NEWSದೇಶ-ವಿದೇಶ

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಎಂಟು ಮಂದಿ ಸೋಂಕಿತರು ಮೃತ

ವಿಜಯಪಥ ಸಮಗ್ರ ಸುದ್ದಿ

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಗುರುವಾರ ಮುಂಜಾನೆ ಕೊರೊನಾ ಸೋಂಕಿತರಿದ್ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ  ಎಂಟು ಮಂದಿ ಮೃತಪಟ್ಟಿದ್ದಾರೆ.

ಮುಂಜಾನೆ 3 ಗಂಟೆ ಸುಮಾರಿಗೆ  ನವರಂಗಪುರ ಪ್ರದೇಶದ ಶ್ರೀ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ  ಎಂಟು ಅಗ್ನಿಶಾಮಕ, 10 ಆಂಬುಲೆನ್ಸ್‌ಗಳನ್ನು ಬಂದು ಕಾರ್ಯಾಚರಣೆ ನಡೆಸಿದವು ಅಷ್ಟಲ್ಲಾಗಲೇ  ಐಸಿಯು ವಾರ್ಡ್‌ನಲ್ಲಿದ್ದ  ಐವರು ಪುರುಷರು ಮತ್ತು ಮೂವರು ಮಹಿಳೆಯರು ಮೃತಪಟ್ಟಿದ್ದರು.

ಈ ವೇಳೆ ಇದ್ದ ಸುಮಾರು 45 ರೋಗಿಗಳನ್ನು  ರಕ್ಷಿಸಿ ನಗರದ ಸಾರ್ವಜನಿಕ ಆಸ್ಪತ್ರೆ  ಸರ್ದಾರ್ ವಲ್ಲಭಭಾಯಿ ಪಟೇಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರಿಸರ್ಚ್‌ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ತವರು ರಾಜ್ಯದಲ್ಲಿ ನಡೆದ ಸಾವುಗಳಿಗೆ ಸಂತಾಪ ಸೂಚಿಸಿದ್ದಾರೆ. ”  ಆಸ್ಪತ್ರೆಯ ಸಂಭವಿಸಿದ ಬೆಂಕಿ ದುರಂತದಿಂದ ದುಃಖಿತವಾಗಿದೆ. ದುಃಖಿತ ಕುಟುಂಬಗಳಿಗೆ ಸಂತಾಪ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಪರಿಸ್ಥಿತಿಯ ಬಗ್ಗೆ ಸಿಎಂ ವಿಜಯ್ ರೂಪಾನಿ  ಮತ್ತು ಮೇಯರ್  ಐಬಿಜಲ್‌ ಪಟೇಲ್  ಅವರೊಂದಿಗೆ ಮಾತನಾಡಿದ್ದೇನೆ. ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದೆ “ಎಂದು ಅವರು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

ಘಟನೆಯ ತನಿಖೆಗಾಗಿ ಗುಜರಾತ್ ಮುಖ್ಯ ಮಂತ್ರಿ ವಿಜಯ್ ರೂಪಾನಿ ಆದೇಶಿಸಿದ್ದು, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಗೀತ ಸಿಂಗ್ ನೇತೃತ್ವದಲ್ಲಿ  ತನಿಖೆ  ನಡೆಸಿ ಮೂರು ದಿನಗಳಲ್ಲಿ ವರದಿ  ನೀಡುವಂತೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.

“ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದ ಪ್ರಾಣ ಕಳೆದುಕೊಂಡವರ  ಕುಟುಂಬಕ್ಕೆ  ಪಿಎಂ ಫಂಡ್‌ನಿಂದ  ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು.   ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

ಇದುವರೆಗೆ 65,000 ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು,  ಭಾರತದ ಅತಿ ಹೆಚ್ಚು ಕೊರೊನಾ ಸೋಂಕಿತರಿರುವ 10 ರಾಜ್ಯಗಳಲ್ಲಿ ಗುಜರಾತ್ ಕೂಡ ಸೇರಿದೆ. ಈವರೆಗೆ ಸುಮಾರು 48,000 ರೋಗಿಗಳು ಚೇತರಿಸಿಕೊಂಡಿದ್ದಾರೆ.

ಭಾರತದಾದ್ಯಂತ, ಇದುವರೆಗೆ 19 ಲಕ್ಷಕ್ಕೂ ಹೆಚ್ಚು ಮಂದಿ ಕೊರೊನಾ ರೋಗದಿಂದ ಬಳಲುತ್ತಿದ್ದಾರೆ.  ಈ ಕಾಯಿಲೆಯಿಂದ 39,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್