NEWSನಮ್ಮಜಿಲ್ಲೆನಮ್ಮರಾಜ್ಯ

ಜಗದಗಲ ವ್ಯಾಪಿಸುತ್ತಿದೆ ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು: ಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಸ್ತುತ ಸೌದಿ ಅರೇಬಿಯಾದಿಂದ 8 ಮೆಟ್ರಿಕ್‌ ಟನ್‌, ಯುಎಸ್‌ಎನಿಂದ 5 ಮೆಟ್ರಿಕ್‌ ಟನ್‌ ಹಾಗೂ ಆಸ್ಟ್ರೇಲಿಯಾದಿಂದ 1 ಮೆಟ್ರಿಕ್‌ ಟನ್‌ ತುಪ್ಪಕ್ಕೆ ಬೇಡಿಕೆ ಬಂದಿದ್ದು, ಇಂದಿನಿಂದ (ಮಂಗಳವಾರ ನ.25) ಈ ಮೂರು ದೇಶಗಳಿಗೆ ತುಪ್ಪ ಪೂರೈಕೆಗೆ ಅಧಿಕೃತ ಚಾಲನೆ ನೀಡಿ ಅವರು ಮತನಾಡಿದರು.

ಮೂಲತ: ಮೈಸೂರು ಜಿಲ್ಲೆಯವರಾದ ಕುಮಾರ ಎಂಬುವರು ಅಮೆರಿಕಾದಲ್ಲಿ ನೆಲೆಸಿದ್ದು, ಇದರ ಏಜೆನ್ಸಿ ಪಡೆದಿದ್ದಾರೆ. ಕೆಎಂಎಫ್ ಹಾಗೂ ಕುಮಾರ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.

ಪ್ರಸ್ತುತ ದುಬೈ, ಕತಾರ್‌, ಬ್ರುನೈ, ಮಾಲ್ಡೀವ್ಸ್‌ ಹಾಗೂ ಸಿಂಗಾಪುರ್‌ ದೇಶಗಳು ಸೇರಿದಂತೆ ಭಾರತೀಯರು, ವಿಶೇಷವಾಗಿ ಕನ್ನಡಿಗರು ಹೆಚ್ಚಾಗಿ ನೆಲೆಸಿರುವ ನೆರೆಯ ರಾಷ್ಟ್ರಗಳಲ್ಲಿ ನಂದಿನಿ ಬ್ರ್ಯಾಂಡ್‌ಗೆ ಡಿಮ್ಯಾಂಡ್‌ ಹೆಚ್ಚಿದೆ.

ಹೀಗಾಗಿಯೇ ನಂದಿನಿ ಯುಎಚ್‌ಟಿ ಟೆಟ್ರಾಪ್ಯಾಕ್‌ ಹಾಲು, ತುಪ್ಪ, ಚೀಸ್‌, ಬೆಣ್ಣೆ, ಐಸ್‌ಕ್ರೀಂ, ಸುವಾಸಿತ ಹಾಲು, ಸಿಹಿ ಉತ್ಪನ್ನ, ಸೇವರಿಸ್‌ ಅನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ. ಇದೀಗ ವಿದೇಶದಲ್ಲೂ ಮಾರುಕಟ್ಟೆ ವಿಸ್ತರಣೆ ಮಾಡಲು ಕೆಎಂಎಫ್‌ ಕ್ರಮ ವಹಿಸಿದೆ ಎಂದರು.

2023ರ ಸೆಪ್ಟೆಂಬರ್‌ 9ರಂದು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ (ದುಬೈ)ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮೊದಲ ʼನಂದಿನಿ ಕೆಫೆ ಮೂʼ ಅನ್ನು ಆರಂಭಿಸಿ, ತುಪ್ಪ, ಬೆಣ್ಣೆ, ಚೀಸ್‌, ಯುಎಚ್‌ಟಿ ಹಾಲು, ಐಸ್‌ಕ್ರೀಂ, ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಲಾಯಿತು. ಅಲ್ಲಿ ನೆಲೆಸಿರುವ ಕನ್ನಡಿಗರು ಸೇರಿದಂತೆ ಅಲ್ಲಿನ ಪ್ರಜೆಗಳು ಕೂಡ ನಮ್ಮ ಕನ್ನಡದ ಬ್ರ್ಯಾಂಡ್‌ ಉತ್ಪನ್ನಗಳನ್ನು ಕೊಳ್ಳಲು ಪ್ರಾರಂಭಿಸಿದ್ದರಿಂದ ಮಾರುಕಟ್ಟೆ ವಿಸ್ತರಣೆಯಾಯಿತು.

ಬಳಿಕ 2025ರ ಆಗಸ್ಟ್‌ 29 ರಿಂದ ಆಗಸ್ಟ್‌ 31ರ ವರೆಗೆ ಯುಎಸ್‌ಎಯಲ್ಲಿನ ಲೇಕ್‌ಲ್ಯಾಂಟ್‌ ಪ್ಲೋರಿಡಾದಲ್ಲಿ ಆಯೋಜಿಸಲಾಗಿದ್ದ ನಾವಿಕ (ನಾವು ವಿಶ್ವ ಕನ್ನಡಿಗರು) ವಿಶ್ವ ಕನ್ನಡ ಸಮಾವೇಶದಲ್ಲಿ ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕರು ಪಾಲ್ಗೊಂಡು ಹೊಸ ವಿನ್ಯಾಸದ ನಂದಿನಿ ತುಪ್ಪ ಹಾಗೂ ಸಿಹಿ ಉತ್ಪನ್ನಗಳನ್ನು ಬಿಡುಗಡೆಗೊಳಿಸಿ, ಇಂದಿನಿಂದ ನಂದಿನಿ ಉತ್ಪನ್ನಗಳು ಅಮೆರಿಕಾದಲ್ಲೂ ಲಭ್ಯವಿರುವುದಾಗಿ ಘೋಷಿಸಿದರು.

ವಿಶೇಷವಾಗಿ ನಂದಿನಿ ಪೇಡ, ಮೈಸೂರು ಪಾಕ್‌, ಬರ್ಫಿ ಹಾಗೂ ಸೇವರಿಸ್‌ ಉತ್ಪನ್ನಗಳಿಗೆ ಅಲ್ಲಿ ಹೆಚ್ಚು ಬೇಡಿಕೆಯಿದೆ ಎಂದು ತಿಳಿಸಿದರು.

Megha
the authorMegha

Leave a Reply

error: Content is protected !!
Latest news
KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ ಕಾಂಗ್ರೆಸ್​​ ಹಿರಿಯ ನಾಯಕ ಮಾಜಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ನಿಧನ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ‌ ಮೃತ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌