NEWSಶಿಕ್ಷಣ-

ನಾಗಮಂಗಲ: ಕ್ರೀಡೆಯಿಂದ ದೈಹಿಕ ಮಾನಸಿಕ ಸದೃಢತೆ-ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್

ವಿಜಯಪಥ ಸಮಗ್ರ ಸುದ್ದಿ

ನಾಗಮಂಗಲ: ಕ್ರೀಡೆ ಕೇವಲ ಆಟವಾಗದೆ ಮಕ್ಕಳ ದೈಹಿಕ ಮಾನಸಿಕ ಸದೃಢತೆ ಹಾಗೂ ವ್ಯಕ್ತಿತ್ವ ವಿಕಸನದ ಬೆಸುಗೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್ ಅಭಿಪ್ರಾಯಪಟ್ಟಿದ್ದಾರೆ.

ಅವರು ಇಂದು ನಾಗಮಂಗಲ ತಾಲೂಕು ದೇವಲಾಪುರ ಹೋಬಳಿ ಕೇಂದ್ರದಲ್ಲಿ ತಾಲೂಕಿನಲ್ಲಿ ಪ್ರಥಮವಾಗಿ 2024 -25 ನೇ ಸಾಲಿನ ದೇವಲಾಪುರ ವೃತ್ತದ ಕೆಪಿಎಸ್ ಶಾಲೆಯ ಕ್ರೀಡಾಂಗಣದಲ್ಲಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಶಾಲಾ ಅವಧಿಯಲ್ಲಿ ಕೇವಲ ವ್ಯಾಸಂಗ ಆಲೋಚನೆ ಅಲ್ಲದೆ ಅಭ್ಯಾಸದ ಜತೆಗೆ ಕ್ರೀಡೆಯನ್ನ ಒಂದು ಪಠ್ಯವಾಗಿ ಅಳವಡಿಸಿಕೊಂಡು ತಮ್ಮಲ್ಲಿರುವ ಸೂಕ್ತ ಪ್ರತಿಭೆ ಅನಾವರಣಗೊಂಡಾಗ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ. ಸೋಲು ಗೆಲುವುಗಳನ್ನ ಸಮಾನವಾಗಿ ಸ್ವೀಕರಿಸಿ ತಮ್ಮ ಕ್ರೀಡಾ ಪ್ರದರ್ಶನದೊಂದಿಗೆ ಆರೋಗ್ಯ ಮಾನಸಿಕ ದೃಢತೆ ಹಾಗೂ ಸ್ನೇಹ ಪರಂಪರೆಯ ಬೆಸುಗೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕ್ರೀಡೆ ವಿದ್ಯಾರ್ಥಿಗಳು ತಮ್ಮ ತಮ್ಮ ಓದಿನ ಅಂಕಗಳಂತೆ ಕ್ರೀಡಾ ಅಂಕವನ್ನ ಪಡೆಯುಲು ಹಾಗೂ ಕ್ರೀಡಾಕೂಟದಲ್ಲಿ ದೈಹಿಕ ಆರೋಗ್ಯಕರ ಬೆಳವಣಿಗೆಗೆ ಭಾಗವಹಿಸುವ ಮುಖಾಂತರ ತಮ್ಮ ಶಾಲೆ ತಮ್ಮ ತಾಲೂಕು ಜಿಲ್ಲೆಯ ಕೀರ್ತಿ ಬೆಳಗಲು ಉತ್ಸಹಕಾರಾಗಿ ಭಾಗವಹಿಸುವಂತೆ ಕರೆ ನೀಡಿದರು.

ಕ್ರೀಡಾಕೂಟದ ಅಧ್ಯಕ್ಷತೆಯನ್ನು ಶಾಲಾ ಸಮಿತಿಯ ಅಧ್ಯಕ್ಷ ಸುರೇಶ್ ವಹಿಸಿದ್ದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ರುದ್ರೇಶ್ ಕಾರ್ಯದರ್ಶಿ ಮಂಜೇಗೌಡ ಶಿಕ್ಷಣ ಸಂಯೋಜಕರುಗಳಾದ ಡಿಪಿ ಗಿರೀಶ್ ಸಿದ್ದೇಶ್ ಇದ್ದರು.

ಸಮಾರಂಭದಲ್ಲಿ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ರತ್ನಮ್ಮ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶಿವ ಸ್ವಾಮಿ, ಉಗ್ರೇಗೌಡ, ದೈಹಿಕ ಶಿಕ್ಷಣ ಪರೀಕ್ಷಕರಾದ ಸುರೇಶ್ ಹಾಗೂ ಶಿಕ್ಷಣ ಸಂಯೋಜಕರುಗಳು ಮತ್ತೆ ಶಾಲಾ ಸಮಿತಿಯ ಸದಸ್ಯರು, ತಾಲೂಕಿನ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಮಂಜುಳಾ ಅವರು ನೆರವೇರಿಸಿದರೆ, ಸಂತೋಷ್ ವಂದಿಸಿದರು.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ