NEWSನಮ್ಮಜಿಲ್ಲೆ

ಕುಡಿಯುವ ನೀರು, ಮೇವು ಕೊರತೆಗೆ ಅಗತ್ಯ ಕ್ರಮ: ಡಿಸಿ ಬಸವರಾಜು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಮುಂದಿನ 3 ತಿಂಗಳುಗಳ ಕಾಲ ಜಿಲ್ಲೆಯಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿ  ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಬರ ಪರಿಸ್ಥಿತಿ ನಿವಾರಣೆಗೆ ತಕ್ಷಣ ಪರಿಹಾರ ಒದಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 04 ತಾಲೂಕುಗಳ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕಳೆದ 3 ರಿಂದ 5 ವರ್ಷಗಳಿಂದ ಹೆಚ್ಚಾಗಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಜನವಸತಿಗಳ ಆಧಾರದಲ್ಲಿ ಪ್ರಸಕ್ತ ವರ್ಷದ ಬೇಸಿಗೆ ಸಮಯದಲ್ಲಿ ಮಾರ್ಚ್‌ ರಿಂದ ಮೇ 2025ರ ಅಂತ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ 98 ಜನವಸತಿಗಳನ್ನು ಗುರುತಿಸಲಾಗಿದೆ.

ಹೀಗಾಗಿ 234 ಖಾಸಗಿ/ ರೈತರ ಕೊಳವೆ ಬಾವಿಗಳನ್ನು ಗುರುತಿಸಿ ಪರ್ಯಾಯವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಸ್ತುತ JJM ಯೋಜನೆಯಡಿ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯಕವಿರುವ ಮೊತ್ತದ ತುರ್ತು ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ.

ಇನ್ನು ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಕ್ರಮ ವಹಿಸಿ ಮೇವಿನ  ಬೀಜ ಕಿಟ್‌ಗಳನ್ನು ರೈತರಿಗೆ ಪೂರೈಸಿ, ಈಗಾಗಲೇ ಗೋಶಾಲೆಗಳಲ್ಲಿ ಅಂದಾಜು 3 ಲಕ್ಷ ಟನ್ ರಷ್ಟು ಮೇವು ಸಂಗ್ರಹಿಸಿಡಲಾಗಿದೆ ಎಂದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Deva
the authorDeva

Leave a Reply

error: Content is protected !!
Latest news
KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ