CrimeNEWSನಮ್ಮರಾಜ್ಯ

ಎಟಿಎಂಗೆ ತುಂಬಬೇಕಿದ್ದ 64 ಲಕ್ಷ ರೂ.ಕದ್ದು ಎಸ್ಕೇಪ್‌ ಆಗಿದ್ದವನ ಬಂಧನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಎಟಿಎಂ ಹಣ ಕದ್ದು ಅತ್ತೆ ಮಗಳೊಂದಿಗೆ ಪರಾರಿಯಾಗಿದ್ದ ಎಟಿಎಂಗೆ ಹಣ ತುಂಬುವ ವಾಹನ ಚಾಲಕನನ್ನು ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ಮೂಲದ ಯೋಗೇಶ್‌ ಬಂಧಿತ ಆರೋಪಿ. ಈತ ಫೆಬ್ರವರಿ 3ರಂದು ಎಟಿಎಂ ಹಣ ಕದ್ದು ಅತ್ತೆ ಮಗಳೊಂದಿಗೆ ಎಸ್ಕೇಪ್ ಆಗಿದ್ದ. ಸೆಕ್ಯೂರ್ ವ್ಯಾಲ್ಯೂ ಏಜೆನ್ಸಿಯಲ್ಲಿ ಡ್ರೈವರ್ ಆಗಿದ್ದ ಆರೋಪಿ ಎಟಿಎಂಗೆ ತುಂಬಿಸಬೇಕಿದ್ದ 64 ಲಕ್ಷ ಹಣದೊಂದಿಗೆ ಪರಾರಿಯಾಗಿ, ಬಳಿಕ ಸ್ನೇಹಿತರನ್ನು ಸಂಪರ್ಕಿಸಿದ್ದ. ಸ್ನೇಹಿತರು ನೆರವಿಗೆ ಬಾರದ ಹಿನ್ನೆಲೆಯಲ್ಲಿ ತನ್ನ ಮನೆಯಲ್ಲೇ ಉಳಿದುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈತನಿಗೆ ಹೆಂಡತಿ-ಮಕ್ಕಳಿದ್ದರೂ ಅತ್ತೆ ಮಗಳ ಜೊತೆ ಹಣದೊಂದಿಗೆ ಎಸ್ಕೇಪ್ ಆಗಿದ್ದ. ಮೈಸೂರಿನಲ್ಲಿ ಸ್ನೇಹಿತರ ಜೊತೆ ಸಂಪರ್ಕದಲ್ಲಿದ್ದಾಗ ಬಲೆಗೆ ಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದು, ಸದ್ಯ ಆತನ ಬಳಿ ಕೇವಲ 15 ಸಾವಿರ ರೂ. ಮಾತ್ರ ಇತ್ತು. ಹೀಗಾಗಿ 64 ಲಕ್ಷ ರೂ.ಗಳಲ್ಲಿ ಕೇವಲ 15 ಸಾವಿರ ರೂ.ಗಳು ಸಿಕ್ಕಿದ್ದು ಉಳಿದ ಹಣ ಏನಾಯಿತು ಎಂಬ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಎಟಿಎಂಗಳಿಗೆ ಹಣ ತುಂಬಿಸುವ ಗುತ್ತಿಗೆ ಪಡೆದಿರುವ ಸೆಕ್ಯೂರ್ ವ್ಯಾಲ್ಯೂ ಏಜೆನ್ಸಿ ಬೆಂಗಳೂರಿನ ನವರಂಗ್‌ ಬಳಿಯ ಎಟಿಎಂಗೆ ಹಣ ತುಂಬಿಸಲು ಸಿಬ್ಬಂದಿಯೊಂದಿಗೆ ವಾಹನ ಚಾಲಕ ಆರೋಪಿ ಯೋಗೇಶ್‌ ನನ್ನು ಕಳುಹಿಸಲಾಗಿತ್ತು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್