NEWSನಮ್ಮರಾಜ್ಯಲೇಖನಗಳು

ಆದಾಯವೃದ್ಧಿಗೆ ಯಾವುದೇ ಯೋಜನೆಗಳಿಲ್ಲದೆ ನಿರರ್ಥಕ ಬಿಬಿಎಂಪಿ ಬಜೆಟ್‌ ಮಂಡನೆ: ಮೋಹನ್ ದಾಸರಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಬಿಬಿಎಂಪಿ ಮಂಡಿಸಿರುವ ಬಜೆಟ್ ನಲ್ಲಿ ತನ್ನ ಆದಾಯ ವೃದ್ಧಿಗೆ ಯಾವುದೇ ಯೋಜನೆಗಳಿಲ್ಲದೆ, ನಿರರ್ಥಕ ಬಜೆಟ್ ಇದಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ ಕಳವಳ ವ್ಯಕ್ತಪಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಂದು ಮಂಡಿಸಿದ 2020 -2021ನೇ ಸಾಲಿನ ಬಜೆಟ್‌ ಕುರಿತು ಮಾತನಾಡಿರುವ ಅವರು, ಸಾರ್ವಜನಿಕರ ಅನುಕೂಲ ದೃಷ್ಟಿಯಲ್ಲಿ ಎ ಖಾತೆಗಳನ್ನು ಹಂಚುತ್ತೇವೆ ಎಂದು ಯಾವುದೇ ಮಾರ್ಗಸೂಚಿಗಳಿಲ್ಲದೆ ಘೋಷಿಸಿರುವುದು ಕೇವಲ ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ತನ್ನ ಪರಮ ಭ್ರಷ್ಟಾಚಾರದಿಂದ ಪ್ರತಿವರ್ಷ ವಾರ್ಷಿಕ ಲೆಕ್ಕ ಪರಿಶೋಧನೆಯಲ್ಲಿ ಸಾಕಷ್ಟು ಲೋಪಗಳು ಇದ್ದು ಇದುವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ ಹಾಗೂ ಅವರಿಂದ 1ರೂಪಾಯಿಯ ವಸೂಲಿಯೂ ಸಹ ಆಗಿಲ್ಲ. ಈ ಕರ್ಮಕಾಂಡ ಗಳಿಗೆಲ್ಲಾ ಅಧಿಕೃತ ಮುದ್ರೆ ಹಾಕುವಂತೆ ತನ್ನದೇ ಆದ ಆಂತರಿಕ ಲೆಕ್ಕಪರಿಶೋಧನಾ ವಿಭಾಗವನ್ನು ಘೋಷಿಸಿರುವುದು ಭ್ರಷ್ಟಾಚಾರಿಗಳಿಗೆ ಕ್ಲೀನ್ ಚಿಟ್ ಕೊಡುವ ಉದ್ದೇಶವಾಗಿದೆ ಎಂದಿದ್ದಾರೆ.

ಜಾಹೀರಾತು, ಮಾರುಕಟ್ಟೆ ಕಟ್ಟಡಗಳ ಬಾಡಿಗೆ ವಸೂಲಿಯಲ್ಲಿ ತನ್ನ ಆದಾಯವನ್ನು ವೃದ್ಧಿಸಿಕೊಳ್ಳುವ ದಿಸೆಯಲ್ಲಿ ಯಾವುದೇ ಕ್ರಿಯಾತ್ಮಕ -ದಿಟ್ಟ ಯೋಜನೆಗಳು ಕಾಣಸಿಗುವುದಿಲ್ಲ. ಕೇವಲ ಪುಡಿಗಾಸು 38 ಕೋಟಿ ರೂ.ಗಳಿಗಷ್ಟೇ ಸಮಾಧಾನ ಪಟ್ಟುಕೊಂಡಿದೆ.

ಈಗಾಗಲೇ ಬಿಬಿಎಂಪಿಯು ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ನಲ್ಲಿ ಬಿಬಿಎಂಪಿಯ ಪರಮ ಭ್ರಷ್ಟಾಚಾರದಿಂದ ದೇಶದಲ್ಲಿಯೇ ಅತ್ಯಂತ ಕಡೆಯ ಸ್ಥಾನದಲ್ಲಿದೆ. ತಂತ್ರಾಂಶಗಳ ಅಭಿವೃದ್ಧಿಯ ಹೆಸರಿನಲ್ಲಿ ಈಗಾಗಲೇ ನೂರಾರು ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದೆ. ಇವುಗಳ ಸುಧಾರಣೆಯಲ್ಲಿ ಐಟಿ ಸಿಟಿ ಎಂದೇ ಖ್ಯಾತರಾಗಿರುವ ಬೆಂಗಳೂರಿಗರಿಗೆ ಯಾವುದೇ ತತ್ರಾಂಶಗಳ ಅನುಕೂಲ ಮಾಡಿಕೊಡುವಂತಹ ಯೋಜನೆಗಳು ಲಭ್ಯವಿಲ್ಲದಿರುವುದು ಈ ಬಜೆಟ್ ನಲ್ಲಿ ಕಂಡುಬರುತ್ತದೆ.

ಈಗಾಗಲೇ ರಾಜ್ಯ ಸರ್ಕಾರವು ಘನತ್ಯಾಜ್ಯ ನಿರ್ವಹಣೆಗಾಗಿ ಪ್ರತ್ಯೇಕ ಕಂಪೆನಿಯನ್ನು ಮಾಡಿಕೊಂಡಿದೆ. ಆದರೆ ರಾಜ್ಯ ಸರ್ಕಾರವು ಈ ಬಗ್ಗೆ ಯಾವುದೇ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಆದರೆ ಬಿಬಿಎಂಪಿಯು 1622 ಕೋಟಿಗಳನ್ನು ತನ್ನ ಆಯವ್ಯಯದಲ್ಲಿ ಒದಗಿಸಿರುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ.ಇಷ್ಟೊಂದು ಬೃಹತ್ ಹಣವನ್ನು ಎಲ್ಲಿಂದ ಹೊಂದಿಸುತ್ತದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ. ರಾಜ್ಯ ಸರ್ಕಾರದ ಹೊಣೆಗೇಡಿತನ ಸ್ಪಷ್ಟವಾಗಿ ಕಂಡುಬರುತ್ತದೆ.

ಪಾಲಿಕೆಯ ಶಾಲಾ ಕಾಲೇಜುಗಳಿಗೆ ಕಟ್ಟಡಗಳ ಮೂಲಭೂತ ಸೌಕರ್ಯ ಒದಗಿಸುವಿಕೆಯಲ್ಲಿ ಹಾಗೂ ಶಿಕ್ಷಣ ಗುಣಮಟ್ಟವನ್ನು ಕಾಪಾಡಿಕೊಳ್ಳುವಲ್ಲಿ ಯಾವುದೇ ವಿನೂತನ ಯೋಜನೆಗಳಿಲ್ಲದೆ ಖಾಸಗಿ ಶಾಲೆಗಳ ದಂಧೆಗೆ ನೇರವಾಗಿ ಪ್ರೋತ್ಸಾಹಿಸುವ ಹೀನಾತಿಹೀನ ಬಜೆಟ್ ಇದಾಗಿದೆ.

ಇದೇ ರೀತಿ ಆರೋಗ್ಯ ಕ್ಷೇತ್ರದಲ್ಲಿಯೂ ಸಹ ಈ ಬಜೆಟ್ ಸಂಪೂರ್ಣ ವೈಫಲ್ಯಗೊಂಡಿದೆ. ಬಿಬಿಎಂಪಿ ರೆಫರಲ್ ಆಸ್ಪತ್ರೆಗಳು, ಹೆರಿಗೆ ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ ಹಾಗೂ ಸುಧಾರಣೆಗೆ ಯಾವುದೇ ಯೋಜನೆಗಳಿಲ್ಲದೆ, ಖಾಸಗಿ ಆಸ್ಪತ್ರೆಗಳ ಲಾಬಿಗೆ ಮಣಿದಿರು ವಂತಿದೆ.

ಉದ್ಯಾನಗಳ ,ಪಾದಚಾರಿ ಮಾರ್ಗಗಳ ನಿರ್ವಹಣೆಗಾಗಿ ಘೋಷಿಸಿರುವ ಯೋಜನೆಗಳು ಸಂಪೂರ್ಣವಾಗಿ ಸ್ಥಳೀಯ ಶಾಸಕರುಗಳ ಹಿಂಬಾಲಕರಿಗೆ ಅನುಕೂಲ ಮಾಡುವ ರೀತಿಯಲ್ಲಿ ಇದೆ.

ಈ ಬಜೆಟ್ ನಲ್ಲಿ ಹೊಸ ಕಾಮಗಾರಿಗಳಿಗೆ ಯಾವುದೇ ಪ್ರಸ್ತಾವನೆ ಇಲ್ಲ. ಈ ಮೂಲಕ ಬಿಬಿಎಂಪಿಯು ತನ್ನ ಆದಾಯ ವೃದ್ಧಿಗೆ ಯಾವುದೇ ದಿಟ್ಟ ಕ್ರಮಗಳನ್ನು ಘೋಷಿಸದೆ ಕೇವಲ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಅನುದಾನಗಳಿಗಾಗಿ ಭಿಕ್ಷೆ ಬೇಡುವಂತಹ ಬಜೆಟ್ ಇದಾಗಿದೆ ಎಂದು ಮೋಹನ್ ದಾಸರಿ ನೇರವಾಗಿ ಆರೋಪಿಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ