NEWSನಮ್ಮಜಿಲ್ಲೆ

ಮುಧೋಳದಲ್ಲಿ 15 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಜಿಲ್ಲೆಯ ಮುಧೋಳದಲ್ಲಿ 15 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 68 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಮುಧೋಳದ 55 ವರ್ಷದ ಪಿ-865 ವ್ಯಕ್ತಿಗೆ ನೆಗಡಿ, ಕೆಮ್ಮು, ಜ್ವರ (ಐ.ಎಲ್.ಐ) ಹಿನ್ನಲೆಯಲ್ಲಿ ಸೋಂಕು ದೃಢಪಟ್ಟರೆ, ಇನ್ನು 16 ವರ್ಷದ ಪಿ-870, 14 ವರ್ಷದ ಪಿ-871, 33 ವರ್ಷದ ಪಿ-872, 21 ವರ್ಷದ ಪಿ-873, 19 ವರ್ಷದ ಪಿ-874, ಪಿ-875, 34 ವರ್ಷದ ಪಿ-876, 30 ವರ್ಷದ ಪಿ-893, 17 ವರ್ಷದ ಪಿ-894, 32 ವರ್ಷದ ಪಿ-895, 20 ವರ್ಷದ ಪಿ-896, 18 ವರ್ಷದ ಪಿ-897, 29 ವರ್ಷದ ಪಿ-898, 80 ವರ್ಷದ ವೃದ್ಧ ಪಿ-899 ಸೋಂಕು ದೃಢಪಟ್ಟಿದ್ದು, ಇವರಿಗೆ ಅಹಮದಾಬಾದ್, ಗುಜರಾತ ಪ್ರಯಾಣದ ಹಿನ್ನ್ನನೆಯಲ್ಲಿ ಸೋಂಕು ದೃಢಪಟ್ಟಿರುವುದಾಗಿ ವರದಿಯಾಗಿದೆ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 52 ಸ್ಯಾಂಪಲ್‍ಗಳ ಪೈಕಿ 15 ಪಾಜಿಟಿವ್ ಪ್ರಕರಣ, 36 ನೆಗಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಿಂದ ಹೊಸದಾಗಿ ಮತ್ತೆ 65 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ರವಾನಿಸಿರುವುದಾಗಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಕ್ವಾರಂಟೈನಲ್ಲಿ 938, ಇನ್ಟ್ಸಿಟ್ಯೂಶನ್ ಕ್ವಾರಂಟೈನ್‍ನಲ್ಲಿ ಒಟ್ಟು 409 ಜನ ಇದ್ದಾರೆ. ಇಲ್ಲಿಯವರೆಗೆ ಕಳುಹಿಸಲಾದ ಒಟ್ಟು ಸ್ಯಾಂಪಲ್ 4395. ಈ ಪೈಕಿ 4247 ನೆಗಟಿವ್ ಪ್ರಕರಣ, 68 ಪಾಜಿಟಿವ್ ಪ್ರಕರಣ, ಒಂದು ಮೃತ ಪ್ರಕರಣ ವರದಿಯಾಗಿವೆ ಎಂದು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಜಿಲ್ಲೆಯಲ್ಲಿ ಇಲ್ಲಿವರೆಗೆ ಬಾಗಲಕೋಟೆ ತಾಲೂಕಿನಲ್ಲಿ 15, ಮುಧೋಳದಲ್ಲಿ 24, ಜಮಖಂಡಿಯಲ್ಲಿ 10, ಬಾದಾಮಿಯಲ್ಲಿ 18 ಹಾಗೂ ಬನಹಟ್ಟಿಯಲ್ಲಿ 1 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿವರೆಗೆ ಒಟ್ಟು ಕೋವಿಡ್‍ನಿಂದ 27 ಜನ ಗುಣಮುಖರಾಗಿದ್ದು, 40 ಜನ ಇನ್ನು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಸ್ಯಾಂಪಲ್‍ಗಳು ರಿಜೆಕ್ಟ್ ಆಗಿದ್ದು, 14 ದಿನಗಳ ಇನ್ಟ್ಸಿಟ್ಯೂಶನ್ ಕ್ವಾರಂಟೈನ್‍ನಿಂದ ಒಟ್ಟು 264 ಜನರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ 12 ಕಂಟೈನ್‍ಮೆಂಟ್ ಝೋನ್‍ಗಳು ಇರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...