NEWSದೇಶ-ವಿದೇಶ

ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಕರೆತರಲು ನೋಡೆಲ್ ಅಧಿಕಾರಿಗಳ ನೇಮಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿದೇಶದಲ್ಲಿ ನೆಲೆಸಿರುವ ಕರ್ನಾಟಕದವರು ರಾಜ್ಯಕ್ಕೆ ಬರಲು ಬಯಸಿದರೆ ಅವರನ್ನು ಕರೆತರಲು ಬೇಕಾದ ವ್ಯವಸ್ಥೆ ಮಾಡುವ ಸಲುವಾಗಿ ರಾಜ್ಯಸರ್ಕಾರ ನೋಡಲ್‌ ಅಧಿಕಾರಿಗಳನ್ನು ನೇಮಕಮಾಡಿದೆ.

ಹಲವು ಭಾರತೀಯರು ವಿದೇಶಗಳಲ್ಲಿ ವ್ಯಾಸಂಗ ಇಲ್ಲವೆ ಕೆಲಸವನ್ನು ಮಾಡುತ್ತಿದ್ದು, ಈಗ ಕೋವಿಡ್‌-19 ಮಹಾಮಾರಿಯಿಂದ ತಮ್ಮ ಸ್ವದೇಶಕ್ಕೆ ಮರಳಲು ಸಾಧ್ಯವಾಗದೆ ಆತಂಕದಲ್ಲಿದ್ದಾರೆ.  ಅಲ್ಲದೆ ಭಾರತಕ್ಕೆ ಮರಳಲು ಯಾವುದೇ ಪ್ಯಾಸೆಂಜರ್ ವಿಮಾನ ಸಹ ಇಲ್ಲವಾಗಿದೆ. ಈ ನಿಟ್ಟಿನಲ್ಲಿ ಅಂತಹವರಿಗೆ ಸಹಾಯಹಸ್ತ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ವಿದೇಶದಲ್ಲಿ ಸಿಲುಕಿರುವವರ ಸಮಗ್ರ ಮಾಹಿತಿಯನ್ನು ಆಯಾ ದೇಶದ ರಾಯಭಾರಿಗಳನ್ನು ಸಂಪರ್ಕಿಸಿ ಪದೆದುಕೊಳ್ಳಲಾಗುತ್ತಿದೆ.

ವಿದೇಶಲ್ಲಿ ನೆಲಸಿರುವ ಭರತೀಯ ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥರು ಕರ್ನಾಟಕಕ್ಕೆ ಮರಳಲು ಅನುಕೂಲವಾಗುವಂತೆ ವಿಕೋಪ ನಿರ್ವಹಣಾ ಕಾಯ್ದೆ-2005ರನ್ವಯ ರಾಜ್ಯ ಸರ್ಕಾರ ನೋಡಲ್ ಅಧಿಕಾರಿಗಳಾಗಿ 1)ಉಮೇಶ್ ಕುಮಾರ್ , ಐ.ಪಿ.ಎಸ್ 2) ಸಿ.ಎನ್.ಮೀನಾ ನಾಗರಾಜ್, ಐ.ಎ.ಎಸ್ ಇವರನ್ನು ಕೇಂದ್ರ, ರಾಜ್ಯ ಸರ್ಕಾರಗಳ ಸಮನ್ವಯದಲ್ಲಿ ಕೆಲಸ ನಿರ್ವಹಿಸಲು ನೇಮಿಸಿದೆ.

ಈ ಸಂಬಂಧ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳಿಗೆ ಎಲ್ಲಾ ಜಿಲ್ಲಾಡಳಿತಗಳು ಹಾಗೂ ಸಂಬಂಧಿಸಿದ ಇತರ ಇಲಾಖೆಗಳು ಸಹಕಾರ ನೀಡುವಂತೆ ಸೂಚಿಸಲಾಗಿದೆ ಎಂದು ಸರ್ಕಾರದ ಪ್ರಧಾನ  ಕಾರ್ಯದರ್ಶಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

1 Comment

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...