಂಭಾಗದ ವೇದಿಕೆಯಲ್ಲಿ ಸಂಜೆ 6 ಗಂಟೆಗೆ ಸಚಿವರು, ಸ್ಥಳೀಯ ಶಾಸಕರುಗಳ ಉಪಸ್ಥಿತಿಯಲ್ಲಿ ಚಾಲನೆ ನೀಡಲಿದ್ದು, ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಸಮಾರಂಭ ಕಾರ್ಯಕ್ರದಲ್ಲಿ ಭಾಗವಹಿಸಲಿದ್ದಾರೆ.

ದಸರಾ ಮಹೋತ್ಸವ ಅಂಗವಗಿ ಒಟ್ಟು 9 ದಿನಗಳ ಕಾಲ ದಸರಾ ಸಾಂಸ್ಕೃತಿಕ ಉಪಸಮಿತಿಗೆ ಸ್ವೀಕೃತವಾಗಿರುವ ಅರ್ಜಿಗಳನ್ನು ಪರಿಶೀಲಿಸಿ ವಿವಿಧ ಕಲಾಪ್ರಕಾರ ಉತ್ತಮ ತಂಡಗಳನ್ನು ಆಯ್ಕೆಮಾಡಿ ಜಗನ್ಮೋಹನ ಅರಮನೆ, ಕರ್ನಾಟಕ ಕಲಾಮಂದಿರ, ಗಾನಭಾರತಿ, ನಾದಬ್ರಹ್ಮ ಸಂಗೀತಾ ಸಭಾ, ಚಿಕ್ಕಗಡಿಯಾರ ಮತ್ತು ನಂಜನಗೂಡಿನಲ್ಲಿ ಕಲಾತಂಡಗಳಿ0ದ ಪ್ರದರ್ಶನವನ್ನು ಏರ್ಪಡಿಸಲಾಗುವುದು.

ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಸಾಂಪ್ರಾದಾಯಿಕ ಗೀತೆಗಳು, ತತ್ವಪದಗಳು, ಹರಿಕಥೆ, ಜನಪದ ಗಾಯನ, ವಾದ್ಯ, ಸೂತ್ರ ಸಲಾಕೆ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಿಗದಿಪಡಿಸಿ ಪ್ರಸ್ತುತಪಡಿಸಲಾಗವುದು.

ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಮತ್ತು ರಂಗಗೀತೆಗಳ ಕಾರ್ಯಕ್ರಮಗಳು, ಆಧುನಿಕ ನಾಟಕಗಳು, ವೃತ್ತಿ ರಂಗಭೂಮಿ ಹಾಗೂ ಹವ್ಯಾಸಿ ರಂಗಭೂಮಿ ಕಲಾವಿದರುಗಳಿಂದ ಅಕ್ಟೋಬರ್ 15 ರಿಂದ 23ರವರೆಗೆ ಪುರಭವನ, ಕಿರುರಂಗಮ0ದಿರ, ನಟನ ರಂಗಮ0ದಿರ ಹಾಗೂ ರಮಾಗೋವಿಂದ ರಂಗಮ0ದಿರದಲ್ಲಿ ಪ್ರದರ್ಶನಗಳನ್ನು ಏರ್ಪಡಿಸಲಾಗುವುದು.

ಅರಮನೆ ವೇದಿಕೆಯಲ್ಲಿ ನಾದಸ್ವರ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗಿ ಪ್ರತಿ ಕಾರ್ಯಕ್ರಮಕ್ಕೆ 45 ನಿಮಿಷಗಳ ಸಮಯಾವಕಾಶ ನಿಗದಿಪಡಿಸಿ ಸ್ಯಾಕ್ಸೋಫೋನ್ ವಾದನ, ವಯೋಲಿನ್ ವಾದನ, ಒಡೆಯರ್ ಕೃತಿಗಳ ಕುರಿತ ನೃತ್ಯರೂಪಕ, ಭರತನಾಟ್ಯ ಸೇರಿದಂತೆ ವಿವಿಧ ಕಲಾಪ್ರಕಾರಗಳ ಕಾರ್ಯಕ್ರಮಗಳನ್ನು ಅಕ್ಟೋಬರ್ 21 ರಂದು ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಏರ್ಪಡಿಸಲಾಗುವುದು.

ಮೈಸೂರಿನ ವಿವಿಧ ಪ್ರದೇಶಗಳಲ್ಲಿ ವಾದ್ಯಗೋಷ್ಠಿಯೊಂದಿಗೆ ವಿವಿಧ ಕಲಾತಂಡಗಳಿ0ದ ಸುಗಮ ಸಂಗೀತ, ವಾದ್ಯ ಸಂಗೀತ, ಭಕ್ತಿಗೀತೆಗಳು, ಭಾವಗೀತೆಗಳು, ಸಾಂಪ್ರದಾಯಿಕ ಗೀತೆಗಳು ಸೇರಿದಂತೆ ಇತರೆ ಗಾಯನ ಕಾರ್ಯಕ್ರಮಗಳನ್ನು ಹೆಚ್ಚಿನ ಜನಸಂದಣಿ ಇರುವ ಪ್ರದೇಶಗಳಲ್ಲಿ ಕನಿಷ್ಠ 30 ನಿಮಿಷಗಳ ಕಾಲ ಸಂಚಾರಿ ವಾಹನದಲ್ಲಿ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಗುತ್ತದೆ.

ಮೈಸೂರು ದಸರಾ ಮಹೋತ್ಸದ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯ ತೋಟಗಾರಿಕಾ ವಿಭಾಗವು 18ನೇ ವರ್ಷದ ದಸರಾ ಫಲಪುಷ್ಪ ಪ್ರದರ್ಶನವನ್ನು ಕುಕ್ಕರಹಳ್ಳಿ ಕೆರೆಯ ಪೂರ್ವ ಹಾಗೂ ಪಶ್ಚಿಮ ದಂಡೆಯಲ್ಲಿ ಏರ್ಪಡಿಸಲಾಗಿದ್ದು, ದಸರಾ ಫಲಪುಷ್ಪ ಪ್ರದರ್ಶನವನ್ನು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅವರು 2023ರ ಅಕ್ಟೋಬರ್ 13ರಂದು ಉದ್ಘಾಟಿಸಲಿದ್ದಾರೆ.

ಪುಷ್ಪ ಪ್ರದರ್ಶನವು 2023ರ ಅಕ್ಟೋಬರ್ 24ರ ವರೆಗೆ ನಡೆಯಲಿದ್ದು, ಪ್ರತಿ ದಿನವೂ ಬೆಳಿಗ್ಗೆ 9 ರಿಂದ ಸಂಜೆ 7 ಗಂಟೆಯವರೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಇರುತ್ತದೆ ಎಂದು ತೋಟಗಾರಿಗೆ ವಿಭಾಗದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Leave a Reply

error: Content is protected !!
LATEST
ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ