NEWSನಮ್ಮರಾಜ್ಯರಾಜಕೀಯ

ದಯಮಾಡಿ ಮಹಾನಗರ ತೊರೆಯದಿರಿ ಮಹಾಜನರೆ: ಸಿಎಂ ಬಿಎಸ್‌ವೈ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿಮಗೆ ಬೇಕಾದ ಎಲ್ಲಾ ರೀತಿಯ ಸೌಲಭ್ಯವನ್ನು ಮಾಡಿಕೊಡುತ್ತೇವೆ ದಯಮಾಡಿ ಮಹಾನಗರವನ್ನು ತೊರೆಯಬೇಡಿ ಮಹಾಜನರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಕಾರಣ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಬೆಂಗಳೂರಿನಲ್ಲಿ ಮುಂದುವರಿಸಿರುವುದರಿಂದ ಜನರು ಭಯಭೀತರಾಗಿದ್ದಾರೆ, ಮತ್ತೊಂದು ಕಡೆ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಬಿಬಿಎಂಪಿ ಮತ್ತು ಸರ್ಕಾರ ವಿಫಲವಾಗಿರುವುದರಿಂದ ಜನರು ನಗರವನ್ನು ತೊರೆಯುತ್ತಿದ್ದಾರೆ.

ಇದನ್ನು ಮಗಗಂಡ ಸಿಎಂ ಬಿಎಸ್‌ವೈ ನೀವು ನಗರವನ್ನು ತೊರೆಯಬೇಡಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಇಲ್ಲೇ ಇರಿ. ಕೊರೊನಾ ಪೀಡಿತರಿಗೆ ಈಗಾಗಲೇ 10 ಸಾವಿರ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆದರೆ ವಾಸ್ತವದಲ್ಲಿ ಕೊರೊನಾ ಪೀಡಿತರನ್ನು ಸಮಯಕ್ಕೆ ಸರಿಯಾಗಿ ಕೋವಿಡ್‌ ಆಸ್ಪತ್ರೆಗೆ ದಾಖಲಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ಎಡವಿದ್ದು, ಸೂಕ್ತ ಚಿಕಿತ್ಸೆ ಸಿಗದೆ ಈಗಾಗಲೇ 10ಕ್ಕೂ ಹೆಚ್ಚು ಮಂದಿ ತಮ್ಮ ಪ್ರಾಣವನ್ನು ಕಳೆದುಕೋಮಡಿದ್ದಾರೆ.

ಇಷ್ಟಾದರೂ ಸರ್ಕಾರ ನಾವು ಸೂಕ್ತ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವೆ ಎಂದಷ್ಟೆ ಬೊಗಳೆ ಬಿಡುತ್ತಿದೆ. ಇದನ್ನು ಕೇಳಿಸಿಕೊಂಡು ಕೂರಲು ಜನರೇನು ದಡ್ಡರೆ ಎಂದು ಸಾಮಾನ್ಯರು ಕೂಡ ಮಾತನಾಡಿಕೊಳ್ಳುತ್ತಿದ್ದಾರೆ.

ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಕೊರೊನಾ ಪಾಸಿಟಿವ್‌ ಎಂದು ತಿಳಿದು ಬಂದ ಕೂಡಲೇ ಅವರನ್ನು ಕೋವಿಡ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲು ಮುಂದಾಗಬೇಕಿದೆ. ಇಲ್ಲದಿದ್ದರೆ ಬೆಂಗಳೂರಿನಲ್ಲಿ ಈ ಹಿಂದೆ ಇದ್ದ 1.20 ಕೋಟಿ ಜನರಲ್ಲಿ ಈಗಾಗಲೇ ಅರ್ಧಕ್ಕರ್ಧ ಮಂದಿ ನಗರವನ್ನು ತೊರೆದಿದ್ದು, ಇನ್ನೂ ಹಲವರು ತೊರೆಯುತ್ತಿದ್ದಾರೆ. ಅವರನ್ನು ತಡೆದು ನಿಲ್ಲಿಸಬೇಕಾದರೆ ನೀವು ಮೊದಲು ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

ಹೀಗಾಗಿ ಸರ್ಕಾರ ಎಚ್ಚರಿಕೆ ವಹಿಸುವುದು ಇಂದಿನ ಅಗತ್ಯಗಳಲ್ಲಿ ಇದು ಕೂಡ ಪ್ರಮುಖವಾದದ್ದಾಗಿದೆ. ಇಲ್ಲದಿದ್ದರೆ ಮುಂದಿನ ಆಗಸ್ಟ್‌ 15ರ ವೇಳೆಗೆ ನಗರದಲ್ಲಿ 50 ಲಕ್ಷ ಜನರೂ ಕೂಡ ಇರುವುದಿಲ್ಲ ಎಂಬುದರ ಬಗ್ಗೆ ಗಮನವಿರಲಿ.

1 Comment

  • Inna en maadoke aguthe heli ivaranella nambhikondu idre sayli bidi anthare olle kelsa madtha iddare madli bidi

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ