NEWSದೇಶ-ವಿದೇಶನಮ್ಮರಾಜ್ಯ

ಇಂದು ಕೇಂದ್ರ ಸರ್ಕಾರದ ವಿರುದ್ಧ ಮುಷ್ಕರ: ಆಟೋರಿಕ್ಷಾ ಟ್ಯಾಕ್ಸಿ ಸಂಚಾರ ಸ್ಥಗಿತ ಸಾಧ್ಯತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಹಾಗೂ ಜನವಿರೋಧಿ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೀಡಿರುವ ಸಾರ್ವತ್ರಿಕ ಮುಷ್ಕರದ ಅಂಗವಾಗಿ ರಾಜ್ಯದಲ್ಲಿ ಕಾರ್ಮಿಕರ ಮುಷ್ಕರ ನಡೆಸಲಿದ್ದಾರೆ.

ಅಂಗಡಿಗಳು, ಬಸ್, ಲಾರಿಗಳ ಸಂಚಾರ ಎಂದಿನಂತೆ ಇರಲಿದೆ. ಆದರೆ, ಬೆಂಗಳೂರಿನಲ್ಲಿ ಆಟೋರಿಕ್ಷಾ ಟ್ಯಾಕ್ಸಿ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ದಾಬಸ್ ಪೇಟೆ, ವೈಟ್‌ಫೀಲ್ಡ್, ಜಿಗಣಿ ಬೊಮ್ಮಸಂದ್ರ, ರಾಜಾಜಿನಗರ ಕೈಗಾರಿಕಾ ಪ್ರದೇಶಗಳಲ್ಲಿ ಮುಷ್ಕರಕ್ಕೆ ಬೆಂಬಬಲ ಸೂಚಿಸಿ ಕಾರ್ಖಾನೆಗಳು ಬಂದ್‌ ಆಗಲಿವೆ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸಂಚಾಲಕ ವಿಜಯಭಾಸ್ಕರ್ ತಿಳಿಸಿದ್ದಾರೆ.

ಕಾರ್ಮಿಕರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದು ರೈತ ಮತ್ತು ದಲಿತ ಸಂಘಟನೆಗಳು ಬೆಂಬಲ ಸೂಚಿಸಿವೆ. ಗುರುವಾರ ಬೆಳಗ್ಗೆ 10.30ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನಕ್ಕೆ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಲಾಗುವುದು ಎಂದು ವಿವರಿಸಿದರು.

ಆಟೋರಿಕ್ಷಾ ಟ್ಯಾಕ್ಸಿ ಸಂಚಾರ ಇರಲ್ಲ
ಇಂದಿನ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ನೀಡಲಾಗಿದ್ದು, ನಗರದಲ್ಲಿ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಸಂಚಾರ ಇರಲ್ಲ ಎಂದು ಬೆಂಗಳೂರು ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಜವರೇಗೌಡ ತಿಳಿಸಿದ್ದಾರೆ. ಜನ ವಿರೋಧಿ ಕಾನೂನುಗಳನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ದುಡಿದ ಹಣವೆಲ್ಲ ಸಂಚಾರ ಪೊಲೀಸರಿಗೆ ದಂಡ ಪಾವತಿಸಲು ಸಾಕಾಗುತ್ತಿಲ್ಲ ಎಂದು ಅಸಮಾಧಾನ ವಯ್ಕತಪಡಿಸಿದ್ದಾರೆ.

ಹೊರರಾಜ್ಯಗಳಿಗೆ ಹೋಗಿರುವ ಲಾರಿಗಳು ರಾಜ್ಯಕ್ಕೆ ವಾಪಸ್‌ ಆಗುತ್ತಿವೆ. ಅವುಗಳನ್ನು ಅಲ್ಲಲ್ಲಿ ನಿಲ್ಲಿಸಲಾಗುವುದಿಲ್ಲ, ಹೀಗಾಗಿ ಮುಷ್ಕರಕ್ಕೆ ನೈತಿಕ ಬೆಂಬಲ ನೀಡಲಾಗಿದೆ. ಲಾರಿಗಳ ಸಂಚಾರ ಎಂದಿನಂತೆ ಇರಲಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಖಪ್ಪ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ