NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ತಿ.ನರಸೀಪುರ: ರೇಷ್ಮೆ ಬೆಳೆ ಅಭಿವೃದ್ಧಿಗೆ ಉದ್ಯೋಗ ಖಾತರಿ ಯೋಜನೆ ವರದಾನ: ವರನಾಗಭೂಷಣ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ.ನರಸೀಪುರ: ರೇಷ್ಮೆ ಬೆಳೆಯನ್ನು ಅಭಿವೃದ್ಧಿಪಡಿಸಲು ಹಾಗೂ ರೇಷ್ಮೆ ಕೃಷಿಯ ವಿಸ್ತರಣೆಗೆ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ರೈತರಿಗೆ ವರದಾನವಾಗಿದೆ ಎಂದು ರೇಷ್ಮೆ ಉಪ ನಿರ್ದೇಶಕ ವರನಾಗಭೂಷಣ ಹೇಳಿದ್ದಾರೆ.

ತಾಲೂಕಿನ ಟಿ.ದೊಡ್ಡಪುರ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಸುಸ್ಥಿರ ಬೈವೋಲ್ಟೈನ್ ರೇಷ್ಮೆ ಕೃಷಿ ಅಭಿವೃದ್ಧಿಗೆ ನೂತನ ತಾಂತ್ರಿಕತೆಗಳ ಕುರಿತು ಪ್ರಾದೇಶಿಕ ರೇಷ್ಮೆ ಸಂಶೋಧನಾ ಸಂಸ್ಥೆ, ಮೈಸೂರಿನ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ, ಚಾಮರಾಜನಗರ ಕೇಂದ್ರ ರೇಷ್ಮೆ ಮಂಡಳಿ ಹಾಗೂ ರೇಷ್ಮೆ ಇಲಾಖೆಯ ಸಹಯೋಗದೊಂದಿಗೆ ‘ರೈತರ ದಿನ’ ಕಾರ್ಯಕ್ರಮ ಹಾಗೂ ಹಿಪ್ಪುನೇರಳೆ ತೋಟದ ಕ್ಷೇತ್ರೋತ್ಸವದಲ್ಲಿ ಮಾತನಾಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೇಷ್ಮೆ ಕಡ್ಡಿ ನೆಟ್ಟರೆ 50 ಸಾವಿರ ರೂ. ನಗದು ಕೈಗೆ ನೇರವಾಗಿ ಸಿಗಲಿದೆ. 1 ಎಕರೆ ಹಿಪ್ಪು ನೇರಳೆ ಬೆಳೆಯಲಿಕ್ಕೆ ಉದ್ಯೋಗ ಖಾತರಿ ಅನುದಾನ ಕೈ ಸೇರಲಿದೆ ಎಂದರು.

ಆಯಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಡೆಯುವ ಗ್ರಾಮ ಸಭೆಯಲ್ಲಿ ರೈತರು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಉದ್ಯೋಗ ಕಾರ್ಡುಗಳನ್ನು ಹೊಂದಿರುವ ರೈತ ಕುಟುಂಬ ರೇಷ್ಮೆ ಕೃಷಿಗೆ ಎರಡು ಲಕ್ಷ ರೂ.ಗಳವರೆಗೂ ಅನುದಾನ ಪಡೆಯಬಹುದು.

ಪಂಚಾಯಿತಿ ಪ್ರತಿನಿಧಿಗಳು ಮತ್ತು ಪಿಡಿಒ ಮನಸ್ಸು ಮಾಡಿದರೆ ರೈತರಿಗೆ ಹೆಚ್ಚಿನ ನೆರವು ನೀಡಬಹುದು. ಹನಿ ನೀರಾವರಿಗೆ ಶೇ.90 ರಷ್ಟು ಸಬ್ಸಿಡಿ ಕೊಡಲು ಅವಕಾಶವಿದೆ. ಮರಗಡ್ಡಿಗೆ ಪೂರ್ವಯೋಜಿತ ಸಿದ್ಧತೆ ಮಾಡಿಕೊಂಡರೆ ಮರಗಡ್ಡಿಗೂ ಸಹಾಯಕಧನ ಕೊಡುತ್ತೇವೆ ಎಂದು ರೇಷ್ಮೆ ಕೃಷಿಯ ತಾಂತ್ರಿಕತೆಯ ಬಗ್ಗೆ ವರನಾಗಭೂಷಣ ತಿಳಿಸಿದರು.

ಚಾಮರಾಜನಗರ ಕೇಂದ್ರ ರೇಷ್ಮೆ ಮಂಡಳಿಯ ಜಂಟಿ ನಿರ್ದೇಶಕ, ಹಿರಿಯ ವಿಜ್ಞಾನಿ ಡಾ.ಡಿ.ಎಸ್.ಸೋಮಪ್ರಕಾಶ್ ರೇಷ್ಮೆ ಕೃಷಿ ಬಗ್ಗೆ ರೈತರೊಂದಿಗೆ ಸಂವಾದ ನಡೆಸಿದರು. ತಾಪಂ ಸದಸ್ಯೆ ಚಿನ್ನಮ್ಮ ಸಿದ್ದರಾಜು, ಸಹಾಯಕ ನಿರ್ದೇಶಕ ಸಿ.ಆರ್.ಕೃಷ್ಣ, ಗ್ರಾ.ಪಂ ಉಪಾಧ್ಯಕ್ಷ ಪುಟ್ಟಸ್ವಾಮಿ, ಸದಸ್ಯರಾದ ಆರ್.ಮಾದೇಶ, ನಿಜಗುಣ, ರಾಜೇಶ, ಪ್ರಗತಿಪರ ರೈತ ಮಾದೇಗೌಡ, ರೇಷ್ಮೆ ನಿರೀಕ್ಷಕ ಪಿ.ಆಂಜನೇಯ, ತಾಂತ್ರಿಕ ಸೇವಾ ಕೇಂದ್ರದ ಪ್ರದರ್ಶಕ ಎ.ಎಸ್.ಮಂಜುನಾಥ್ ರಾವ್, ಕೃಷಿ ಇಲಾಖೆಯ ಆತ್ಮ ಯೋಜನೆಯ ಶಿವಣ್ಣ, ಮುಖಂಡರಾದ ಮಾವಿನಹಳ್ಳಿ ರಾಜು, ಶಿವಣ್ಣ, ಡಿ.ಎಂ.ಪರಶಿವಮೂರ್ತಿ ಹಾಗೂ ರೇಷ್ಮೆ ಬೆಳೆಗಾರ ರೈತರು ಇದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್