NEWSದೇಶ-ವಿದೇಶಶಿಕ್ಷಣ-

NEET ಆಕಾಂಕ್ಷಿಗಳ ಒಳ ಉಡುಪು ನಿಷೇಧಿಸಿದ ಚೆನ್ನೈ ಪರೀಕ್ಷಾ ಕೇಂದ್ರದ ಘಟನೆ ಮುನ್ನೆಲೆಗೆ ಬಂದ ಬಳಿಕ ವಿವಾದ ಸ್ಫೋಟ

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಆಕಾಂಕ್ಷಿಗಳಿಗೆ ಭಾನುವಾರ ಇದ್ದ ನೀಟ್‌ ಪರೀಕ್ಷೆಗೆ ಹಾಜರಾಗಲು ಒಳ ಉಡುಪು (ಬ್ರಾ) ಧರಿಸುವುದನ್ನು ನಿಷೇಧಿಸಿದ ಚೆನ್ನೈ ಪರೀಕ್ಷಾ ಕೇಂದ್ರದ ಘಟನೆಯು ಮುನ್ನೆಲೆಗೆ ಬಂದ ನಂತರ ವಿವಾದವೊಂದು ಸ್ಫೋಟಗೊಂಡಿದೆ.

ಪರೀಕ್ಷೆ ಸಂಬಂಧಿತ ವರದಿ ಮಾಡಲು ಸ್ಥಳೀಯ ಮಹಿಳಾ ಪತ್ರಕರ್ತರೊಬ್ಬರು ಪರೀಕ್ಷಾ ಕೇಂದ್ರಕ್ಕೆ ತೆರಳಿದಾಗ ಈ ವಿಚಾರ ಬಯಲಾಗಿದ್ದು, ಅವರು ಟ್ವೀಟ್ ಮಾಡಿ ಅಭ್ಯರ್ಥಿಗಳು ಅನುಭವಿಸಿದ ಯಾತನೆಯನ್ನು ವಿವರಿಸಿದ್ದಾರೆ.

ಪರೀಕ್ಷಾ ಕೇಂದ್ರದಲ್ಲಿ ಒಂದು ಮೂಲೆಯಲ್ಲಿ ಕುಳಿತಿರುವ ಹುಡುಗಿಯೊಬ್ಬಳು ನಾಚಿಕೆಯಿಂದ ಪುಸ್ತಕಕ್ಕೆ ಅಂಟಿಕೊಂಡಿರುವುದನ್ನು ಗಮನಿಸಿದೆ ಎಂದು ಹೇಳಿಕೊಂಡಿದ್ದಾರೆ. ಪರೀಕ್ಷೆ ಬರೆಯುವಾಗ ಬ್ರಾ ಧರಿಸದಂತೆ ಕೇಳಿಕೊಂಡಿದ್ದರಿಂದ ನಾಚಿಕೆಯಾಗುತ್ತಿದೆ ಎಂದು ವಿದ್ಯಾರ್ಥಿನಿ ಪತ್ರಕರ್ತರಿಗೆ ತಿಳಿಸಿದ್ದಾಳೆ. ಪತ್ರಕರ್ತೆ ಆಕೆಗೆ ತನ್ನ ಶಾಲನ್ನು ನೀಡಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ತನ್ನ ಸಹೋದರ ತನ್ನನ್ನು ಮನೆಗೆ ಕರೆದೊಯ್ಯಲು ಬರುತ್ತಿದ್ದಾನೆ ಎಂದು ಹುಡುಗಿ ನಯವಾಗಿ ನಿರಾಕರಿಸಿದಳು.

ಪತ್ರಕರ್ತೆಯ ಟ್ವೀಟ್ ಗೆ ವಿರೋಧವಾಗಿ ಟ್ರೋಲ್‌ ಮಾಡಲಾಗಿದೆ. ಅಲ್ಲದೆ ಟ್ವೀಟ್ ಡಿಲೀಟ್ ಮಾಡುವಂತೆ ಒತ್ತಾಯಿಸಿದರು. ನಂತರ ಪತ್ರಕರ್ತೆಯು ತಾನು ಗಮನಿಸಿದ ಪ್ರಕಾರ, ಪರೀಕ್ಷೆಗೆ ಬಂದ ಅರ್ಧದಷ್ಟು ವಿದ್ಯಾರ್ಥಿನಿಯರು ಬ್ರಾ ಧರಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ನನ್ನನ್ನು ಅಶ್ಲೀಲ ಪ್ರಶ್ನೆಗಳನ್ನು ಕೇಳುವವರು ಬ್ರಾ ಧರಿಸಲು ಅನುಮತಿಸಲಾಗಿದೆಯೇ ಅಥವಾ ಇಲ್ಲವೇ ಎಂದು ಪರೀಕ್ಷಾ ಮಂಡಳಿಯನ್ನು ಕೇಳಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿನಾದ್ಯಂತ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು ಭಾನುವಾರ ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಕಳೆದ ಮೂರು ವರ್ಷಗಳಿಂದ ನಡೆಸಲಾಗುತ್ತಿರುವ ನೀಟ್‌ ನಲ್ಲಿ ಪ್ರತಿ ವಿದ್ಯಾರ್ಥಿಯ ಹೇರ್‌ ಪಿನ್ ಮತ್ತು ಡ್ರೆಸ್‌ ಗಳನ್ನು ತೆಗೆದು ಇನ್ವಿಜಿಲೇಟರ್‌ಗಳು ತಪಾಸಣೆ ನಡೆಸಿದ ರೀತಿಗೆ ತಮಿಳುನಾಡು ಶಿಕ್ಷಣ ಸಚಿವ ಅಂಬಿಲ್ ಮಹೇಶ್ ಖಂಡನೆ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು