CrimeNEWSನಮ್ಮಜಿಲ್ಲೆ

ಸ್ವಲ್ಪ ಸುತ್ತಾಡಿ ಬರುತ್ತೇವೆ ಎಂದ್ಹೋದ ನವದಂಪತಿ  ಶವವಾಗಿ ಪತ್ತೆ 

ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು

ವಿಜಯಪಥ ಸಮಗ್ರ ಸುದ್ದಿ

ಹಾಸನ: ಮನೆಯಲ್ಲಿ ಕೂತು ಬೋರ್‌ ಆಗುತ್ತಿದೆ ಆದ್ದರಿಂದ ಹೊರಗಡೆ ಹೋಗಿ ಸುತ್ತಾಡಿಕೊಂಡು ಬರುತ್ತೇವೆ ಎಂದು ಹೇಳಿ ಹೋದ ನವದಂಪತಿಯ ಹೇಮಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಮನಕಲಕುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ನಡೆದಿದೆ.

ಬೇಲೂರು ತಾಲೂಕು ಮುರಹಳ್ಳಿ ಗ್ರಾಮದ ಅರ್ಥೇಶ್ (27), ಹೆನ್ನಲಿ ಗ್ರಾಮದ ಕೃತಿಕಾ (23) ಮೃತ ನವ ದಂಪತಿ. ಎರಡು ತಿಂಗಳ ಹಿಂದೆಯಷ್ಟೆ ಮದುವೆಯಾಗಿತ್ತು. ಅರ್ಥೇಶ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಲಾಕ್‍ಡೌನ್ ಹಿನ್ನೆಲೆಯಲ್ಲಿ ತನ್ನ ಸ್ವಗ್ರಾಮ ಮುರಹಳ್ಳಿಗೆ  ಕೆಲವು ದಿನಗಳ ಹಿಂದಷ್ಟೆ ಬಂದಿದ್ದ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಬುಧವಾರ ಹೆನ್ನಲಿ ಗ್ರಾಮದಲ್ಲಿರುವ ಪತ್ನಿ ಕೃತಿಕಾ ಮನೆಗೆ ಹೋಗಿದ್ದ. ಗುರುವಾರ ಸಂಜೆ ದಂಪತಿ ತಿರುಗಾಡಿಕೊಂಡು ಬರುತ್ತೇವೆ ಎಂದು ಬೈಕ್‍ನಲ್ಲಿ ಹೊರ ಹೋಗಿದ್ದರು. ಆದರೆ ಸಂಜೆ ಆದರೂ  ಮನೆಗೆ ವಾಪಸ್ ಬರಲಿಲ್ಲವಲ್ಲ ಎಂದು ಮನೆಯವರು ಫೋನ್ ಮಾಡಿದ್ದಾರೆ. ಈ ವೇಳೆ ಇಬ್ಬರ ಮೊಬೈಲ್ ಫೋನ್‌ಗಳು ಸ್ಬಿಚ್ ಆಫ್ ಆಗಿದ್ದವು. ಗಾಬರಿಗೊಂಡ ಮನೆಯವರು ಅವರನ್ನು ಹುಡುಕಲು ಮುಂದಾಗಿ  ಹೇಮಾವತಿ ನದಿ ಸಮೀಪ ಬಂದಿದ್ದಾರೆ. ಈ ವೇಳೆ  ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದು ಕಾಣಿಸಿದೆ.

ಬೈಕ್‌ ನಿಲ್ಲಿಸಿದ್ದರಿಂದ ನದಿ ದಡದ ಬಳಿಗೆ ಹೋಗಿ ನೋಡಿದ್ದಾರೆ. ಆ ವೇಳೆ ನದಿಯಲ್ಲಿ ಮೀನುಗಾರರು ಹಾಕಿದ್ದ ಬಲೆಗೆ ಕೃತಿಕಾ, ಅರ್ಥೇಶ್ ಮೃತದೇಹ ಸಿಕ್ಕಿಕೊಂಡಿದ್ದು ಪತ್ತೆಯಾಗಿದೆ. ಆದರೆ ಈ ನವದಂಪತಿ ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ನದಿಯ ಬಳಿ ಸೆಲ್ಫಿ ತೆಗೆಯಲು ಹೋದಾಗ ಕಾಲು ಜಾರಿ ಬಿದ್ದು ಮೃತಪಟ್ಟಿರಬಹುದೆ ಇಲ್ಲ ಹೇಗೆ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಪೊಲೀಸರ ತನಿಖೆ ನಂತರ ಸತ್ಯಾಸತ್ಯತೆ  ತಿಳಿಯ ಬೇಕಿದೆ.

ಸ್ಥಳದಲ್ಲಿ ನವದಂಪತಿ ಶವವಾಗಿ ಬಿದ್ದಿರುವುದನ್ನು ನೋಡಿದ ಸಂಬಂಧಿಕರ  ಆಕ್ರಂದನ ಮುಗಿಲುಮುಟ್ಟುವಂತಿತ್ತು.

ವಿಷಯ ತಿಳಿದ ಸಕಲೇಶಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ  ಪರಿಶೀಲನೆ ನಡೆಸಿದರು. ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

1 Comment

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ