NEWSನಮ್ಮಜಿಲ್ಲೆರಾಜಕೀಯ

ಬಿಬಿಎಂಪಿ ಅಧಿಕಾರ ಕಸಿದು ನೇರ ಲೂಟಿಗೆ ಮುಂದಾಗುತ್ತಿದೆ ಸರ್ಕಾರ : ಮೋಹನ್ ದಾಸರಿ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರ ತಂದಿರುವ ಬಿಬಿಎಂಪಿ ನೂತನ ವಿಧೇಯಕ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರವನ್ನು ಅಡಗಿಸುವ ಹಾಗೂ ನಿಧಾನಕ್ಕೆ ಕಸಿಯುವ ಹುನ್ನಾರವಾಗಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದ್ದಾರೆ.

ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನೇಕ ದೇಶಗಳು ತಮ್ಮ ಒಟ್ಟು ಬಜೆಟ್ಟಿನ ಶೇ. 27 ರಷ್ಟು ಹಣವನ್ನು ಮೀಸಲಿಟ್ಟು ಸ್ಥಳೀಯ ಸಂಸ್ಥೆಗಳ ಮೂಲಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತವೆ. ಆದರೆ ಈ ದೂರ್ತ ಬಿಜೆಪಿ ಸರ್ಕಾರ ಸ್ಥಳೀಯ ಸಂಸ್ಥೆಗಳ ಅಧಿಕಾರವನ್ನೇ ಕಿತ್ತುಕೊಂಡು ಇಲ್ಲೂ ವ್ಯಾಪಕವಾದ ಲೂಟಿಗೆ ದಾರಿ ಮಾಡಿಕೊಟ್ಟಿದೆ ಎಂದು ದೂರಿದರು.

ಪಾಲಿಕೆ ಸದಸ್ಯರ ಆಸ್ತಿ ವಿವರವನ್ನು ಮೇಯರ್‌ಗೆ ಸಲ್ಲಿಸಬೇಕು ಎಂದು ಹೇಳಿ ಸದಸ್ಯರನ್ನು ರಕ್ಷಿಸುವ ಹುನ್ನಾರ ಅಡಗಿದೆ. ಲೋಕಾಯುಕ್ತ, ಸರ್ಕಾರದ ಮುಖ್ಯ ಪ್ರಧಾನ ಕಾರ್ಯದರ್ಶಿಗಳಿಗೆ ಆಸ್ತಿ ವಿವರವನ್ನು ಪ್ರತಿ ವರ್ಷ ಕಡ್ಡಾಯವಾಗಿ ಸಲ್ಲಿಸದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎನ್ನುವ ಅಂಶವನ್ನು ಸೇರಿಸಬೇಕು. ಕಳೆದ ಬಾರಿ 120 ಕ್ಕೂ ಹೆಚ್ಚು ಸದಸ್ಯರು ಆಸ್ತಿ ವಿವರ ಸಲ್ಲಿಸದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.

ಶಾಸಕರ, ಸಂಸದರ ಚೇಲಾಗಳು, ಪಕ್ಷದಗಳಲ್ಲಿ ಇರುವ ಅತೃಪ್ತರನ್ನು ತೃಪ್ತಿ ಪಡಿಸಲು 15 ವಲಯಗಳಾಗಿ ವಿಂಗಡಿಸಿ ವ್ಯಾಪಕ ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವಲಯ ಉಸ್ತುವಾರಿಗಳಿಗೆ ಪ್ರತ್ಯೇಕ ಕಚೇರಿ, ಸಿಬ್ಬಂದಿ ಎಂದು ಹೇಳಿ ಜನರ ದುಡ್ಡನ್ನ ವ್ಯರ್ಥವಾಗಿ ಖರ್ಚು ಮಾಡಲು ಸರ್ಕಾರ ಹೊರಟಿದೆ. ಆದ ಕಾರಣ ಈ ವಲಯಗಳನ್ನು 8 ಕ್ಕೆ ಇಳಿಸಬೇಕು ಎಂದರು.

ಎರಡು ಹುದ್ದೆಗಳಲ್ಲಿ ಇರುವವರು ಯಾವ ಸ್ಥಾನವನ್ನು ಉಳಿಸಿಕೊಳ್ಳಬೇಕು ಎನ್ನುವುದನ್ನು 3 ದಿನಗಳಲ್ಲಿ ತಿಳಿಸಬೇಕು ಎಂದು ಆಯ್ಕೆ ಕೊಟ್ಟಿರುವುದು ನೋಡಿದರೆ ಚುನಾವಣೆ ಎನ್ನುವುದು ಮಕ್ಕಳಾಟವೇ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಈ ಬಾಲಿಶ ತಿದ್ದುಪಡಿಯನ್ನು ತೆಗೆದು ಹಾಕಿ ಒಬ್ಬ ವ್ಯಕ್ತಿ ಒಂದೇ ಕಡೆ ಮಾತ್ರ ಸ್ಪರ್ಧಿಸಬೇಕು ಎಂದು ಹೇಳಿದರು.

ಬೆಂಗಳೂರು ಉಪಾಧ್ಯಕ್ಷ ಸುರೇಶ್ ರಾಥೋಡ್ ಮಾತನಾಡಿ, ಕಸ ನಿರ್ವಹಣೆ ಹಾಗೂ ಇತರೆ ಪ್ರಾಥಮಿಕ ಜವಾಬ್ದಾರಿಗಳಿಂದ ಬಿಬಿಎಂಪಿಯನ್ನು ಹೊರಗಿಡಲಾಗುತ್ತಿದೆ ಇದನ್ನು ಹಿಂಪಡೆದು, ಕಸ ನಿರ್ವಹಣೆಯಂತಹ ಪ್ರಮುಖ ಜವಾಬ್ದಾರಿಗಳನ್ನು ಪ್ರಮುಖ ಕರ್ತವ್ಯಗಳೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್